ಬಿಜೆಪಿಯವರು ಸಿದ್ದರಾಮಯ್ಯ ಸರ್ಕಾರ ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ; ಶಾಸಕ ಶಿವಲಿಂಗೇಗೌಡ ಎಚ್ಚರಿಕೆ

Published : Jul 31, 2024, 06:20 PM IST
ಬಿಜೆಪಿಯವರು ಸಿದ್ದರಾಮಯ್ಯ ಸರ್ಕಾರ ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ; ಶಾಸಕ ಶಿವಲಿಂಗೇಗೌಡ ಎಚ್ಚರಿಕೆ

ಸಾರಾಂಶ

ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಅಲುಗಾಡಿಸಿದರೆ ಬಿಜೆಪಿ ವಿರುದ್ಧ ರಕ್ತಕ್ರಾಂತಿ ಮಾಡಲಾಗುವುದು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದಾರೆ. 

ಹಾಸನ (ಜು.31): ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಗುಮಾನಿ ಹರಡಿದೆ. ಈ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ವರದಿಗಳು ಬರುತ್ತಿದೆ. ಒಂದು ವೇಳೆ ಬಿಜೆಪಿಯವರು ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಒಂದು ಇಂಚು ಅಲುಗಾಡಿಸಿದರೂ ರಕ್ತಕ್ರಾಂತಿ ನಡೆಯುತ್ತದೆ ಎಂದು ಗೃಹಮಂಡಳಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ. 

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಸುದ್ದಿ ಮಾಧ್ಯಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಗುಮಾನಿ ಸುದ್ದಿಗಳು ಬಿತ್ತರಗೊಳ್ಳುತ್ತಿವೆ. ಒಂದು ವೇಳೆ ಟಿವಿ ಮಾಧ್ಯಮಗಳಲ್ಲಿ ಬಂದಿದ್ದು ಬಹುಶಃ ನಿಜ ಆಗಬಹುದು. ಒಂದು ವೇಳೆ ಹೀಗಾದಲ್ಲಿ ಬಿಜೆಪಿ ನಾಯಕರನ್ನು ಸುಮ್ಮನೆ ಬಿಡುವುದಿಲ್ಲ. ಈಗಲೇ ನಾನು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆ: 48 ಜನರ ಸಾವು, 46 ಸಾವಿರ ಹೆಕ್ಟೇರ್ ಬೆಳೆ ನಷ್ಟವಾಗಿದೆ!

ಕರ್ನಾಟಕ ರಾಜ್ಯದಲ್ಲಿ ಒಂದು ಇಂಚು ಸಿದ್ದರಾಮಯ್ಯ ಹಾಗೂ ಸರ್ಕಾರವನ್ನು ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ ನೀವು ಎಚ್ಚರಿಕೆಯಿಂದ ಇರಿ. ನಿಮಗೆ ಏನಾದರೂ ಆ ಆಲೋಚನೆ ಇದ್ದರೆ ವಾಪಾಸ್ ತೆಗೆದುಕೊಳ್ಳಿ, ಇಲ್ಲವಾದರೆ ರಕ್ತಕ್ರಾಂತಿ ಆಗುತ್ತದೆ. ಬಿಜೆಪಿ ಸರ್ಕಾರ ಎರಡು ಬಾರಿಯೂ ನೇರವಾಗಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದಲೇ ಅಧಿಕಾರಕ್ಕೆ ಬಂದಿದೆ. ಈ ಬಾರಿ ಪುನಃ ಇದೇ ಆಟವನ್ನು ಆಡಲು ಬಿಜೆಪಿಯವರು ಹೊರಟಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಇವತ್ತು ಸತ್ಯಶೋಧನೆ ಸಮಿತಿ ಸಭೆ ನಡೆಸಿದ್ದೇವೆ. ಇಂತಹ ಕೃತ್ಯವನ್ನು ತಡೆಯುವಂತೆ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದೇವೆ ಎಂದು ತಿಳಿಸಿದರು.

ಪುನೀತ್ ಕೆರೆಹಳ್ಳಿ ಬೆತ್ತಲೆಗೊಳಿಸಿ ಹಲ್ಲೆ ಆರೋಪ; ಎಸಿಪಿ ಚಂದನ್ ಭೇಟಿಗೆ ಬಂದ ಮಾಜಿ ಸಂಸದ ಪ್ರತಾಪ್ ಸಿಂಹ

ಒಂದು ವೇಳೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಿದ ಘಟನೆ ನಡೆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ. ಇದಕ್ಕೆ ನಾವು ತಯಾರಾಗಿದ್ದೇವೆ, ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಿ. ಈ ರಾಜ್ಯದಲ್ಲಿ ಯುದ್ದನೇ ಮಾಡಬೇಕಾಗುತ್ತದೆ. 136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ದನೇ ಆಗುತ್ತದೆ. ಬಿಜೆಪಿಗೆಯವರಿಗೆ ಇದು ಎಚ್ಚರಿಕೆಯಾಗಿದೆ. ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ ಈ ಬಾರಿ ನಿಮ್ಮ ಆಟ ನಡೆಯಲ್ಲ. ಹಾಗೇನಾದರೂ ನೀವು ಅನಿವಾರ್ಯವಾಗಿ ಪ್ರಾಸಿಕ್ಯೂಷನ್‌ಗೆ ನೋಟೀಸ್ ಕೊಟ್ಟರೆ ಉಗ್ರಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ