ಚಲುವರಾಯಸ್ವಾಮಿಯನ್ನು ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ, ಆಣೆಗೆ ಸಿದ್ಧ: ಎಚ್.ಡಿ.ಕುಮಾರಸ್ವಾಮಿ

Published : Apr 09, 2025, 06:28 AM ISTUpdated : Apr 09, 2025, 07:04 AM IST
ಚಲುವರಾಯಸ್ವಾಮಿಯನ್ನು ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ, ಆಣೆಗೆ ಸಿದ್ಧ: ಎಚ್.ಡಿ.ಕುಮಾರಸ್ವಾಮಿ

ಸಾರಾಂಶ

ನಾನು ಮುಖ್ಯಮಂತ್ರಿಯಾಗುವ ವೇಳೆ ಚಲುವರಾಯಸ್ವಾಮಿ ನೋಡಿ ಎಂಎಲ್‌ಎಗಳು ಬಂದರಾ? ಅವರನ್ನು ಮಂತ್ರಿ ಮಾಡಲು ನಾನು ಶ್ರಮ ಹಾಕಿದ್ದೇನೆ. ತಾವು ಮಂತ್ರಿಯಾಗುವುದಕ್ಕಾಗಿ ನನ್ನ ಮೂರು ಗಂಟೆವರೆಗೆ ನಿದ್ದೆ ಮಾಡಲು ಬಿಟ್ಟಿಲ್ಲ. 

ಮಂಡ್ಯ (ಏ.09): ನಾನು ಮುಖ್ಯಮಂತ್ರಿಯಾಗುವ ವೇಳೆ ಚಲುವರಾಯಸ್ವಾಮಿ ನೋಡಿ ಎಂಎಲ್‌ಎಗಳು ಬಂದರಾ? ಅವರನ್ನು ಮಂತ್ರಿ ಮಾಡಲು ನಾನು ಶ್ರಮ ಹಾಕಿದ್ದೇನೆ. ತಾವು ಮಂತ್ರಿಯಾಗುವುದಕ್ಕಾಗಿ ನನ್ನ ಮೂರು ಗಂಟೆವರೆಗೆ ನಿದ್ದೆ ಮಾಡಲು ಬಿಟ್ಟಿಲ್ಲ. ಆತನನ್ನು ಮಂತ್ರಿ ಮಾಡಲು 50 ಜನ ಶಾಸಕರನ್ನು ಸೇರಿಸಿದ್ದೇನೆ. ನಾನು ಪಟ್ಟಿರುವ ಶ್ರಮವನ್ನು ಅವರು ಮರೆಯೋದು ಬೇಡ. ಈ ವಿಷಯವಾಗಿ ನಾನು ಎಲ್ಲಿ ಬೇಕಾದರೂ ಆಣೆ- ಪ್ರಮಾಣಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

ಚಲುವರಾಯಸ್ವಾಮಿಗೆ ಇರುವ ಚಟಗಳು ನನಗಿಲ್ಲ. ಅವರಿಗಿರುವ ಚಟಗಳ ಬಗ್ಗೆ ಮಂಡ್ಯದಲ್ಲಿ ಕೇಳಿದರೆ ಹೇಳುತ್ತಾರೆ. ಚಲುವರಾಯಸ್ವಾಮಿಯಿಂದ ಎಷ್ಟು ಮನೆ ಹಾಳಾಗಿವೆ ಎನ್ನುವುದೂ ಗೊತ್ತಿದೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡ, ಅದು ಕೀಳುಮಟ್ಟದ ಅಭಿರುಚಿ ಎಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು. ನಾನು ರಾಜಕೀಯದಲ್ಲಿ ದುಡ್ಡು ಮಾಡಬೇಕೆಂದು ಎಂದೂ ಆಸೆಪಟ್ಟವನಲ್ಲ. ನಾನು ಜನರ ಮಧ್ಯ 24 ಗಂಟೆ ಕೆಲಸ ಮಾಡಿದ್ದೇನೆ. ಜನತಾ ದರ್ಶನ, ಗ್ರಾಮ ವಾಸ್ತವ್ಯದಲ್ಲಿ ಬೆಳಗಿನ ಜಾವದವರೆಗೆ ಕೆಲಸ ಮಾಡಿದ್ದೇನೆ. ಇದು ನನ್ನ ವೈಯಕ್ತಿಕ ಸಮಸ್ಯೆ.ಎಲ್ಲವನ್ನೂ ದೇವರು ನೋಡುತ್ತಾನೆ ಎಂದು ಹೇಳಿದರು.

ಸ್ವ ಚರಿತ್ರೆ ಬಗ್ಗೆ ಚಲುವರಾಯಸ್ವಾಮಿ ಬಹಿರಂಗ ಚರ್ಚೆಗೆ ಆಹ್ವಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಸ್ವ ಚರಿತ್ರೆ ಬಗ್ಗೆ ಚರ್ಚೆ ಮಾಡೋದು ಮುಖ್ಯವೋ, ಜನರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದು ಮುಖ್ಯವೋ. ಪ್ರತಿಯೊಬ್ಬ ಮನುಷ್ಯ ಕೆಲವರ ಜೊತೆ ಇದ್ದಾಗ ಹಲವಾರು ಸಮಸ್ಯೆಗಳನ್ನು ಮಾಡಿಕೊಳ್ಳುತ್ತೇವೆ. ಯಾವ ಮನುಷ್ಯನೂ ಪರಿಶುದ್ಧ ಅಲ್ಲ. ತಪ್ಪನ್ನು ಸರಿಪಡಿಸಿಕೊಳ್ಳಲು ಭಗವಂತ ಅವಕಾಶ ಕೊಡುತ್ತಾನೆ. ನಾನು ವಿಧಾನಸಭೆಯ ಕಲಾಪದಲ್ಲಿ ಹೇಳಿದ್ದೇನೆ. ನಾನು ತಪ್ಪು ಮಾಡಿದ್ದೇನೆ, ಇಲ್ಲ ಎಂದು ಹೇಳುತ್ತಿಲ್ಲ. ಚಲುವರಾಯಸ್ವಾಮಿ ಏನೇನು ಮಾಡಿದ್ದಾರೆ ಎನ್ನುವುದೂ ಗೊತ್ತಿದೆ. ಇಂತಹ ವಿಚಾರಗಳನ್ನು ಬಿಟ್ಟು ಜನರ ಬದುಕಿನ ಬಗ್ಗೆ ಚರ್ಚೆ ಮಾಡಿ ಎಂದು ಹೇಳಿದರು. ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್ ಇದ್ದರು.

ಎಚ್‌.ಡಿ.ಕುಮಾರಸ್ವಾಮಿ ‘ನ್ಯಾಯಾಂಗ ನಿಂದನೆ’ ಕೇಸ್‌ ಹೈನಲ್ಲೇ ಪ್ರಶ್ನಿಸಿ: ಸುಪ್ರೀಂಕೋರ್ಟ್

ಕಾಂಗ್ರೆಸ್ ಆಡಳಿತದಿಂದ ರೋಸಿಹೋದ ಜನ: ಈಗಾಗಲೇ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ರೋಸಿ ಹೋಗಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷ ಜೆಡಿಎಸ್ ರಾಜ್ಯಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದು, ಮತ್ತೆ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮತ್ತೆ ಅಭಿವೃದ್ಧಿ ಕರ್ನಾಟಕವನ್ನು ಕಟ್ಟಲು ಜನತೆಯ ಆಶೀರ್ವಾದ ಅಗತ್ಯ. ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಜಾರಿ ಮಾಡಿದ್ದ ರೈತರ ಸಾಲಮನ್ನಾ, ಲಾಟರಿ ನಿಷೇಧದಂತಹ ಜನಪರ ಯೋಜನೆಗಳು ಇಂದಿಗೂ ಜನರ ಮನಸ್ಸಿನಲ್ಲಿ ಉಳಿದಿವೆ. ರೈತರು, ಮಹಿಳೆಯರು, ಯುವಕರು, ಹಿರಿಯ ನಾಗರಿಕರಿಗೆ ಯೋಜನೆಗಳನ್ನು ಜಾರಿ ಮಾಡಿದರು. ಕೃಷಿ, ಸಹಕಾರ, ಕೈಗಾರಿಕೆ ಸೇರಿದಂತೆ ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ಕೊಟ್ಟು ರಾಜ್ಯದಲ್ಲಿ ಜನಪರ ಆಡಳಿತ ಕೊಡಬಹುದೆಂಬುದನ್ನು ತೋರಿಸಿ ಮಾದರಿಯಾಗಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ