ಕರ್ನಾಟಕ ಡಿಸಿಎಂ ಆಗಿಯೇ ನಿವೃತ್ತಿ ಪಡೆಯುತ್ತೇನೆ: ಬಾಬುರಾವ್ ಚಿಂಚನಸೂರು

Published : Oct 02, 2023, 11:57 AM IST
ಕರ್ನಾಟಕ ಡಿಸಿಎಂ ಆಗಿಯೇ ನಿವೃತ್ತಿ ಪಡೆಯುತ್ತೇನೆ: ಬಾಬುರಾವ್ ಚಿಂಚನಸೂರು

ಸಾರಾಂಶ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುರುಮಠಕಲ್ ಮತಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜೆಡಿಎಸ್‌ ಎದುರು ಸೋಲುಂಡಿದ್ದ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರು ಇದೀಗ ಮತ್ತೇ ಮುನ್ನೆಲೆಗೆ ಬಂದಿದ್ದಾರೆ.

ಯಾದಗಿರಿ/ಗುರುಮಠಕಲ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುರುಮಠಕಲ್ ಮತಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜೆಡಿಎಸ್‌ ಎದುರು ಸೋಲುಂಡಿದ್ದ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರು ಇದೀಗ ಮತ್ತೇ ಮುನ್ನೆಲೆಗೆ ಬಂದಿದ್ದಾರೆ.

ರಸ್ತೆ ಅಪಘಾತದ ಐದು ತಿಂಗಳ ನಂತರ ಭಾನುವಾರ ಗುರುಮಠಕಲ್‌ನಲ್ಲಿ ಕಾಣಿಸಿಕೊಂಡ ಚಿಂಚನಸೂರು, ಮತದಾರರಿಗೆ ನ್ಯಾಯ ಕೊಡಿಸುವ ಸಲುವಾಗಿ ನಾನು ರಾಜಕೀಯದಲ್ಲಿ ಜೀವಂತ ಇರುತ್ತೇನೆ. ಉಪ ಮುಖ್ಯಮಂತ್ರಿಯಾಗಿ ರಾಜಕೀಯ ನಿವೃತ್ತಿಯಾಗುತ್ತೇನೆ. ಡಿಸಿಎಂ ಆಗಿಯೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆಸೇರ್ಪಡೆ ಮಾಡುವುದೇ ನನ್ನ ಗುರಿ ಎಂದರು.

ಅಪಘಾತಗೊಂಡು ಆಸ್ಪತ್ರೆ ಸೇರಿದರೂ, ಆಂಬುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡಿದ ಬಾಬುರಾವ್ ಚಿಂಚನಸೂರು!

ವಿಧಾನಸಭೆ ಚುನಾವಣೆ ವೇಳೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನನಗೆ ಆರು ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿತ್ತು. ಆದರೆ, ವಿರೋಧಿಗಳು ನಾನು ಸಾಯುತ್ತೇನೆಂದು ಚುನಾವಣೆ ಸಂದರ್ಭದಲ್ಲಿ ಅಪಪ್ರಚಾರ ನಡೆಸಿದ್ದರು. ಇದರಿಂದಾಗಿ ಸೋಲಾಗಿದ್ದು, ನನ್ನ ಆತ್ಮಕ್ಕೆ ಬೆಂಕಿ ಬಿದ್ದಂತಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: ಸಿಎಂ ಬಗ್ಗೆ ಸಚಿವ ಬೈರತಿ ಸುರೇಶ್ ಗುಣಗಾನ