
ಚಿಕ್ಕಬಳ್ಳಾಪುರ(ಮಾ.28): ವಿಧಾನಸಭೆ ಚುನಾವಣೆಯಲ್ಲಿ ಎರಡು ಬಾರೀ ಸೋತ ಬಳಿಕ ಸಾಕಷ್ಟು ಸೈಲೆಂಟಾಗಿದ್ದೆ. ಆದರೆ ಈಗ ವೈಲೆಂಟ್ ಆಗುತ್ತೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾಧ್ಯಮಗಳಿಗೆ ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಸೋಲನ್ನು ಒಪ್ಪಿಕೊಂಡು ಮಾಜಿ ಸಚಿವ ಹಾಗೂ ಆಪ್ತರು ಆದ ಡಾ.ಕೆ.ಸುಧಾಕರ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿ ಸಾಕಷ್ಟು ಅಸಮಾಧಾನ ತೋರಿದ್ದರು. ಆದರೆ ಈಗ ಮಾಜಿ ಸಚಿವರಿಗೆ ಲೋಕಸಭಾ ಟಿಕೆಟ್ ಘೋಷಣೆಯಾದಂತೆ ಮಾಜಿ ಸಚಿವ ಸುಧಾಕರ್ಗೆ ಬೆಂಬಲ ಸೂಚಿಸಲು ಮಾಜಿ ಸಚಿವ ಎಂಟಿಬಿ ನಾಗರಾಜ್ ಮುಂದಾಗಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ, ಅಭಿವೃದ್ಧಿ ಪರ್ವ ಸೃಷ್ಟಿಸುವೆ: ಡಾ.ಕೆ.ಸುಧಾಕರ್
ಇನ್ನೂ ನಾವೆಲ್ಲ ಪ್ರಧಾನಿ ಮೋದಿ ಅವರಿಗಾಗಿ ದುಡಿಯುತ್ತಿದ್ದು ಅವರು ಮೂರನೇ ಬಾರಿ ಪ್ರಧಾನಮಂತ್ರಿ ಆಗಬೇಕು ಎಂಬ ಆಕಾಂಕ್ಷಿಯೊಂದಿಗೆ ಈ ಬಾರಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ಡಾ.ಕೆ.ಸುಧಾಕರ್ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಉತ್ತರಿಸಿದ್ದಾರೆ.
ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಸೋಲನ್ನ ಒಪ್ಪಿಕೊಂಡ ಬಳಿಕ ಸಾಕಷ್ಟು ಬೇಸರದಿಂದ ಇದ್ದು ರಾಜಕೀಯದಿಂದ ದೂರವಾಗಿ ಸಾಕಷ್ಟು ಸೈಲೆಂಟಾಗಿದ್ದೆ ಆದರೆ ಈಗ ಮತ್ತೆ ನಾನು ವೈಲೆಂಟ್ ಆಗುತ್ತೇನೆ. ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದೇ ನನ್ನ ಗುರಿ ಎಂದು ಇದೇ ವೇಳೆ ಮಾಧ್ಯಮಗಳಿಗೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.