
ಚೆನ್ನೈ (ನ.08): ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ. ನವೆಂಬರ್ 9 ರಂದು ಅಧಿಕೃತವಾಗಿ ತಮಿಳುನಾಡಿನಲ್ಲಿ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಸುವರ್ಣ ನ್ಯೂಸ್ ಗೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟಪಡಿಸಿದ ಸಸಿಕಾಂತ್ ಸೆಂಥಿಲ್ ತಮ್ಮ ರಾಜಕೀಯ ಜೀವನ ಆರಂಭದ ಬಗ್ಗೆ ತಿಳಿಸಿದ್ದಾರೆ.
2009ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ 2017ರ ಅಕ್ಟೋಬರ್ 10ರಿಂದ ದ.ಕ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ರಾಜೀನಾಮೆ ನೀಡಿದ್ದು ಸೆಂಥಿಲ್ ಹೇಡಿತನ: ಬಿಜೆಪಿ ವ್ಯಂಗ್ಯ
2019ರ ಸೆ.6 ರಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ಸೆಂಥಿಲ್ ಆ ಬಳಿಕ ಸಿಎಎ ಸೇರಿ ರಾಜ್ಯದಲ್ಲಿ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದರು.
ಸದ್ಯ ಚೆನ್ನೈ ನಲ್ಲೇ ಉಳಿದುಕೊಂಡಿರುವ ಸಸಿಕಾಂತ್ ಸೆಂಥಿಲ್ ಅಧಿಕೃತವಾಗಿ ನವೆಂಬರ್ 9 ರಂದು ಚೆನ್ನೈನಲ್ಲಿ ಕಾಂಗ್ರೆಸ್ ಸೇರಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.