ಲೋಕಸಭಾ ಚುನಾವಣೆ ಬಳಿಕ ಮತ್ತೆ ಡಿಸಿಎಂ ಹುದ್ದೆ ಕೇಳ್ತೀನಿ: ಸಚಿವ ಸತೀಶ್ ಜಾರಕಿಹೊಳಿ

Published : Jan 28, 2024, 11:21 AM IST
ಲೋಕಸಭಾ ಚುನಾವಣೆ ಬಳಿಕ ಮತ್ತೆ ಡಿಸಿಎಂ ಹುದ್ದೆ ಕೇಳ್ತೀನಿ: ಸಚಿವ ಸತೀಶ್ ಜಾರಕಿಹೊಳಿ

ಸಾರಾಂಶ

ಡಿಸಿಎಂ ವಿಚಾರ ಸದ್ಯಕ್ಕಿಲ್ಲ. ಈಗ ನಾವು ಲೋಕಸಭಾ ಚುನಾವಣೆ ಫೋಕಸ್ ಮಾಡುತ್ತಿದ್ದೇವೆ. ಚುನಾವಣೆ ಬಳಿಕ ಮತ್ತೆ ಡಿಸಿಎಂ ಹುದ್ದೆ ಕೇಳುತ್ತೇನೆ. ಹೈಕಮಾಂಡ್ ಜತೆ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು. ಸಿಎಂ ಕೂಡಾ ಆಗಬೇಕು ಎಂಬ ಆಸೆ ಇದೆಯಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಆ ಪ್ರಶ್ನೆಯೇ ಉದ್ಭವಿಸಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ 

ಹಾವೇರಿ(ಜ.28):  ಲೋಕಸಭಾ ಚುನಾವಣೆ ಬಳಿಕ ಮತ್ತೆ ಡಿಸಿಎಂ ಹುದ್ದೆ ಕೇಳೀನಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಸಿಎಂ ವಿಚಾರ ಸದ್ಯಕ್ಕಿಲ್ಲ. ಈಗ ನಾವು ಲೋಕಸಭಾ ಚುನಾವಣೆ ಫೋಕಸ್ ಮಾಡುತ್ತಿದ್ದೇವೆ. ಚುನಾವಣೆ ಬಳಿಕ ಮತ್ತೆ ಡಿಸಿಎಂ ಹುದ್ದೆ ಕೇಳುತ್ತೇನೆ. ಹೈಕಮಾಂಡ್ ಜತೆ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು. ಸಿಎಂ ಕೂಡಾ ಆಗಬೇಕು ಎಂಬ ಆಸೆ ಇದೆಯಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಆ ಪ್ರಶ್ನೆಯೇ ಉದ್ಭವಿಸಲ್ಲ ಎಂದರು. 

ನುಡಿದಂತೆ ನಡೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ನಲ್ಲಿ ತಾವು ಪವರ್ ಸೆಂಟರಾಗಲು ಹೊರಟಿದ್ದೀರಾ ಎಂಬ ವಿಚಾರಕ್ಕೆ, ನಾವು ಪವರ್ ಸೆಂಟರ್ ಅಲ್ಲ. ಪಕ್ಷದಲ್ಲಿಯೇ ಇದ್ದೀವಿ. ಹೊರಗಡೆ ಹೋಗಿಲ್ಲ. ಇದ್ದಲ್ಲೇ ಕಾಠ್ಯ ತಂತ್ರ ಮಾಡುತ್ತಿದ್ದೇವೆ. ಸಮಾನ ಮನಸ್ಕರು ಒಂದೆಡೆ ಸೇರಿದ್ದೆವು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ