ಸಿಎಂಗೆ ಯಾರೋ ಮಾಟ ಮಾಡವ್ರೆ ಅನಿಸುತ್ತೆ: ಮಾಜಿ ಸಚಿವ ರಾಜಣ್ಣ ಹೇಳಿದ್ದೇನು?

Kannadaprabha News   | Kannada Prabha
Published : Apr 22, 2026, 05:50 AM IST
I feel someone performed black magic on CM Former Minister Rajanna bold claim rav

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಹಾಯಕರಾಗಿ ಕಾಣುತ್ತಿದ್ದು, ಅವರ ಮೇಲೆ ಯಾರೋ ಮಾಟ-ಮಂತ್ರ ಮಾಡಿಸಿರಬಹುದು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಾವೇ ತನಿಖೆ ನಡೆಸುತ್ತಿರುವುದಾಗಿ ಹೇಳಿರುವ ಅವರು, ಮೇ ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ 

 ಬೆಂಗಳೂರು (ಏ.22): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಷ್ಟೊಂದು ಅಸಹಾಯಕ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರೆ ಯಾರೋ ಮಾಟ, ಮಂತ್ರ ಮಾಡಿಸಿರಬಹುದು. ಇದರ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಹೇಳಿಕೆ ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಟಗರು ಯಾವತ್ತಿದ್ದರೂ ಟಗರೇ ಅವರು ಅಸಹಾಯಕರಾಗಲ್ಲ’ ಎಂಬ ಜಮೀರ್‌ ಅಹ್ಮದ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

‘ನನ್ನ ಅನುಭವದ ಪ್ರಕಾರ ನಾನು ಸಿಎಂ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದೇನೆ. ಅಗಾಧ ಶಕ್ತಿ ಹೊಂದಿರುವ ಸಿಎಂ ಇಷ್ಟೊಂದು ಅಸಹಾಯಕರಾಗಿರುವುದನ್ನು ಎಂದೂ ನೋಡಿರಲಿಲ್ಲ. ಈಗ ನೋಡಿದರೆ ಅವರ ಮೇಲೆ ಯಾರಾದರೂ ಮಾಟ-ಮಂತ್ರ ಮಾಡಿದ್ದಾರೆಯೇ ಎನಿಸುತ್ತದೆ. ಆ ಬಗ್ಗೆ ನಾನು ವಿಚಾರ ಮಾಡುತ್ತಿದ್ದು, ತನಿಖೆ ಮಾಡಿಸುತ್ತಿದ್ದೇನೆ’ ಎಂದರು.

ಸಿಎಂ ಹಾಗೂ ನಾನು ಮಾಟ ಮಂತ್ರದಲ್ಲಿ ನಂಬಿಕೆ ಇಲ್ಲದವರು. ಮನುಷ್ಯರ ಮೇಲೆ ಪರಿಣಾಮ ಆಗಬೇಕು ಎಂದರೆ ಅವರು ಆಸ್ತಿಕರಾಗಿರಬೇಕು ಎಂದೇನೂ ಇಲ್ಲ. ಹೀಗಾಗಿ ಅವರ ಮೇಲೆ ಮಾಟ, ಮಂತ್ರ ಆಗಿರಬಹುದು ಎನಿಸುತ್ತಿದೆ ಎಂದರು.

ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆ: ರಾಜಣ್ಣ ಭವಿಷ್ಯ

ರಾಜ್ಯದಲ್ಲಿ ಮೇ ತಿಂಗಳಲ್ಲಿ ಕೆಲ ರಾಜಕೀಯ ಬೆಳವಣಿಗೆಗಳು ಆಗಲಿದೆ ಎಂದು ರಾಜಣ್ಣ ಹೇಳಿದರು. ರಾಜಕೀಯ ನಿಂತ ನೀರಲ್ಲ. ಅದು ಪರಿಶುದ್ಧವಾಗಿರಬೇಕು ಎಂದರೆ ಹರಿಯುತ್ತಿರಬೇಕು. ಮೇ ತಿಂಗಳಲ್ಲಿ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ ಎಂದರು.

ಗಲ್ಲಿಯಾಗಿ ನಿಲ್ಲಲಿ:

ನೀವೇನಾದರೂ ಸಲಹೆ ನೀಡುತ್ತೀರಾ ಎಂಬ ಪ್ರಶ್ನೆಗೆ, ನಾನು ಅವರಿಗೆ ಗಟ್ಟಿಯಾಗಿ ನಿಲ್ಲಿ ಎಂದು ಹೇಳಿಸಿಕೊಳ್ಳುವಷ್ಟು ಅಸಹಾಯಕತೆ ಬಂದಿಲ್ಲ. ಆದಾಗ್ಯೂ ಕೆಲ ಬೆಳವಣಿಗೆ ನೋಡಿದರೆ ಅವರು ಅಸಾಯಕರಾಗಿದ್ದಾರೆ ಎನಿಸುತ್ತಿದೆ. ಹೀಗಾಗಿ ಯಾರು ಮಾಟ, ಮಂತ್ರ ಮಾಡಿರಬಹುದು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇನೆ ಎಂದು ರಾಜಣ್ಣ ಹೇಳಿದರು.

ನನ್ನ ಮೇಲೂ ಪ್ರಯೋಗ ನಡೆದಿತ್ತು:

ಈ ಹಿಂದೆ ನಾನು ಚುನಾವಣೆ ನಿಲ್ಲುವಾಗ ನಮ್ಮ ಹಳೆಯ ಮನೆ ಸುತ್ತಲೂ ಹಳದಿ ನೀರು ಹಾಕಿ ಮಾಟ-ಮಂತ್ರ ಮಾಡುತ್ತಾ ಇದ್ದರು. ಆದರೆ ನಾನು ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಲಿಲ್ಲ. ಅದೇನೇ ಮಾಡಿದರೂ ಚುನಾವಣೆಯಲ್ಲೂ ನಾನು ಗೆದ್ದಿದ್ದೇನೆ ಎಂದು ರಾಜಣ್ಣ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಭಾರತದ ಜನತೆಗೆ ಗೊತ್ತಿದೆ ಭಯೋತ್ಪಾದಕರು ಯಾರು ಅನ್ನೋದು' ಪ್ರಧಾನಿ ಮೋದಿಗೆ ಟೆರರಿಸ್ಟ್ ಎಂದ ಖರ್ಗೆ ವಿರುದ್ಧ ಬಿಜೆಪಿ ಗರಂ,
ತಿರುಚಿ ಚರ್ಚ್‌ನಲ್ಲಿ ಮೊಣಕಾಲೂರಿ ನಡೆದು ಪ್ರಾರ್ಥನೆ ಮಾಡಿದ ನಟ ವಿಜಯ್: ಟ್ರೋಲ್ ಆಗಿದ್ದೇಕೆ?