ನಾನು ಮತ್ತೆ ಬಿಜೆಪಿಗೆ ಹೋಗುವ ಅಗತ್ಯವಿಲ್ಲ: ಶಾಸಕ ಲಕ್ಷ್ಮಣ ಸವದಿ ಸ್ಪಷ್ಟನೆ

Published : Mar 07, 2024, 06:27 PM IST
ನಾನು ಮತ್ತೆ ಬಿಜೆಪಿಗೆ ಹೋಗುವ ಅಗತ್ಯವಿಲ್ಲ: ಶಾಸಕ ಲಕ್ಷ್ಮಣ ಸವದಿ ಸ್ಪಷ್ಟನೆ

ಸಾರಾಂಶ

ಮಾಜಿ ಸಿಎಂ ಜಗದೀಶ ಶೆಟ್ಟರ ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಅವರು ಕೂಡಾ ಅವರ ಹಾದಿಯಲ್ಲಿ ನಡೆಯುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿದೆ. ನಾನು ಮತ್ತೆ ಬಿಜೆಪಿಗೆ ಹೋಗುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.   

ಅಥಣಿ (ಮಾ.07): ಮಾಜಿ ಸಿಎಂ ಜಗದೀಶ ಶೆಟ್ಟರ ಕಾಂಗ್ರೆಸ್ ಪಕ್ಷ ತೊರೆದು ಮತ್ತೆ ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಅವರು ಕೂಡಾ ಅವರ ಹಾದಿಯಲ್ಲಿ ನಡೆಯುತ್ತಾರೆ ಎಂಬ ಊಹಾಪೋಹಗಳು ಹೆಚ್ಚಾಗಿದೆ. ನಾನು ಮತ್ತೆ ಬಿಜೆಪಿಗೆ ಹೋಗುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಶಂಕು ಸ್ಥಾಪನೆಯ ಸಮಾರಂಭದ ಸಿದ್ಧತೆ ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ ಅವರು ಅಥಣಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಕೇಳಿದಂತೆ ಅಭಿವೃದ್ಧಿ ಅನುದಾನ ಒದಗಿಸುತ್ತಿದ್ದಾರೆ. ಮತಕ್ಷೇತ್ರದ ಅಭಿವೃದ್ಧಿ ಮಾಡುವ ಮೂಲಕ ಮತದಾರರ ಋಣ ತೀರಿಸಲು ಶ್ರಮಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ನೆರೆಯ ಮಹಾರಾಷ್ಟ್ರ ಸರ್ಕಾರ ಬೇಸಿಗೆ ಸಂದರ್ಭದಲ್ಲಿ ತಾಲೂಕಿನ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ 4 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಹರಿಸಬೇಕು. ಇನ್ನು ಆಲಮಟ್ಟಿ ಹಿನ್ನೀರಿನ ನೀರನ್ನು ನೆರೆಯ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎರಡು ಟಿಎಂಸಿ ನೀರು ಕೊಡುವ ವಿಚಾರವಾಗಿ ಎರಡು ಸರ್ಕಾರಗಳ ಮಧ್ಯೆ ಒಡಂಬಡಿಕೆ ಆಗಬೇಕು ಎಂಬ ಚಿಂತನೆ ಬಹು ದಿನಗಳಿಂದ ನಡೆಯುತ್ತಿದೆ. 

ಮುಂದಿನ 4 ತಿಂಗಳಿನಲ್ಲಿ ಕಲ್ಯಾಣ ಸಾರಿಗೆಗೆ 485 ಹೊಸ ಬಸ್: ಸಚಿವ ರಾಮಲಿಂಗಾರೆಡ್ಡಿ

ಹಿಂದೆ ಈ ಬಗ್ಗೆ ಮಾತುಕತೆಗಳಾಗಿವೆ. ಆದರೆ ಯಾವುದೇ ಅಧಿಕೃತವಾಗಿ ಒಡಂಬಡಿಕೆ ಆಗಿಲ್ಲ. ಈ ಒಡಂಬಡಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ಮನವರಿಕೆ ಮಾಡಲು ನೆರೆಯ ಸಾಂಗ್ಲಿ ಮತ್ತು ಜತ್ ಮತಕ್ಷೇತ್ರಗಳ ಜನಪ್ರತಿನಿಧಿಗಳನ್ನು ಈ ಕಾರ್ಯಕ್ರಮದಲ್ಲಿ ಆಹ್ವಾನಿಸಲಾಗಿದೆ. ಗಡಿ ಭಾಗದ ಕನ್ನಡಿಗರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಹಾರಾಷ್ಟ್ರದ ಶಾಸಕರ ಗಮನಕ್ಕೆ ತರಲಾಗುವುದು. ಈ ವಿಷಯ ಅವರ ವಿಧಾನಸಭೆಯಲ್ಲಿ ಚರ್ಚಿಸಲು ಅನುಕೂಲವಾಗಲಿದೆ. ಎರಡು ಸರ್ಕಾರಗಳ ಸಮನ್ವತೆಯಿಂದ ಗಡಿ ಭಾಗದ ಕನ್ನಡಿಗರ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ