2023 Assembly Election: ಸಿದ್ದರಾಮಯ್ಯಗೆ ಕೊಪ್ಪಳಕ್ಕೆ ಬಂದರೆ ಕ್ಷೇತ್ರ ಬಿಟ್ಟು ಕೊಡುವೆ: ರಾಘವೇಂದ್ರ ಹಿಟ್ನಾಳ

Kannadaprabha News   | Asianet News
Published : Dec 11, 2021, 12:22 PM IST
2023 Assembly Election: ಸಿದ್ದರಾಮಯ್ಯಗೆ ಕೊಪ್ಪಳಕ್ಕೆ ಬಂದರೆ ಕ್ಷೇತ್ರ ಬಿಟ್ಟು ಕೊಡುವೆ: ರಾಘವೇಂದ್ರ ಹಿಟ್ನಾಳ

ಸಾರಾಂಶ

*   ಸಿದ್ದರಾಮಯ್ಯ ಎಲ್ಲಿ ನಿಂತರೂ ಗೆಲ್ತಾರೆ *   ಸಿದ್ದು ಚಾಮರಾಜನಗರದಿಂದ ಸ್ಪರ್ಧಿಸಿದರೆ ಜಿಲ್ಲೆಯ ಅಭಿವೃದ್ಧಿ ಆಗಲಿದೆ *   ವಿಜಯನಗರದಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯಗೆ ಆಹ್ವಾನ   

ಕೊಪ್ಪಳ/ಚಾಮರಾಜನಗರ(ಡಿ.11):  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ(Assembly Election) ಸಿದ್ದರಾಮಯ್ಯ(Siddaramaiah) ಅವರಿಗೆ ಸ್ಪರ್ಧಿಸಲು ತಮ್ಮ ಕ್ಷೇತ್ರ ಬಿಟ್ಟುಕೊಡಲು ಸಿದ್ಧರಿರುವುದಾಗಿ ಕಾಂಗ್ರೆಸ್‌ನ ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗ ಶೆಟ್ಟಿ(C Puttaranga Shetty) ಹಾಗೂ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ(Raghavendra Hitnal) ಘೋಷಿಸಿದ್ದಾರೆ. 

ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಎನ್ನುವುದು ಇಡೀ ರಾಜ್ಯಕ್ಕೇ(Karnataka) ಗೊತ್ತಿದೆ. ಅವರು ಎಲ್ಲಿ ನಿಂತರೂ ಗೆಲ್ತಾರೆ, ಅವರು ತಾವು ಮಾತ್ರವಲ್ಲದೆ ಸಾಕಷ್ಟು ಅಭ್ಯರ್ಥಿಗಳ ಗೆಲುವಿಗೂ ಕಾರಣರಾಗುತ್ತಾರೆ ಎಂದು ಇಬ್ಬರು ಶಾಸಕರೂ ಅಭಿಪ್ರಾಯಪಟ್ಟಿದ್ದಾರೆ.

Karnataka Congress Politics: ಬಾದಾಮಿ ಬಿಟ್ಟು ಕೊಡಲ್ವಂತೆ ಚಿಮ್ಮನಕಟ್ಟಿ: ಸಿದ್ದು ಎಲ್ಲಿಂದ ಸ್ಪರ್ಧೆ?

2018ರಲ್ಲೂ ಕುಷ್ಟಗಿ(Kushtagi) ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಆಹ್ವಾನ ಮಾಡಿದ್ದೆವು. ಆದರೆ, ಅವರು ಬಾದಾಮಿ(Badami) ಕ್ಷೇತ್ರದಲ್ಲಿನ ಅಭಿಮಾನಿಗಳ ಒತ್ತಡಕ್ಕೆ ಮಣಿದು ಅಲ್ಲಿಂದ ಸ್ಪರ್ಧೆ ಮಾಡಿದರು ಎಂದು ಹಿಟ್ನಾಳ ತಿಳಿಸಿದ್ದಾರೆ. ಇದೇ ವೇಳೆ, ಸಿದ್ದರಾಮಯ್ಯ ಚಾಮರಾಜನಗರ(Chamarajanagar) ಕ್ಷೇತ್ರದಿಂದ ಸ್ಪರ್ಧಿಸಿದರೆ ಜಿಲ್ಲೆಯ ಅಭಿವೃದ್ಧಿ ಆಗಲಿದೆ ಎಂದು ಪುಟ್ಟರಂಗ ಶೆಟ್ಟಿಹೇಳಿಕೊಂಡಿದ್ದಾರೆ.

ಸಿದ್ದರಾಮಯ್ಯ ಬಾದಾಮಿಯಲ್ಲೇ ಸ್ಪರ್ಧಿಸಬೇಕು

ಬಾದಾಮಿ: ಬಾದಾಮಿಯಲ್ಲಿ ಮಾಜಿ ಸಿಎಂ ಶಾಸಕ ಸಿದ್ದರಾಮಯ್ಯ ಚಿಕ್ಕಮುಚ್ಚಳಗುಡ್ಡ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್‌ ಇಳಿದ ತಕ್ಷಣವೆ ಕ್ಷೇತ್ರದ ಯುವ ಕಾಂಗ್ರೆಸ್‌(Congress) ಕಾರ್ಯಕರ್ತರ ಪಡೆ ಈ ಬಾರಿ ಬಾದಾಮಿಯಲ್ಲೇ ಸ್ಪರ್ಧಿಸಬೇಕು. ಬೇಕೇ ಬೇಕು ಬಾದಾಮಿಗೆ ಸಿದ್ದರಾಮಯ್ಯ ಬೇಕು ಎಂದು ಘೋಷಣೆ ಕೂಗಿದರು.

ಹೆಲಿಪ್ಯಾಡ್‌ನಿಂದ ಬಾದಾಮಿವರೆಗೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಅಭಿಮಾನಿಗಳು ಬೈಕ್‌ ರಾರ‍ಯಲಿ ಮಾಡಿದರು. ಬೈಕ್‌ಗಳು ಮುಂದೆ ಮುಂದೆ ಶಾಸಕರ ಕಾರು ವಾಹನ ಹಿಂದೆ. ನೂರಾರು ಕಾರ್ಯಕರ್ತರು ಸಿದ್ದರಾಮಯ್ಯ ಅವರು ಬಾದಾಮಿಯಲ್ಲೇ ಸ್ಪರ್ಧೆ ಮಾಡಬೇಕು. ಅಭಿವೃದ್ಧಿ ಹರಿಕಾರ ಸಿದ್ದರಾಮಯ್ಯ ಬಾದಾಮಿಯಿಂದಲೇ ಸ್ಪರ್ಧೆ ಮಾಡಬೇಕು. ಅಭಿವೃದ್ಧಿ ಎಂದರೆ ಸಿದ್ದರಾಮಯ್ಯ ಎಂಬ ನಾಮಫಲಕಗಳನ್ನು ಹೊತ್ತು ಬೈಕ್‌ಗಳ ಮೂಲಕ ಘೋಷಣೆ ಕೂಗುತ್ತ ಅವರನ್ನು ಬಾದಾಮಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ಇದೊಂದು ಬೈಕ್‌ ರಾರ‍ಯಲಿಯಾಗಿ ಮಾರ್ಪಟ್ಟಿದ್ದು ಕಂಡು ಬಂತು.

ನಂತರ ಬಾದಾಮಿಯಲ್ಲಿ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಅವರು ಅವಳಿ ಜಿಲ್ಲೆಯ ವಿಧಾನ ಪರಿಷತ್‌ ಚುನಾವಣೆಯಲ್ಲಿ(Vidhan Parishat Election) ಭಾಗಿಯಾಗಿ ಪಟ್ಟಣದ ಪುರಸಭೆ 260ರ ಮತಗಟ್ಟೆಯಲ್ಲಿ ಮತದಾನ ಮಾಡಿ ಹಕ್ಕು ಚಲಾಯಿಸಿದರು.

ಪುರಸಭೆ ಅಧ್ಯಕ್ಷ ಮಂಜುನಾಥ ಹೊಸಮನಿ, ಉಪಾಧ್ಯಕ್ಷೆ ರಾಮವ್ವ ಮಾದರ, ಕಾಂಗ್ರೆಸ್‌ ಪಕ್ಷದ ಸದಸ್ಯರಾದ ಆರ್‌.ಎಫ್‌.ಬಾಗವಾನ, ಪರಶು ರೋಣದ, ಪಾಂಡು ಕಟ್ಟಿಮನಿ, ಶಂಕರ ಕನಕಗಿರಿ, ಫಾರೂಕ್‌ ದೊಡಮನಿ, ಭೀಮಸಿ ಕಂಬಾರ, ಗೌರಮ್ಮ ಬೇಲೂರಪ್ಪನವರ, ಶ್ರೀಮತಿ ಕಾಗಿ, ಶ್ರೀಮತಿ ರಾಜೂರ, ಯಮುನಾ ಹೊಸಗೌಡ್ರ ಅವರೊಂದಿಗೆ ಮತದಾನ ಮಾಡುವಲ್ಲಿ ಭಾಗಿಯಾಗಿ ಶಾಂತರೀತಿಯಲ್ಲಿ ಮತದಾನ ಮಾಡಿದರು.

Karnataka Politics : ಸಿದ್ದು ಸ್ಪರ್ಧಿಸುವ ಕಡೆ ಕಾಂಗ್ರೆಸಲ್ಲೇ ಸುಂಟರಗಾಳಿ

ವಿಜಯನಗರದಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯಗೆ ಆಹ್ವಾನ!

ಹೊಸಪೇಟೆ(Hosapete): ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಜಯನಗರ (ಹೊಸಪೇಟೆ) ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಅಭಿಮಾನಿಗಳು ಆಹ್ವಾನ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿಜಯನಗರ(Vijayanagara) ಜಿಲ್ಲೆಯ ವಿಜಯನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಅವರ ಅಭಿಮಾನಿಗಳಾದ ಸೋಮಶೇಖರ್‌ ಬಣ್ಣದಮನೆ ಆಹ್ವಾನ ನೀಡಿದ್ದಾರೆ. ‘ಅಣ್ಣ’ರಾಮಯ್ಯ ವಿಜಯನಗರ ಕ್ಷೇತ್ರಕ್ಕೆ ಸ್ಪರ್ಧಿಸಿದ್ರೆ ಅತ್ಯಂತ ಪ್ರೀತಿಯಿಂದ ಸ್ವಾಗತಿಸುತ್ತೇವೆ. ವಿಜಯನಗರ ಜಿಲ್ಲೆಗೂ ವಿಜಯನಗರದ ಗತಕಾಲದ ವೈಭವ, ಇತಿಹಾಸ ಮರುಕಳಿಸುವಂತಾಗಲಿದೆ ಎಂದು ಫೇಸ್‌ಬುಕ್‌ನಲ್ಲಿ(Favebook) ಸೋಮಶೇಖರ್‌ ಬಣ್ಣದಮನೆ ಪೋಸ್ಟ್‌ ಮಾಡಿದ್ದಾರೆ. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್(Anand Singh) ಅವರು ಶಾಸಕರಾಗಿರುವ ಕ್ಷೇತ್ರಕ್ಕೆ ಸಿದ್ದರಾಮಯ್ಯನವರನ್ನು ಆಹ್ವಾನಿಸಿರುವುದರಿಂದ, ಈ ಪೋಸ್ಟ್‌ ಭಾರಿ ವೈರಲ್‌ ಆಗುತ್ತಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: 'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ' - ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ