ಅತೃಪ್ತಿಗೆ ಕಾರಣ ಗೊತ್ತಿಲ್ಲ: ಸತೀಶ್‌ ಜಾರಕಿಹೊಳಿ

Published : Feb 11, 2019, 08:20 AM IST
ಅತೃಪ್ತಿಗೆ ಕಾರಣ ಗೊತ್ತಿಲ್ಲ: ಸತೀಶ್‌ ಜಾರಕಿಹೊಳಿ

ಸಾರಾಂಶ

ಅತೃಪ್ತ ಶಾಸಕರ ಸಂಪರ್ಕವೂ ಸಾಧ್ಯವಾಗುತ್ತಿಲ್ಲ ಮತ್ತು ಅವರ ಬೇಡಿಕೆ ಏನೆಂಬುದೂ ತಿಳಿಯುತ್ತಿಲ್ಲ: ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ[ಫೆ.11]: ಮುಂಬೈನಲ್ಲಿ ಬೀಡುಬಿಟ್ಟಿರುವ ಅತೃಪ್ತ ಶಾಸಕರ ಸಂಪರ್ಕವೂ ಸಾಧ್ಯವಾಗುತ್ತಿಲ್ಲ ಮತ್ತು ಅವರ ಬೇಡಿಕೆ ಏನೆಂಬುದೂ ತಿಳಿಯುತ್ತಿಲ್ಲ ಎಂದು ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತಿಗೆ ಕಾರಣ ಏನೆಂಬುದು ತಿಳಿಯುವವರೆಗೆ ಅವರ ಜತೆ ಚರ್ಚೆ ಮಾಡಲು ಸಾಧ್ಯವಿಲ್ಲ. ಮುಂಬೈಯಿಂದ ಬಂದರೆ ಮಾತ್ರ ಅದಕ್ಕೆ ಪರಿಹಾರ ಕಂಡುಕೊಳ್ಳಬಹುದು. ಅತೃಪ್ತರ ವಿರುದ್ಧ ಕ್ರಮಕ್ಕೆ ನಿಯಮವಿದ್ದು, ಓರ್ವ ಶಾಸಕನನ್ನು ಪಕ್ಷದಿಂದ ತೆಗೆದುಹಾಕುವುದು ಅಷ್ಟುಸುಲಭದ ಕೆಲಸವಲ್ಲ. ಕಾನೂನು ರೀತಿ ಅವರ ವಿರುದ್ಧ ವರಿಷ್ಠರು ಕ್ರಮ ತೆಗೆದುಕೊಳ್ಳುತ್ತಾರೆ. ಅದಕ್ಕೆ ಸಮಯಬೇಕು ಹೊರತು, ತಕ್ಷಣ ಮಾಡಲು ಆಗುವುದಿಲ್ಲ ಎಂದಿದ್ದಾರೆ.

ಇನ್ನು ಅತೃಪ್ತರು ಯಾವಾಗ ಬೇಕಾದರೂ ಬಂದು ಮಾತಾಡಬಹುದು ಎಂದು ನಮ್ಮ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಬಿ.ಸಿ.ಪಾಟೀಲ ಮಾತನಾಡಿದ್ದಾರೆ. ಮುಂಬೈನಲ್ಲಿರುವ ಜೆಡಿಎಸ್‌ ಶಾಸಕ ನಾರಾಯಣಗೌಡ ಮಾತನಾಡಿದ್ದಾರೆ. ಉಳಿದವರೂ ಮಾತನಾಡಬಹುದು. ಬಿಜೆಪಿಯವರು ಎಷ್ಟುಹಣ ಕೊಟ್ಟು ಶಾಸಕರನ್ನು ಖರೀದಿಸಿದ್ದಾರೆ ಎಂಬುವುದು ನನಗೆ ಗೊತ್ತಿಲ್ಲ. ಆದರೆ, ಶಾಸಕರು ಮುಂಬೈಗೆ ಹೋಗಿದ್ದು ಮತ್ತು ಕೆಲವು ಶಾಸಕರು ಬಿಜೆಪಿ ಸಂಪರ್ಕದಲ್ಲಿರುವುದು ಸತ್ಯ. ಅದರಲ್ಲಿ ಬಹುತೇಕರು ವಾಪಸ್‌ ಬಂದಿದ್ದಾರೆ. ನಮಗೆ ಯಾವುದೇ ಭಯವಿಲ್ಲ. ಸಮ್ಮಿಶ್ರ ಸರ್ಕಾರ ಸೇಫ್‌ ಆಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!