ಬಿಜೆಪಿಗೆ ಹೋಗಿ ತಪ್ಪು ಮಾಡಿದೆ: ಚಿಂಚನಸೂರು

Published : Mar 26, 2023, 02:00 AM IST
ಬಿಜೆಪಿಗೆ ಹೋಗಿ ತಪ್ಪು ಮಾಡಿದೆ: ಚಿಂಚನಸೂರು

ಸಾರಾಂಶ

ಆರೆಸ್ಸೆಸ್‌ ಸಿದ್ಧಾಂತ ಹೊಂದಿರುವ ಬಿಜೆಪಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡುವುದಿಲ್ಲ. ನರೇಂದ್ರ ಮೋದಿಯಿಂದ ಬಡವರ ಕಲ್ಯಾಣವಾಗಲು ಸಾಧ್ಯವಿಲ್ಲ ಎಂದ ಬಾಬುರಾವ್‌ ಚಿಂಚನಸೂರು. 

ಗುರುಮಠಕಲ್‌(ಮಾ.26):  ಬಿಜೆಪಿಗೆ ಹೋಗಿ ನಾನು ತಪ್ಪು ಮಾಡಿದೆ. ಇನ್ನು ಮುಂದೆ ಮಲ್ಲಿಕಾರ್ಜುನ ಖರ್ಗೆಯವರ ಮಾರ್ಗದರ್ಶನದಲ್ಲೇ ಮುಂದುವರೆಯುವೆ ಎಂದು ಮಾಜಿ ಸಚಿವ, ಕೋಲಿ ಸಮಾಜದ ಪ್ರಭಾವಿ ನಾಯಕ ಬಾಬುರಾವ್‌ ಚಿಂಚನಸೂರು ಹೇಳಿದರು.

ಗುರುಮಠಕಲ್‌ ಮತಕ್ಷೇತ್ರದ ಸೈದಾಪುರದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೆಸ್ಸೆಸ್‌ ಸಿದ್ಧಾಂತ ಹೊಂದಿರುವ ಬಿಜೆಪಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡುವುದಿಲ್ಲ. ನರೇಂದ್ರ ಮೋದಿಯಿಂದ ಬಡವರ ಕಲ್ಯಾಣವಾಗಲು ಸಾಧ್ಯವಿಲ್ಲ ಎಂದರು.

ಜೆಡಿಎಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿ ಯೋಜನೆ ಜಾರಿ: ಬಂಡೆಪ್ಪ ಖಾಶೆಂಪೂರ್

ಕಲ್ಯಾಣ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಭದ್ರಕೋಟೆ. ಈ ಭಾಗದಲ್ಲಿ ಬಿಜೆಪಿ ಹುನ್ನಾರ ನಡೆಯುವುದಿಲ್ಲ. ತಂದೆಗೆ ತಕ್ಕ ಮಗನಾಗಿ ಉತ್ತಮ ಕೆಲಸಕ್ಕೆ ಖ್ಯಾತಿ ಪಡೆದಿರುವ ಪ್ರಿಯಾಂಕ್‌ ಖರ್ಗೆ ಚಿತ್ತಾಪುರದಲ್ಲಿ ಈ ಬಾರಿಯೂ ಗೆಲುವಿನ ನಗೆ ಬೀರಲಿದ್ದಾರೆ ಎಂದ ಬಾಬುರಾವ್‌, ನಾನು ಕಾಂಗ್ರೆಸ್ಸಿಗೆ ಮರಳಿದ ನಂತರ ಬಿಜೆಪಿ ಅಲ್ಲಿ ಉಳಿಯುವುದಿಲ್ಲ ಎಂದು ಲೇವಡಿ ಮಾಡಿದರು.

ಗುರುಮಠಕಲ್‌ ಕ್ಷೇತ್ರವಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿನ ಸೀಟುಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ. ಇದರೊಟ್ಟಿಗೆ ಖರ್ಗೆ ಅವರ ಕೀರ್ತಿ ಪತಾಕೆ ಹಾರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!