ಯಾವ ಖಾತೆ ಕೊಟ್ಟರೂ ನಿಭಾಯಿಸ್ತೇನೆ: ಕತ್ತಿ

Published : Jan 30, 2020, 08:42 AM IST
ಯಾವ ಖಾತೆ ಕೊಟ್ಟರೂ ನಿಭಾಯಿಸ್ತೇನೆ: ಕತ್ತಿ

ಸಾರಾಂಶ

ಯಾವ ಖಾತೆ ಕೊಟ್ಟರೂ ನಿಭಾಯಿಸ್ತೇನೆ| ಬಿಎಸ್‌ವೈ ನನ್ನನ್ನು ಪರಿಗಣಿಸಿದ್ದು ಸಂತಸ ಕೊಟ್ಟಿದೆ: ಉಮೇಶ್ ಕತ್ತಿ

ಬೆಳಗಾವಿ[ಜ.30]: ನನಗೆ ಯಾವುದೇ ಖಾತೆ ಕೊಟ್ಟರೂ ಸರಿ, ಅದನ್ನು ನಿರ್ವಹಿಸುತ್ತೇನೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನನ್ನನ್ನು ಸಚಿವ ಸ್ಥಾನಕ್ಕಾಗಿ ಪರಿಗಣಿಸಿದ್ದು ಸಂತಸ ತಂದಿದೆ ಎಂದು ಶಾಸಕ ಉಮೇಶ್‌ ಕತ್ತಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದು ಸಂತಸ ತಂದಿದೆ. ನನಗೆ ಯಾವುದೇ ಖಾತೆ ನೀಡಿದರೂ ಅದನ್ನು ನಿಭಾಯಿಸುತ್ತೇನೆ. ನನಗೆ ಇಂಥದ್ದೇ ಖಾತೆ ನೀಡಿ ಎಂದು ಬೇಡಿಕೆ ಇಟ್ಟಿಲ್ಲ. ಬಜೆಟ್‌ ಅಧಿವೇಶನ ಮುಗಿದ ಮೇಲೆ ಮತ್ತೆ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಸೋತವರಿಗೆ ಇಲ್ಲಛ ಶಾಸಕರಾಗಿ ಆಯ್ಕೆಯಾದಮೇಲೆ ಅವರನ್ನು ಮಂತ್ರಿ ಮಾಡುವುದೇ ಪರಿಪಾಟಲು. ಹೀಗಿರುವಾಗ ಗೆದ್ದವರಿಗೂ ಕೊಡಿ ಮನೆಯಲ್ಲಿದ್ದವರಿಗೂ ಕೊಡಿ ಎಂದರೆ ಹೇಗೆ?. ಸೋತವರಿಗೆ ಸಚಿವ ಸ್ಥಾನ ನೀಡಲು ಆಗಲ್ಲ ಎಂದು ಇದೇ ವೇಳೆ ಕತ್ತಿ ಪ್ರತಿಕ್ರಿಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ
ಕಾಂಗ್ರೆಸ್‌ನ ಕಟ್ಟಾಳು ಶಾಮನೂರು ಶಿವಶಂಕರಪ್ಪ: ದಾವಣಗೆರೆಯ ಅಜೇಯ ರಾಜಕೀಯ ದಂತಕಥೆ