ನನಗೂ ಸಿಎಂ ಆಗುವ ಅರ್ಹತೆ ಇದೆ ಎಂದ ಹಿರಿಯ ನಾಯಕ: ಬಿಜೆಪಿಯಲ್ಲೂ ಶುರುವಾಯ್ತು ಕುರ್ಚಿ ಫೈಟ್

Published : Jun 28, 2021, 09:53 PM ISTUpdated : Jun 28, 2021, 10:00 PM IST
ನನಗೂ ಸಿಎಂ ಆಗುವ ಅರ್ಹತೆ ಇದೆ ಎಂದ ಹಿರಿಯ ನಾಯಕ: ಬಿಜೆಪಿಯಲ್ಲೂ ಶುರುವಾಯ್ತು ಕುರ್ಚಿ ಫೈಟ್

ಸಾರಾಂಶ

* ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಅಂತರ್ ಯುದ್ಧ * ಇದೀಗ ಬಿಜೆಪಿಯಲ್ಲೂ ಶುರುವಾಯ್ತು ಸಿಎಂ ಆಕಾಂಕ್ಷಿ ಹೇಳಿಕೆ" * ಮತ್ತೆ ರಾಜ್ಯ ರಾಜಕಾರಣದಲ್ಲಿ ಕತ್ತಿ ವರಸೆ

ವಿಜಯಪುರ, (ಜೂನ್,.28): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಸೈಲೆಂಟ್ ಆಗಿದ್ದು, ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಅಂತರ್‌ ಯುದ್ಧ ಶುರುವಾಗಿದೆ.

ಕಾಂಗ್ರೆಸ್‌ನಲ್ಲಿನ ಬೆಳವಣಿಗೆಗಳನ್ನ ಬಿಜೆಪಿ ಲೇವಡಿ ಮಾಡುತ್ತಿದೆ. ಇದರ ಮಧ್ಯೆ ನಾನು 8 ಬಾರಿ ಶಾಸಕನಾಗಿರುವ ನನಗೂ ಸಿಎಂ ಆಗುವ ಅರ್ಹತೆ ಇದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿ ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಂಚಲನ ಮೂಡಿಸಿದ್ದಾರೆ.

ಅತ್ತ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕಿತ್ತಾಟ, ಇತ್ತ ಬಿಜೆಪಿಗೆ ಚೆಲ್ಲಾಟ

ಇಂದು (ಸೋಮವಾರ) ವಿಜಯಪುರ ಜಿಲ್ಲೆಯ ಆಲಮಟ್ಟಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಂಟು ಬಾರಿ ಶಾಸಕನಾಗಿ ಅಯ್ಕೆ ಆಗಿರುವ ನನಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ಹೈಕಮಾಂಡ್ ಯಡಿಯೂರಪ್ಪ ಅವರನ್ನು ವಯಸ್ಸು ಹಾಗೂ ಇತರೆ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನದ ಬದಲಾವಣೆಗೆ ಮುಂದಾದಲ್ಲಿ ನಾನೂ ಆಕಾಂಕ್ಷಿ ಎಂದು ಮನದಾಸೆಯನ್ನು ವ್ಯಕ್ತಪಡಿಸಿದರು.

,ಅಭಿವೃದ್ಧಿ ಹಿನ್ನಡೆ ಕಂಡು ಬಂದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಧ್ವನಿ ಎತ್ತುವಲ್ಲಿ ಹಿಂದೆ ಬೀಳುವುದಿಲ್ಲ. ಜಲಸಂಪನ್ಮೂಲ ಖಾತೆ ಸೇರಿದಂತೆ ಹಲವು ಖಾತೆ ನಿರ್ವಹುಸುವ ಸಾಮರ್ಥ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇದೆ. ಪ್ರಮುಖ ಖಾತೆಗಳು ಸೇರಿದಂತೆ ಹಲವು ಖಾತೆಗಳ ನಿರ್ವಹಣೆ ವಿಷಯದಲ್ಲಿ ಮುಖ್ಯಮಂತ್ರಿಗಳಿಗೆ ಒತ್ತಡ ಆಗಲಿದೆ ಎಂಬುದು ನಿಮ್ಮ ಹಾಗೂ ನನ್ನ ಅಭಿಪ್ರಾಯ ಅಷ್ಟೇ. ಆದರೆ ಮುಖ್ಯಮಂತ್ರಿ ಹಲವು ಖಾತೆ ನಿರ್ವಹಿಸುವಲ್ಲಿ ಸಮರ್ಥರಿದ್ದಾರೆ ಎಂದರು.

ನಾಯಕತ್ವ ಬದಲಾವಣೆ ಬಗ್ಗೆ ಎದ್ದಿದ್ದ ಬಿರುಗಾಳಿ ಕೊಂಚ ಕಡಿಮೆ ಆಯ್ತು ಎನ್ನುವಷ್ಟರಲ್ಲಿ ಉಮೇಶ್ ಕತ್ತಿ ಮತ್ತೆ ತಮ್ಮ ಕತ್ತಿ ವರಸೆ ಶುರುಮಾಡಿಕೊಂಡಿರುವುದು ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ. ಇನ್ನು ಈ ಬಗ್ಗೆ ಯಾವೆಲ್ಲ ನಾಯಕರು ಹೇಗೆಲ್ಲಾ ಪ್ರತಿಕ್ರಿಯಿಸುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ