
ಮುಂಡಗೋಡ(ಮಾ.18): ನೀತಿ ಸಂಹಿತೆ ಹಿನ್ನೆಲೆ ಸರ್ಕಾರಿ ಕಾರ್ಯಕ್ರಮಗಳಿಗೆ ಬ್ರೇಕ್ ಬೀಳುವುದರಿಂದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಮುಂದಿನ ಕೆಲಸ ನಡೆಯುತ್ತದೆ. ಯಾವ ಪಕ್ಷದಿಂದ ಎಂದು ಹೇಳಲಾಗುವುದಿಲ್ಲ ಎನ್ನುವ ಮೂಲಕ ಶಾಸಕ ಶಿವರಾಮ ಹೆಬ್ಬಾರ ಕಾಂಗ್ರೆಸ್ ಸೇರುವ ಸುದ್ದಿಗೆ ಮತ್ತೆ ಪುಷ್ಟಿ ನೀಡಿದ್ದಾರೆ.
ಶನಿವಾರ ತಾಲೂಕಿನ ವಿವಿಧ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು, ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದ ಮಾತಿಗೆ ಯಾವ ಪಕ್ಷದ ಪರವಾಗಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ.
ವರಿಷ್ಠರು ಸೂಚನೆ ನೀಡಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ: ಜಗದೀಶ್ ಶೆಟ್ಟರ್
ಕದ್ದು ಮುಚ್ಚಿ ರಾಜಕಾರಣ ಮಾಡಲಾಗುವುದಿಲ್ಲ. ಏನು ಮಾಡುತ್ತೇನೆ ಅದನ್ನೇ ಹೇಳುತ್ತೇನೆ, ಹೇಳಿದ್ದನ್ನೇ ಮಾಡುತ್ತೇನೆ. ಮುಂದೆ ಕಾದು ನೋಡಿ ಎಂದು ಹೇಳುವ ಮೂಲಕ ಜಿಲ್ಲೆಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.