ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ, ಮಂಡ್ಯ ಉಸ್ತುವಾರಿ ಕೊಟ್ರು ಬೇಡ: ಸಚಿವ ಕೆ.ಸಿ. ನಾರಾಯಣಗೌಡ

Published : Feb 18, 2023, 05:14 PM IST
ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ, ಮಂಡ್ಯ ಉಸ್ತುವಾರಿ ಕೊಟ್ರು ಬೇಡ: ಸಚಿವ ಕೆ.ಸಿ. ನಾರಾಯಣಗೌಡ

ಸಾರಾಂಶ

ನಾನೆಲ್ಲೂ ಕಾಂಗ್ರೆಸ್ ಸೇರುವುದಾಗಿ ಹೇಳಿಲ್ಲ. ಮಂಡ್ಯ ಉಸ್ತುವಾರಿ ಕೊಟ್ಟರೂ ವಹಿಸಿಕೊಳ್ಳುವುದಿಲ್ಲ.  ವದಂತಿಗಳಿಗೆ ಯಾರೂ ಕೂಡ ಕಿವಿ ಕೊಡಬೇಡಿ ಎಂದು ರೇಷ್ಮೆ ಖಾತೆ ಸಚಿವ ಕೆ.ಸಿ ನಾರಾಯಣಗೌಡ ಹೇಳಿದ್ದಾರೆ.

ಮಂಡ್ಯ (ಫೆ.18): ನಾನು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಇದೆಲ್ಲವೂ ಕೇವಲ ಗಾಳಿ ಸುದ್ದಿ, ವದಂತಿ ಅಷ್ಟೇ. ಇದಕ್ಕೆ ಯಾರೂ ಕಿವಿಗೊಡಬಾರದು ಎಂದು ರೇಷ್ಮೆ ಖಾತೆ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು. ವಿರೋಧಿಗಳು ಇಲ್ಲದ ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ಕಾಂಗ್ರೆಸ್ ಹೋಗುತ್ತೇನೆ ಎಂದು ಎಲ್ಲಾದರೂ ಹೇಳಿದ್ದೇನಾ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಅನಿವಾರ್ಯತೆ ಏನಿದೆ. ಬಿಜೆಪಿಯಲ್ಲೇ ನಾನು ನೆಮ್ಮದಿಯಿಂದ ಇದ್ದೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಹಾಗಾಗಿ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕೊಟ್ಟಿರುವುದಕ್ಕೂ ನನಗೆ ಬೇಸರವಿಲ್ಲ. ಆ ಬಗ್ಗೆ ಅಸಮಾಧಾನವನ್ನೂ ವ್ಯಕ್ತಪಡಿಸಿಲ್ಲ. ಈಗ ಮಂಡ್ಯ ಜಿಲ್ಲಾ ಉಸ್ತುವಾರಿಯನ್ನು ಕೊಟ್ಟರೂ ಒಪ್ಪಿಕೊಳ್ಳುವುದಿಲ್ಲ. ಏಕೆಂದರೆ, ಶಿವಮೊಗ್ಗದಲ್ಲಿ ಹಲವಾರು ಕೆಲಸಗಳು ಅರ್ಧಕ್ಕೆ ನಿಂತಿವೆ. ಅದನ್ನು ಪೂರ್ಣಗೊಳಿಸುವ ಜವಾಬ್ದಾರಿ ನನ್ನ ಮೇಲಿದೆ. ಈ ನಡುವೆ ಮಂಡ್ಯ ಉಸ್ತುವಾರಿ ವಹಿಸಿಕೊಂಡರೆ ಒತ್ತಡ ಇನ್ನಷ್ಟು ಹೆಚ್ಚಾಗುತ್ತದೆ. ಎರಡೂ ಕಡೆ ನ್ಯಾಯ ಸಲ್ಲಿಸಲಾಗುವುದಿಲ್ಲ ಎಂದು ಹೇಳಿದರು.

Pralhad Joshi: ನಾನು ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಉದ್ಭವಿಸಲ್ಲ: ಪ್ರಲ್ಹಾದ್ ಜೋಶಿ

ಬಿಜೆಪಿ ಯುವ ಸಮಾವೇಶಗಳ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜಿಲ್ಲೆಯ ಆರು ಕ್ಷೇತ್ರಗಳ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಿದ್ದಾರೆ. ಚುನಾವಣೆ ಪ್ರಚಾರ ಹೇಗಿರಬೇಕು, ಯುವ ಮತದಾರರನ್ನು ಹೇಗೆ ಸೆಳೆಯಬೇಕು, ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುವ ಕುರಿತಂತೆ ಮನದಟ್ಟು ಮಾಡಿದ್ದಾರೆ ಎಂದರು.

ಸಿದ್ದು-ಡಿಕೆಶಿ ನಡುವೆ 'ಸಿಎಂ ಪಟ್ಟ'ದ ಜಿದ್ದು: ಕೋಲಾರದಲ್ಲಿ ಟಗರಿಗೆ ವಿಘ್ನ

ಮಂಡ್ಯ ಉಸ್ತುವಾರಿ ನಿರ್ಧಾರ ಸಿಎಂಗೆ ಬಿಟ್ಟದ್ದು 
ಮಂಡ್ಯ ಜಿಲ್ಲಾ ಉಸ್ತುವಾರಿ ಯಾರಿಗೆ ನೀಡಬೇಕೆಂದು ತೀರ್ಮಾನ ಮಾಡೋರು ಮುಖ್ಯಮಂತ್ರಿಯವರು, ಉಸ್ತುವಾರಿ ಬಗ್ಗೆ ನನ್ನನ್ನು ಕೇಳಿದರೆ ನಾನೇನು ಹೇಳಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಕೆಲ ದಿನಗಳ ಹಿಂದೆ ಮಂಡ್ಯಕ್ಕೆ ಭೇಟಿ ನೀಡಿದ್ದಾಗ  ಹೇಳಿದ್ದರು. ಜಿಲ್ಲೆಯ ಮೇಲೆ ನನಗಿರುವ ಪ್ರೀತಿ, ಬಾಂಧವ್ಯ ಒಂದು ಭಾಗವಾದರೆ, ಜವಾಬ್ದಾರಿ ಮತ್ತು ಆಡಳಿತ ಇನ್ನೊಂದು ಭಾಗ. ಯಾವುದೇ ಜಿಲ್ಲೆಯ ಉಸ್ತುವಾರಿ ನಿಶ್ಚಯ ಮಾಡುವ ಅಧಿಕಾರವಿರುವುದು ಸಿಎಂಗೆ ಮಾತ್ರ. ಮಂಡ್ಯ ಉಸ್ತುವಾರಿ ನೇಮಕ ವಿಚಾರದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ