
ಕೂಡ್ಲಿಗಿ(ಏ.29): ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಪ್ರಜೆ ಒಂದೇ ಮದುವೆಯಾಗಬೇಕು. ಎರಡೇ ಮಕ್ಕಳನ್ನು ಹೆರಬೇಕು ಎನ್ನುವ ಕಾನೂನು ತರಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.
ಶುಕ್ರವಾರ ತಾಲೂಕಿನ ಹೊಸಹಳ್ಳಿ ಹೋಬಳಿ ಕೇಂದ್ರದ ಮುಖ್ಯರಸ್ತೆಯಲ್ಲಿ ಬಿಜೆಪಿ ಅಭ್ಯರ್ಥಿ ಲೊಕೇಶ್ ನಾಯಕ್ ಪರ ನಡೆದ ರೋಡ್ ಶೋ ವೇಳೆ ಮಾತನಾಡಿ, ಬೇಕಾಬಿಟ್ಟಿಮಕ್ಕಳನ್ನು ಹೆತ್ತು ದೇಶದ ಸೌಲಭ್ಯ ಪಡೆದುಕೊಂಡು ‘ಪಾಕಿಸ್ತಾನ್ ಜಿಂದಾಬಾದ್’ ಎನ್ನುವರಿಗೆ ಪಾಠ ಕಲಿಸಬೇಕು ಎಂದರು.
ಮೋದಿ ನಾಗರಹಾವು ಆದ್ರೆ, ಸೋನಿಯಾ ಗಾಂಧಿ ವಿಷಕನ್ಯೆನಾ?: ಯತ್ನಾಳ್
ರಾಜ್ಯದಲ್ಲಿ ಐದು ದಶಕಗಳ ಆಳ್ವಿಕೆ ಮಾಡಿದ ಕಾಂಗ್ರೆಸ್ ಸಾಮಾಜಿಕ ನ್ಯಾಯ ನೀಡದೆ ವಂಚನೆ ಮಾಡಿದೆ. ಬಿಜೆಪಿ ಮಾತ್ರ ಸಾಮಾಜಿಕ ನ್ಯಾಯದ ಪ್ರಕಾರ ಮೀಸಲಾತಿ ಹೆಚ್ಚಳ ಮಾಡಿದೆ ಎಂದರು.
ಕೇಂದ್ರದಲ್ಲಿ ಬಿಜೆಪಿಯ ಮೋದಿ ಆಡಳಿತದ ಸರ್ಕಾರ ಅಧಿಕಾರದಲ್ಲಿದ್ದು, ಇಡೀ ಭಾರತವೇ ಭಯೋತ್ಪಾದನೆ ಯಿಂದ ಮುಕ್ತವಾಗಿ ನೆಮ್ಮದಿ ಯಿಂದ ಜನರು ಜೀವನ ನಡೆಸುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ಗೆ ಮತ ನೀಡಿದರೆ ಆತ್ಮಹತ್ಯೆ ಮಾಡಿಕೊಂಡಂತೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.