
ಬೆಂಗಳೂರು (ನ.11): ‘ಸಚಿವ ಸ್ಥಾನ ಕೇಳುವುದು ಧರ್ಮವಲ್ಲ. ಇಂತಹ ಖಾತೆ ಬೇಕೆಂದು ಕೇಳಿಲ್ಲ, ಕೇಳುವುದೂ ಇಲ್ಲ. ಖಾತೆ ವಿಚಾರ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು ಹಾಗೂ ವರಿಷ್ಠರಿಗೆ ಬಿಟ್ಟವಿಚಾರ. ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ’ ಎಂದು ರಾಜರಾಜೇಶ್ವರಿ ನಗರದಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದ ಮುನಿರತ್ನ ಹೇಳಿದ್ದಾರೆ.
‘ನಂಬಿಕೆ ಇಟ್ಟು, ಮತ ದೇವರು ಮತ ಭಿಕ್ಷೆ ನೀಡಿದ್ದಾರೆ. ಮತದಾರ ದೇವರ ಋುಣ ತೀರಿಸಲು ಸಾಧ್ಯವಿಲ್ಲ. ಪ್ರಾಮಾಣಿಕವಾಗಿ ಇನ್ನು ಎರಡೂವರೆ ವರ್ಷ ಹಗಲಿರುಳು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ಇಂದಿನಿಂದಲೇ ದಿನದ 20 ತಾಸು ದುಡಿಯುತ್ತೇನೆ’ ಎಂದು ಮತದಾರರಿಗೆ ಕೈ ಮುಗಿದು ಧನ್ಯವಾದ ಅರ್ಪಿಸಿದರು.
RR ನಗರದಲ್ಲಿ JDS-BJP ಹೊಂದಾಣಿಕೆ? ಜೊತೆಗೆ ಗಂಭೀರ ಅನುಮಾನ
ಕಾಂಗ್ರೆಸ್ನ ಡಿ.ಕೆ.ಸುರೇಶ್ ಅವರು ಈ ಕ್ಷೇತ್ರದ ಸಂಸದರಾಗಿದ್ದು, ಹೊಂದಾಣಿಕೆಯಿಂದ ಕೆಲಸ ಮಾಡಿಕೊಂಡು ಹೋಗುತ್ತೇವೆ. ಯಾವುದೇ ದ್ವೇಷ ಇಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.