ಕೋಲಾರ ಟಿಕೆಟ್‌ ಕೂಡ ಕೇಳಿದ್ದೇನೆ, ಒಪ್ಪಿದ್ರೆ 2 ಕಡೆಯಿಂದಲೂ ಕಣಕ್ಕೆ: ಸಿದ್ದರಾಮಯ್ಯ

Published : Mar 29, 2023, 06:20 AM ISTUpdated : Mar 29, 2023, 06:22 AM IST
ಕೋಲಾರ ಟಿಕೆಟ್‌ ಕೂಡ ಕೇಳಿದ್ದೇನೆ, ಒಪ್ಪಿದ್ರೆ 2 ಕಡೆಯಿಂದಲೂ ಕಣಕ್ಕೆ: ಸಿದ್ದರಾಮಯ್ಯ

ಸಾರಾಂಶ

ವರುಣ ನನ್ನ ಹುಟ್ಟೂರು ಭಾಗದ ಕ್ಷೇತ್ರ. ನನ್ನ ಕೊನೆಯ ಚುನಾವಣೆ ಹುಟ್ಟೂರಿನಲ್ಲಿಯೇ ಆಗಬೇಕು ಎಂಬುದು ನನ್ನ ಆಸೆ. ಯಾವ ಕ್ಷೇತ್ರವೂ ಅದೃಷ್ಟ ಅಂತ ಇಲ್ಲ. ಆದರೆ, ಈ ಕ್ಷೇತ್ರದಿಂದ ನಾನು ಗೆದ್ದಾಗಲೇ ಮುಖ್ಯಮಂತ್ರಿ ಆಗಿದ್ದು ಎಂದ ಸಿದ್ದರಾಮಯ್ಯ

ಮೈಸೂರು(ಮಾ.29): ‘ಕೋಲಾರದಿಂದಲೂ ಸ್ಪರ್ಧಿಸುವಂತೆ ತೀವ್ರ ಒತ್ತಡ ಬರುತ್ತಿದೆ. ಹೀಗಾಗಿ, ವರುಣ ಕ್ಷೇತ್ರದ ಜತೆ ಕೋಲಾರದಿಂದಲೂ ಸ್ಪರ್ಧಿಸಲು ಅವಕಾಶ ಕೇಳಿದ್ದೇನೆ. ಈ ಸಂಬಂಧ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧನಾಗಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆ ಮೂಲಕ ಈ ಬಾರಿಯೂ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಕುರಿತು ಸುಳಿವು ನೀಡಿದ್ದಾರೆ.

ಎಚ್‌.ಡಿ.ಕೋಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ವರುಣ ನನ್ನ ಹುಟ್ಟೂರು ಭಾಗದ ಕ್ಷೇತ್ರ. ನನ್ನ ಕೊನೆಯ ಚುನಾವಣೆ ಹುಟ್ಟೂರಿನಲ್ಲಿಯೇ ಆಗಬೇಕು ಎಂಬುದು ನನ್ನ ಆಸೆ. ಯಾವ ಕ್ಷೇತ್ರವೂ ಅದೃಷ್ಟ ಅಂತ ಇಲ್ಲ. ಆದರೆ, ಈ ಕ್ಷೇತ್ರದಿಂದ ನಾನು ಗೆದ್ದಾಗಲೇ ಮುಖ್ಯಮಂತ್ರಿ ಆಗಿದ್ದು’ ಎಂದರು.

ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಯಾರೂ ಮಾತನಾಡಿಲ್ಲ: ಎಚ್‌ಡಿಕೆಗೆ ಸಿದ್ದರಾಮಯ್ಯ ತಿರುಗೇಟು

ಕೋಲಾರ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿ, ‘ಕೋಲಾರ ಕ್ಷೇತ್ರದ ಜನರಿಂದ ಸ್ಪರ್ಧೆಗೆ ಹೆಚ್ಚು ಒತ್ತಡ ಬರುತ್ತಿದೆ. ಹೀಗಾಗಿ, ಈ ಬಾರಿ ಎರಡು ಕ್ಷೇತ್ರದಿಂದ ನಾನು ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ. ಕೋಲಾರದಿಂದಲೂ ಟಿಕೆಟ್‌ ನೀಡುವಂತೆ ಕೇಳಿದ್ದೇನೆ. ಹೈಕಮಾಂಡ್‌ನವರು ಏನು ಹೇಳುತ್ತಾರೆ ಎಂದು ಕಾದು ನೋಡುತ್ತೇನೆ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ’ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ