ದೆಹಲಿಯಿಂದ ಮತ್ತೆ ಕರೆ ಬಂದರೆ ಹೋಗುವೆ: ಕೆ.ಎಸ್.ಈಶ್ವರಪ್ಪ

Published : Apr 05, 2024, 09:10 AM ISTUpdated : Apr 05, 2024, 01:43 PM IST
ದೆಹಲಿಯಿಂದ ಮತ್ತೆ ಕರೆ ಬಂದರೆ ಹೋಗುವೆ: ಕೆ.ಎಸ್.ಈಶ್ವರಪ್ಪ

ಸಾರಾಂಶ

ಅಮಿತ್‌ ಶಾ ಅವರು ಸೇರಿ ಪಕ್ಷದ ಹಿರಿಯರಿಗೆ ಗೌರವ ಕೊಡುವುದು ನನಗೆ ಕಲಿಸಿರುವ ಸಂಸ್ಕೃತಿ. ಹೀಗಾಗಿ ನಾನು ಹೋಗಿದ್ದೆ. ಆದರೆ ಅಲ್ಲಿ ಮಾತುಕತೆ ನಡೆಯಲಿಲ್ಲ. ಮತ್ತೆ ದೆಹಲಿಯಿಂದ ಕರೆ ಬಂದರೆ ಅವರಿಗೆ ಗೌರವ ಕೊಟ್ಟು ಹೋಗುತ್ತೇನೆ.

ಶಿವಮೊಗ್ಗ (ಏ.05): ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಕರೆದಾಗ ಗೌರವಕೊಟ್ಟು ನಾನು ದೆಹಲಿಗೆ ಹೋಗಿದ್ದೆ. ಆದರೆ, ಅವರು ಭೇಟಿಯಾಗದೆ ಪರೋಕ್ಷವಾಗಿ ನನ್ನ ಸ್ಪರ್ಧೆಗೆ ಅಸ್ತು ಎಂದಿದ್ದಾರೆ. ನಾನು ಈ ಹಿಂದೆ ಹೇಳಿದಂತೆ ನನ್ನ ಸ್ಪರ್ಧೆ ನಿಶ್ಚಿತ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮಿತ್‌ ಶಾ ಅವರು ಸೇರಿ ಪಕ್ಷದ ಹಿರಿಯರಿಗೆ ಗೌರವ ಕೊಡುವುದು ನನಗೆ ಕಲಿಸಿರುವ ಸಂಸ್ಕೃತಿ. ಹೀಗಾಗಿ ನಾನು ಹೋಗಿದ್ದೆ. ಆದರೆ ಅಲ್ಲಿ ಮಾತುಕತೆ ನಡೆಯಲಿಲ್ಲ. ಮತ್ತೆ ದೆಹಲಿಯಿಂದ ಕರೆ ಬಂದರೆ ಅವರಿಗೆ ಗೌರವ ಕೊಟ್ಟು ಹೋಗುತ್ತೇನೆ. ಆದರೆ, ಚುನಾವಣೆಯಿಂದ ಹಿಂದೆ ಸರಿಯಲ್ಲ. ಹೀಗಾಗಿ ನನ್ನ ಸ್ಪರ್ಧೆ ಕುರಿತು ಕಾರ್ಯಕರ್ತರು ಇನ್ನು ಯಾವ ಅನುಮಾನವನ್ನೂ ಇಟ್ಟುಕೊಳ್ಳುವುದು ಬೇಡ ಎಂದರು.

ನೀರಾವರಿಗೆ ಅನುದಾನ ತರದಿದ್ದರೆ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ

ದೆಹಲಿಯಲ್ಲಿ ಸಂಘಟನಾ ಕಾರ್ಯದರ್ಶಿ‌ ರಾಜೇಶ್ ಜೀ ಮನೆಗೆ ಬರುವಂತೆ ತಮಗೆ ತಿಳಿಸಲಾಗಿತ್ತು. ಶಾ ಅವರ ಕಚೇರಿಯಿಂದ ಕರೆ ಬಂದ ಬಳಿಕ ಮನೆಗೆ ಕರೆಯುವುದಾಗಿ ತಿಳಿಸಲಾಯಿತು. ಕೆಲ ಹೊತ್ತಿನ ಬಳಿಕ ಅಮಿತ್‌ ಶಾ ಭೇಟಿಯಾಗುವುದಿಲ್ಲ ಎಂದು ಮಾಹಿತಿ ನೀಡಲಾಯಿತು. ಇದರರ್ಥ ಶಿವಮೊಗ್ಗಕ್ಕೆ ವಾಪಸ್‌ ಹೋಗು, ಹೋಗಿ ನೀನು ಸ್ಪರ್ಧಿಸಿ ಗೆಲ್ಲು ಎಂಬ ಸಂದೇಶ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಈ ಹಿಂದೆ ಅವರು ನನಗೆ ಕರೆ ಮಾಡಿದಾಗ ನನ್ನ ಸ್ಪರ್ಧೆ ಉದ್ದೇಶವನ್ನು ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದೆ. ನಾನು ಆಕ್ಷೇಪಿಸಿರುವ ಪ್ರಶ್ನೆಗೆ ಅಮಿತ್ ಶಾ ಬಳಿ ಯಾವುದೇ ಉತ್ತರ ಇರಲಿಲ್ಲ. ಹಾಗಾಗಿ ಅವರು ಹೊರಡು ಎಂದಿದ್ದಾರೆ ಎಂದು ನಾನು ಅಂದು ಕೊಂಡಿದ್ದೇನೆ ಎಂದರು. ನನ್ನ ಸ್ಪರ್ಧೆಗೆ ಭಗವಂತನೇ ಕೃಪೆ ತೋರಿದ್ದಾನೆ. ಅಮಿತ್‌ ಶಾ, ಮೋದಿ ಅಪೇಕ್ಷೆಯಂತೆ ನಾನು ಸ್ಪರ್ಧೆ ಮಾಡಿ, ಗೆದ್ದು ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುತ್ತೇನೆ ಎಂದರು.

ಹೊಸ ತಲೆಮಾರಿನ ‘ಅಗ್ನಿ ಪ್ರೈಮ್’ ರಾತ್ರಿ ಉಡಾವಣೆ ಪ್ರಾಯೋಗಿಕ ಪರೀಕ್ಷೆ ಯಶಸ್ವಿ!

ಅದ್ಧೂರಿ ಸ್ವಾಗತ ನೀಡಿದ ಅಭಿಮಾನಿಗಳು: ಇದಕ್ಕೂ ಮೊದಲು ದೆಹಲಿಯಿಂದ ವಾಪಸ್‌ ಬಂದ ಈಶ್ವರಪ್ಪ ಅವರನ್ನು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ ಬೈಕ್‌ ರ್‍ಯಾಲಿ, ಮೆರವಣಿಗೆ ಮೂಲಕ ನಗರಕ್ಕೆ ಕರೆತರಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್