
ಬೆಂಗಳೂರು, (ಡಿ.28): ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
"
ನಿನ್ನೆ (ಡಿ. 27) ಹನುಮ ಜಯಂತಿಯಂದು ಮೈಸೂರಿನಲ್ಲಿ ಸ್ನೇಹಿತನ ಮನೆಗೆ ಹೋಗಿ ಬಾಡೂಟ ಸವಿದಿದ್ದ ಸಿದ್ದು, ಮತ್ತೆ ಇಂದು (ಸೋಮವಾರ) ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ದನದ ಮಾಂಸ ತಿನ್ನುತ್ತೇನೆ ಎಂದು ಸ್ಪಷ್ಟಪಡಿಸಿದರು.
ಸಹವಾಸ ದೋಷದಿಂದ ಸಿದ್ದರಾಮಯ್ಯ ಕೆಟ್ರಾ...? ಯಾರದು..?
ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಅದನ್ನ ಕೇಳುವುದಕ್ಕೆ ನೀನ್ಯಾರು? ಎಂದು ಅಧಿವೇಶನದಲ್ಲಿಯೇ ನಾನು ಕೇಳಿದ್ದೇನೆ. ನಮ್ಮವರು ಇದನ್ನು ಗಟ್ಟಿಯಾಗಿ ಹೇಳಲ್ಲ. ಕೆಲ ವಿಚಾರಗಳ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು ಎಂದು ಅವರು ಹೇಳಿದರು.
ಗೋವನ್ನು ನಾವು ಪೂಜಿಸುತ್ತೇವೆ ಎಂಬುದು ಸರಿ. ಆದರೆ ವಯಸ್ಸಾದ ಹಸು, ಗಂಡು ಕರು ಏನ್ ಮಾಡೋದು ಹೇಳಿ? ಕಾಂಗ್ರೆಸ್ನವರು ಕೂಡ ಈ ವಿಚಾರದ ಬಗ್ಗೆ ಹೇಳಬೇಕು. ಬೇರೆ ಜಾತಿಯವರು ಏನೋ ಅನ್ಕೊಳ್ತಾರೆಂದು ಸುಮ್ಮನಾಗ್ತಾರೆ. ಮೌನಕ್ಕೆ ಶರಣಾಗುವುದನ್ನು ಬಿಡಬೇಕು. ನಮ್ಮ ಸಿದ್ಧಾಂತವನ್ನ ನಾವು ಹೇಳಬೇಕು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.