
ಮದ್ದೂರು: ‘ರಾಮನಗರದಿಂದಲೇ ನನ್ನ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ’ ಎಂದು ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಮನಗರ ದೇವೇಗೌಡರಿಗೆ ಮರುಜೀವ ಕೊಟ್ಟ ಜಿಲ್ಲೆ. ಹಾಗಾಗಿ ನಾನು ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ.
ಅಲ್ಲೇ ನನ್ನ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಮೈತ್ರಿ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದರು. ಇದೇ ವೇಳೆ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ನಿಖಿಲ್, ಸಂಪದ್ಭರಿತ ಕರ್ನಾಟಕದಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಆರ್ಥಿಕ ವ್ಯವಸ್ಥೆ ವ್ಯವಸ್ಥಿತವಾಗಿ ನಡೆಯುತ್ತಿದೆ. ದೇಶದ ಕೇವಲ ಮೂರೇ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಹಿಮಾಚಲ ಪ್ರದೇಶವನ್ನು ಕರ್ನಾಟಕ್ಕೆ ಹೋಲಿಕೆ ಮಾಡಲಾಗದು. ಕರ್ನಾಟಕ ಸಂಪದ್ಭರಿತವಾದ ರಾಜ್ಯ. ಕಾಂಗ್ರೆಸ್ ಉಸಿರಾಡುತ್ತಿರುವುದೇ ನಮ್ಮ ರಾಜ್ಯದ ಆರ್ಥಿಕತೆಯಿಂದ ಎಂದು ಟೀಕಿಸಿದರು.
ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಂದಾಗ ಆ ಪಕ್ಷದ ಕೇಂದ್ರ ನಾಯಕರು ಮಾತನಾಡುತ್ತೇವೆ ಎನ್ನುತ್ತಾರೆ. ಬದಲಾವಣೆ ಮಾಡಿದರೆ ಸರ್ಕಾರಕ್ಕೆ ತೊಂದರೆಯಾದರೆ ತಮ್ಮ ಬುಡಕ್ಕೇ ಬರುತ್ತದೆ ಎಂಬ ಕಾರಣಕ್ಕೆ ಸುಮ್ಮನಿದ್ದಾರೆ ಎಂದು ಛೇಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.