
ಮುಳಬಾಗಿಲು(ಡಿ.16): ಸಿಎಂ ಸಿದ್ದರಾಮಯ್ಯ ನನ್ನನ್ನು ಖಾಸಗಿ ಯಾಗಿ ಕರೆದು ಮಾತನಾಡಿರುವುದು ಸತ್ಯ. ಆದರೆ, ನಾನು ಕಾಂಗ್ರೆಸ್ ಸೇರ್ಪಡೆ ಆಗುವುದಿಲ್ಲ. ಅದು ಊಹಾಪೋಹ ಮಾತ್ರ. ಗಾಳಿ ಸುದ್ದಿಗಳಿಗೆ ಯಾರು ಕಿವಿ ಕೊಡಬಾರದು ಎಂದು ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.
11 ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಸಿದ್ದರಿದ್ದಾರೆ ಎಂಬ ಇತ್ತೀಚಿನ ಕಾಂಗ್ರೆಸ್ ಶಾಸಕರ ಹೇಳಿಕೆ ಬೆನ್ನಲ್ಲೇ ಸಮೃದ್ಧಿ ಅವರ ಈ ಸ್ಪಷ್ಟನೆ ಹೊರಬಿದ್ದಿದೆ. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿ, ಸಿಎಂ ನನ್ನನ್ನು ಖಾಸಗಿಯಾಗಿ ಕರೆದು ಮಾತನಾಡಿರುವುದ ಸತ್ಯ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಅನುದಾನಕ್ಕೆ ಹೋಗಿರು ವುದೇ ವಿನಃ ಕಾಂಗ್ರೆಸ್ ಸೇರ್ಪಡೆಗಲ್ಲ' ಎಂದರು.
ಬಿಜೆಪಿಗರಿಂದ ಬೆಂಕಿ ಹಚ್ಚುವ ಕೆಲಸ: ಸಚಿವ ದಿನೇಶ್ ಗುಂಡೂರಾವ್
ಮಾಲೂರು ಶಾಸಕ ನಂಜೇಗೌಡರು, ಕೋಲಾರದ ಜೆಡಿಎಸ್ ಶಾಸಕರೊಬ್ಬರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ. ಅವರೇ ಹೆಸರು ಬಹಿರಂಗಪಡಿಸಲಿ. ನಾನಂತೂ ಸೇರಲ್ಲ. ಇದೆಲ್ಲ ಬರೀ ಊಹಾಪೋಹ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬಾರದು ಎಂದರು.
ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನನ್ನು ನಂಬಿ ಪಕ್ಷ ಬಿ' ಫಾರಂ ಕೊಟ್ಟಿದೆ. ಗೆಲುವಿಗೆ ಜೆಡಿಎಸ್ ಮುಖಂಡರು ಶ್ರಮಿಸಿದ್ದಾರೆ. ಅಲ್ಲದೆ ತಾಲೂಕಿನ ಮತದಾರರು ನನ್ನನ್ನು 30 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಆದ್ದರಿಂದ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡುತ್ತೇನೆ' ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.