
ಹಾನಗಲ್ಲ(ಏ.21): ಪ್ರಸಕ್ತ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತೇನೆ. ಹಾವೇರಿ-ಗದಗ ಕ್ಷೇತ್ರದಾದ್ಯಂತ ಸುತ್ತಾಡಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಸಂಸದ ಶಿವಕುಮಾರ ಉದಾಸಿ ಸ್ಪಷ್ಟಪಡಿಸಿದರು.
ಚುನಾವಣಾ ರಾಜಕೀಯದಿಂದ ನಿವೃತ್ತನಾಗುವುದಾಗಿ ಘೋಷಿಸಿದ ಬಳಿಕ ನೇಪತ್ಯಕ್ಕೆ ಸರಿದಿದ್ದ ಅವರು ಶನಿವಾರ ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಚಾರದಲ್ಲಿ ಭಾಗವಹಿಸುವುದಕ್ಕಾಗಿಯೇ ಬಂದಿದ್ದೇನೆ. ಇಲ್ಲಿಯೇ ಇರುತ್ತೇನೆ. ಬೊಮ್ಮಾಯಿ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದರು.
EXCLUSIVE | ಜನರ ಕಣ್ಣಲ್ಲೇ ನನಗೆ ರಿಸಲ್ಟ್ ಕಾಣ್ತಿದೆ: ಪಿಎಂ ಮೋದಿ ಏಷ್ಯಾನೆಟ್ ಸಂದರ್ಶನ
ಮತದಾರರನ್ನು ಮನವೊಲಿಸಲಾಗದ ಕಾಂಗ್ರೆಸ್ಸಿಗರು ಗೊಂದಲಕ್ಕೀಡುಮಾಡಿ ಮತ ಕಬಳಿಸುವ ಹುನ್ನಾರಕ್ಕೆ ಕೈ ಹಾಕುತ್ತಾರೆ ಎಂಬುದನ್ನು ಎಚ್ಚರಿಕೆಯಿಂದ ಗಮನಿಸಬೇಕು. ಕೇಂದ್ರ ಸರಕಾರದ ಆಡಳಿತ ಪರ ಅಲೆ ಇದೆ, ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಬಸವರಾಜ ಬೊಮ್ಮಾಯಿ ಅತ್ಯಧಿಕ ಮತಗಳಿಂದ ಗೆಲ್ಲುತ್ತಾರೆ ಎಂದು ಉದಾಸಿ ವಿಶ್ವಾಸ ವ್ಯಕ್ತಪಡಿಸಿದರು.
ನಾನು ಪಕ್ಷದ ಶಿಸ್ತಿನ ಕಾರ್ಯಕರ್ತ. ಸಕ್ರೀಯ ರಾಜಕಾರಣದಿಂದ ಮುಕ್ತನಾಗಿದ್ದೇನೆ. ನನಗೆ ಯಾವುದೇ ಪದವಿ ಬೇಕಾಗಿಲ್ಲ. ಆದರೆ, ಪಕ್ಷ ಅಭಿವೃದ್ಧಿಗಾಗಿ ಹಾಗೂ ಯೋಜನೆಯನ್ನು ರೂಪಿಸಲು ಅವಕಾಶ ಕೊಟ್ಟರೆ ಖಂಡಿತ ಉತ್ತಮ ಅಧ್ಯಯನದ ಮೂಲಕ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ. ನನಗೆ ಅಧ್ಯಯನದಲ್ಲಿ ಹೆಚ್ಚು ಆಸಕ್ತಿ ಇದೆ ಎಂದು ಹೇಳಿದರು.
ಹಾವೇರಿ ಗದಗ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ನಾಲ್ಕು ಚುನಾವಣೆಗಳಲ್ಲಿ ನಿರಂತರವಾಗಿ ಗೆಲುವು ಸಾಧಿಸಿದೆ. ಐದನೇ ಗೆಲುವು ನಮ್ಮದೇ. ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ, ನೀರಾವರಿ, ಗೃಹ ಸಚಿವರಾಗಿ ಆಡಳಿತದ ಅನುಭವವಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.