ಚನ್ನಪಟ್ಟಣದಲ್ಲಿ ನಿಖಿಲ್‌ ಸ್ಪರ್ಧೆಗೆ ನನ್ನ ಬೆಂಬಲವಿದೆ: ಸಿ.ಪಿ ಯೋಗೇಶ್ವರ್

Published : Jun 27, 2024, 09:00 AM IST
ಚನ್ನಪಟ್ಟಣದಲ್ಲಿ ನಿಖಿಲ್‌ ಸ್ಪರ್ಧೆಗೆ ನನ್ನ ಬೆಂಬಲವಿದೆ: ಸಿ.ಪಿ ಯೋಗೇಶ್ವರ್

ಸಾರಾಂಶ

ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್  

ನವದೆಹಲಿ(ಜೂ.27):  ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುವೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ. 

ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಸಚಿವ ಕುಮಾರಸ್ವಾಮಿಯನ್ನೂ ಭೇಟಿ ಮಾಡಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌, ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ ಎಂದು ಹೇಳಿದ್ದಾರೆ.

ಮೈತ್ರಿ ಪಕ್ಷದಿಂದ ಚನ್ನಪಟ್ಟಣದಲ್ಲಿ ಸ್ಪರ್ಧೆ ಯಾರದ್ದು..? ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ಗಾಗಿ ಜೋರಾದ ಫೈಟ್‌

ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಇನ್ನು, ಕಾಂಗ್ರೆಸ್‌ನಿಂದ ಡಿಕೆಶಿ ಕುಟುಂಬದವರು ನಿಂತರೆ ದೊಡ್ಡ ಹೋರಾಟ ನಡೆಯುವುದು ಗ್ಯಾರಂಟಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!