ರಾಷ್ಟ್ರ ರಾಜಕಾರಣಕ್ಕೆ ಮತ್ತೆ ಮರಳುತ್ತಾರಾ ಶ್ರೀ ರಾಮುಲು

Published : Feb 25, 2019, 10:08 AM IST
ರಾಷ್ಟ್ರ ರಾಜಕಾರಣಕ್ಕೆ ಮತ್ತೆ ಮರಳುತ್ತಾರಾ ಶ್ರೀ ರಾಮುಲು

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಎಲ್ಲಾ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ಇದೇ ವೇಳೆ ಬಿಜೆಪಿ ನಾಯಕ ಶ್ರೀ ರಾಮುಲು ತಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲವೆಂದಿದ್ದಾರೆ.

ಚಿತ್ರದುರ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮೊಳಕಾಲ್ಮುರು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ತಿಳಿಸಿದ್ದಾರೆ. 

ಭಾನುವಾರ ನಾಯಕನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ವರಿಷ್ಠರು ಲೋಕಸಭಾ ಚುನಾವಣೆ ನಿಮಿತ್ತ 7 ಕ್ಷೇತ್ರಗಳ ಉಸ್ತುವಾರಿ ನೀಡುವುದಾಗಿ ತಿಳಿಸಿದ್ದಾರೆ. 

ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದರೆ ಇತರೆ ಕ್ಷೇತ್ರಗಳಿಗೆ ತೆರಳಿ ಪಕ್ಷವನ್ನು ಸಂಘಟಿಸಲು ಕಷ್ಟವಾಗುವುದು. ಆದ್ದರಿಂದ ಸದ್ಯ ರಾಜ್ಯ ರಾಜಕಾರಣದಲ್ಲಿ ಉಳಿಯಬೇಕು ಎನ್ನುವ ನಿರ್ಧಾರ ಕೈಗೊಂಡಿದ್ದೇನೆ ಎಂದರು.

ಪಕ್ಷದ ವರಿಷ್ಠರು ಯಾವುದೇ ಕಾರಣಕ್ಕೂ ಅಪರೇಷನ್‌ ಕಮಲಕ್ಕೆ ಮುಂದಾಗಬಾರದು ಎಂದು ಸೂಚನೆ ನೀಡಿದ್ದಾರೆ. ಅದರಂತೆ ನಾವ್ಯಾರೂ ಅತ್ತ ಗಮನಹರಿಸುತ್ತಿಲ್ಲ. ಲೋಕಸಭೆ ಚುನಾವಣೆಯತ್ತ ದೃಷ್ಟಿ ಕೇಂದ್ರೀಕರಿಸಿದ್ದೇವೆಂದು ಪ್ರಶ್ನೆಯೊಂದಕ್ಕೆ ಶ್ರೀರಾಮುಲು ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!