
ರಾಮನಗರ, (ಜ.21): ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ. ರಾಮನಗರ ಜಿಲ್ಲೆಯನ್ನು ಬಿಟ್ಟು ನಾನು ಹೊರಗೆ ಹೋಗಲ್ಲ ಎಂದು ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಭಾವುಕರಾಗಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೆಲವರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ . ನನ್ನ ದೇಹ ಅಂತಿಮವಾಗಿ ಭೂಮಿಗೆ ಹೋಗುವುದು ರಾಮನಗರದಲ್ಲೇ. ನಾನು ಎಂದಿಗೂ ಚನ್ನಪಟ್ಟಣ ಕ್ಷೇತ್ರ ಬಿಡುವುದಿಲ್ಲ. ಕ್ಷೇತ್ರ ಬಿಡುವುದಿದ್ದರೆ ನಾನು ಚನ್ನಪಟ್ಟಣದಲ್ಲಿ ಏಕೆ ಓಡಾಡುತ್ತಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಯತ್ನ ಪಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ದೇವರಿಗೆ ತಪ್ಪು ಕಾಣಿಕೆ ಸಲ್ಲಿಸಿದ ಕುಮಾರಸ್ವಾಮಿ: ಮಾಜಿ ಸಿಎಂ ಮಾಡಿದ ತಪ್ಪಾದ್ರೂ ಏನು?
ನಾನು ಸಾಯುವುದರೊಳಗೆ ರಾಮನಗರ-ಚನ್ನಪಟ್ಟಣವನ್ನು ಅವಳಿ ನಗರ ಮಾಡುತ್ತೇನೆ. ರಾಮನಗರ-ಚನ್ನಪಟ್ಟಣ ನನ್ನ ಎರಡು ಕಣ್ಣುಗಳಿದಂತೆ. ಕಣ್ಣು ಕಳೆದುಕೊಂಡರೆ ನಾನು ಕುರುಡಾಗುತ್ತೇನೆ ಎಂದರು.
ರಾಮನಗರ, ಚನ್ನಪಟ್ಟಣ ಕ್ಷೇತ್ರಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ಇಲ್ಲದಿದ್ದರೆ ಈ ಎರಡೂ ಕ್ಷೇತ್ರಗಳಲ್ಲಿ ನಿರಂತರ ಪ್ರವಾಸ ಕೈಗೊಳ್ಳುವ ಪ್ರಮೇಯವೇ ಎದುರಾಗುತ್ತಿರಲಿಲ್ಲ. ಇಂತಹ ಪುಕಾರುಗಳಿಗೆ ಕವಡೆ ಕಾಸಿನ ಕಿಮ್ಮತ್ತೂ ಕೊಡಬೇಡಿ ಎಂದು ಕ್ಷೇತ್ರದ ಜನತರಲ್ಲಿ ಮನವಿ ಮಾಡಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.