ಲೋಕಸಭೆಯಲ್ಲಿ ಬಿಜೆಪಿ 28 ಸ್ಥಾನ ಗೆದ್ರೆ, ರಾಜೀನಾಮೆ ಕೊಡುವೆ: ಶಾಸಕ ಬೇಳೂರು ಗೋಪಾಲಕೃಷ್ಣ

Published : May 17, 2024, 08:17 PM IST
ಲೋಕಸಭೆಯಲ್ಲಿ ಬಿಜೆಪಿ 28 ಸ್ಥಾನ ಗೆದ್ರೆ, ರಾಜೀನಾಮೆ ಕೊಡುವೆ: ಶಾಸಕ ಬೇಳೂರು ಗೋಪಾಲಕೃಷ್ಣ

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನಗಳು ಖಚಿತ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಅವರು ಹೇಳಿದಷ್ಟು ಸೀಟು ಬಂದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ.

ಶಿವಮೊಗ್ಗ (ಮೇ.17): ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನಗಳು ಖಚಿತ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಅವರು ಹೇಳಿದಷ್ಟು ಸೀಟು ಬಂದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಒಂದು ವೇಳೆ ಅಷ್ಟು ಸೀಟು ಬರದಿದ್ದರೆ ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ರಾಜಕೀಯ ನಿವೃತ್ತಿ ಪಡೆಯುತ್ತಾರಾ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲು ಎಸೆದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನನಗೆ ವೋಟು ಕೊಡಿ ಎಂದು ಎಲ್ಲೂ ಕೇಳಲಿಲ್ಲ. ಹಾಗೆ ಕೇಳುವ ತಾಕತ್ತು ಅವರಿಗೆ ಇರಲಿಲ್ಲ. ಅವರು ಮೋದಿಗೆ ವೋಟು ಕೊಡಿ ಎಂದು ಕೇಳಿದ್ದಾರೆ. 

ವಿಮಾನ ನಿಲ್ದಾಣವೊಂದು ಬಿಟ್ಟರೆ ಅವರ ಸಾಧನೆ ಏನು ಇಲ್ಲ. ಯಾವ ಸರ್ಕಾರ ಬಂದಿದ್ದರೂ ವಿಮಾನ ನಿಲ್ದಾಣ ಆರಂಭಿಸುತ್ತಿದ್ದರು. ಅದೇನು ದೊಡ್ಡ ವಿಷಯವೇ ಅಲ್ಲ ಎಂದರು. ಈ ಬಾರಿ ಮೋದಿಯ ಆಟ ನಡೆಯುವುದಿಲ್ಲ. ರಾಘವೇಂದ್ರ ಮತ್ತು ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ಸಾಧನೆಯೆಂದರೆ ಭ್ರಷ್ಟಾಚಾರ ಮಾತ್ರ. ಈ ಭ್ರಷ್ಟಾಚಾರದ ಹಡಬೆ ದುಡ್ಡಿನಿಂದಲೇ ಚುನಾವಣೆ ಮಾಡಿದ್ದಾರೆ. ಅವರ ಆಸ್ತಿಗಳು ಎಲ್ಲೆಲ್ಲಿವೆ ಎಂದು ಗೊತ್ತಿದೆ. ಅವರ ಪಾಪದ ಕೊಡ ತುಂಬುತ್ತಿದೆ. ಈ ಅಪ್ಪ ಮಕ್ಕಳ ಬಗ್ಗೆ ಬಿಜೆಪಿಯ ಮುಖಂಡರೇ ತಿರುಗಿ ಬಿದ್ದಿದ್ದಾರೆ ಎಂದು ಖಾರವಾಗಿ ಹೇಳಿದರು.ಕೋಟ್ಯಾಂತರ ರುಪಾಯಿ ಭ್ರಷ್ಟಾಚಾರ:

Kodagu: ರೈತರ ಖಾಸಗಿ ಭೂಮಿಯಲ್ಲಿರುವ ಮರಗಳ ಸರ್ವೆ ವಿರುದ್ಧ ಬಿಜೆಪಿ ಆಕ್ರೋಶ!

ಶಿವಮೊಗ್ಗದಲ್ಲಿ 2 ಬಹುದೊಡ್ಡ ಹಗರಣಗಳಿವೆ. ಶಾಹಿ ಗಾರ್ಮೆಂಟ್ಸ್‌ಗೆ 285 ಎಕರೆ ಜಮೀನನ್ನು ಕೊಡುವ ಅಗತ್ಯವೇನಿತ್ತು. 10 ಎಕರೆ ಸಾಕಿತ್ತಲ್ಲವೇ. ಸಾಗರದಲ್ಲಿ 5 ಎಕರೆ ಮಾತ್ರ ಕೊಟ್ಟಿದ್ದೇವೆ. ಶಿವಮೊಗ್ಗದಲ್ಲಿ ಏಕೆ? ಈ ಹಗರಣದಲ್ಲಿ ರಾಘವೇಂದ್ರ ಅವರು ಕೋಟ್ಯಾಂತರ ರು. ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಮಾತಿದೆ. ಹಾಗಾಗಿ ಇದನ್ನು ತನಿಖೆ ಮಾಡಬೇಕು. ಹಾಗೆಯೇ ಡಿಸಿಸಿ ಬ್ಯಾಂಕ್‍ನಲ್ಲೂ ಕೂಡ ನೇಮಕಾತಿಗೆ ಸಂಬಂಧಿಸಿದಂತೆ ಕೋಟ್ಯಾಂತರ ರು. ಭ್ರಷ್ಟಾಚಾರದ ಹಗರಣವಾಗಿದೆ. ಇದನ್ನು ಕೂಡ ತನಿಖೆಗೆ ಆಗ್ರಹಿಸಿದರು.

ಯಾರು ಏನೇ ಹೇಳಲಿ ನಮ್ಮ ಪಕ್ಷದವರು ಸುಮ್ಮನಿದ್ದರು ನಾನು ಇದನ್ನು ಬಿಡುವುದಿಲ್ಲ. ಈ ಎರಡು ಪ್ರಮುಖ ಹಗರಣಗಳನ್ನು ಸಿಐಡಿ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ನಮ್ಮ ಸರ್ಕಾರ ಇದನ್ನು ತನಿಖೆಗೊಳಪಡಿಸದಿದ್ದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಎಸ್‌ಐಟಿ ಸಾಕು:

ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣವನ್ನು ಹೇಳುವುದಕ್ಕೆ ನಾಚಿಕೆಯಾಗುತ್ತದೆ. ಈ ಎಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳಿಂದ ನಮ್ಮ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದಿದ್ದರು. ಈಗ ಪ್ರಜ್ವಲ್ ದಾರಿ ತಪ್ಪಿದ್ದಾನೆ. ಅದಕ್ಕೆ ಯಾರು ಹೊಣೆ. ರಾಜ್ಯ ಸರ್ಕಾರ ಹೆಚ್ಚು ವಿಳಂಬ ಮಾಡದೇ ಆತನನ್ನು ಬಂಧಿಸಬೇಕು. ಇಂತಹ ಕೆಟ್ಟ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ತರವಲ್ಲ. ಇದಕ್ಕೆ ಎಸ್‌ಐಟಿನೇ ಸಾಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬಾಲಾಜಿ, ಮಧು, ಜಿ.ಪದ್ಮನಾಬ್ ಮುಂತಾದವರಿದ್ದರು.

ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಬೀಳುತ್ತೆ: ಜಗದೀಶ್‌ ಶೆಟ್ಟರ್‌ ಭವಿಷ್ಯ

ಯಾರು ಬಂದರೂ ಸರ್ಕಾರ ಬೀಳಿಸಲಾಗಲ್ಲ: ಬಿಜೆಪಿಗರು ಲೋಕಸಭೆ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ ಎನ್ನುತ್ತಿದ್ದಾರೆ. ಅದ್ಯಾರೋ ಶಿಂಧೆ ಎನ್ನುವವರು ಕೂಡ ಇದನ್ನೇ ಹೇಳಿದ್ದಾರೆ. ಆದರೆ, ಯಾರೇ ಬರಲಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಭದ್ರವಾಗಿದೆ ಎಂದರು. ಅದ್ಯಾರೋ ಹಿಂದೆ ಕೆಲವು ಮೂರ್ಖರು ಪಕ್ಷಾಂತರ ಮಾಡಿದರು ಎಂದ ಮಾತ್ರಕ್ಕೆ ಈ ಬಾರಿಯ ಕಾಂಗ್ರೆಸ್ ಶಾಸಕರು ಯಾರೂ ಮಾರಾಟಕ್ಕಿಲ್ಲ. ಯಾರೂ ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. ಈ ಸಲ ಕಾಂಗ್ರೆಸ್‍ನಲ್ಲಿ ಇರುವವರು ಸ್ಟ್ರಾಂಗ್ ಎಂಎಲ್‍ಎಗಳು ಎಂದು ಶಾಸಕ ಬೇಳೂರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು - Jaya Bachchan ಬಾಯ್ಕಾಟ್‌ ಆಗ್ತಾರಾ?