ಬಿಜೆಪಿಗೆ ಮುಜುಗರವಾಗಿದ್ದರೆ ಅವರೇ ತೀರ್ಮಾನಿಸಲಿ: ಕುಮಾರಸ್ವಾಮಿ

Published : May 08, 2024, 08:18 AM IST
ಬಿಜೆಪಿಗೆ ಮುಜುಗರವಾಗಿದ್ದರೆ ಅವರೇ ತೀರ್ಮಾನಿಸಲಿ: ಕುಮಾರಸ್ವಾಮಿ

ಸಾರಾಂಶ

ಬಿಜೆಪಿ ಜೊತೆಗೆ ನಾವು ಸುದೀರ್ಘ ಅವಧಿ ಇರಲು ಮೈತ್ರಿ ಮಾಡಿಕೊಂಡಿದ್ದೇವೆ. ಈ ಪ್ರಕರಣದಿಂದ ಬಿಜೆಪಿಯವರಿಗೆ ಮುಜುಗರವಾಗುವುದಾದರೆ ಅವರೇ ತೀರ್ಮಾನ ಮಾಡಲಿ. ನಮ್ಮದೇನೂ ವಿರೋಧವಿಲ್ಲ ಎಂದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ 

ಬೆಂಗಳೂರು(ಮೇ.08):  ಪೆನ್​ಡ್ರೈವ್ ವಿಚಾರ ನನಗೆ ಮೊದಲೇ ಗೊತ್ತಿದ್ದರೆ ಯಾವುದೇ ಕಾರಣಕ್ಕೂ ಪ್ರಜ್ವಲ್ ರೇವಣ್ಣ​ಗೆ ಟಿಕೆಟ್ ಕೊಡುತ್ತಿರಲಿಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜೊತೆಗೆ ನಾವು ಸುದೀರ್ಘ ಅವಧಿ ಇರಲು ಮೈತ್ರಿ ಮಾಡಿಕೊಂಡಿದ್ದೇವೆ. ಈ ಪ್ರಕರಣದಿಂದ ಬಿಜೆಪಿಯವರಿಗೆ ಮುಜುಗರವಾಗುವುದಾದರೆ ಅವರೇ ತೀರ್ಮಾನ ಮಾಡಲಿ. ನಮ್ಮದೇನೂ ವಿರೋಧವಿಲ್ಲ ಎಂದರು.

ಪ್ರಜ್ವಲ್‌ ರೇವಣ್ಣನ ಬಿಟ್ಟುಬಿಡ್ತಾರೆ, ನಮ್ಮಂಥವರನ್ನು ಮಾತ್ರ ಬಂಧಿಸ್ತಾರೆ: ಕೆಸಿಆರ್‌ ಪುತ್ರಿ ಕವಿತಾ

ಬಿಜೆಪಿಯವರದ್ದು ರಾಷ್ಟ್ರೀಯ ಪಕ್ಷ. ಅವರು ಏನು ತೀರ್ಮಾನ ಮಾಡುತ್ತಾರೋ ಮಾಡಲಿ. ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮೈತ್ರಿ ಇರುತ್ತದೆಯೋ, ಇರುವುದಿಲ್ಲವೋ ಮುಂದೆ ನೋಡೋಣ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ