ಯಡಿಯೂರಪ್ಪ ಬಿಟ್ಟುಕೊಟ್ರೆ ನನಗೂ ಸಿಎಂ ಆಗುವ ಆಸೆ: ಮನದಾಳವನ್ನು ಬಿಚ್ಚಿಟ್ಟ ಸಚಿವ

Published : Jun 25, 2021, 10:20 PM ISTUpdated : Jun 25, 2021, 10:26 PM IST
ಯಡಿಯೂರಪ್ಪ ಬಿಟ್ಟುಕೊಟ್ರೆ ನನಗೂ ಸಿಎಂ ಆಗುವ ಆಸೆ:  ಮನದಾಳವನ್ನು ಬಿಚ್ಚಿಟ್ಟ ಸಚಿವ

ಸಾರಾಂಶ

* ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ  * ನನಗೂ ಸಿಎಂ ಆಗಬೇಕು ಎಂಬ ಆಸೆಯಿದೆ  ಎಂದ ಸಚಿವ * ಸಿಎಂ ಆಗುವ ಮನದಾಳವನ್ನು ಬಿಚ್ಚಿಟ್ಟ ಮಂತ್ರಿ

ಬೆಂಗಳೂರು, (ಜೂನ್.25): ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ ನಡೆದಿದೆ. ಒಂದು ಕಡೆ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಕೂಗು ಎದ್ದಿದ್ದರೆ, ಮತ್ತೊಂದೆಡೆ ಬಿಜೆಪಿಯಲ್ಲಿ ನಾಯಕತ್ವ ಚರ್ಚೆ ಮಧ್ಯೆ ಸಚಿವರೊಬ್ಬರು ಸಿಎಂ ಆಗುವ ಆಸೆ ವ್ಯಕ್ತಡಿಸಿದ್ದಾರೆ.

ಹೌದು...ನನಗೂ ಸಿಎಂ ಆಗಬೇಕು ಎಂಬ ಆಸೆಯಿದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

'ರಮೇಶ್ ಜಾರಕಿಹೋಳಿ ರಾಜೀನಾಮೆ: ಆತುರದ ನಿರ್ಧಾರದ ಬೇಡ ಎಂದಿದ್ದೇವೆ'

ರಾಜಕೀಯದಲ್ಲಿ ಎಲ್ಲರಿಗೂ ಸಿಎಂ ಆಗುವ ಆಸೆ ಇದ್ದೇ ಇದೆ. ಅದೇ ರೀತಿ ಮುಖ್ಯಮಂತ್ರಿ ಪದವಿಗೆ ಏರುವ ಆಸೆ ಸಹಜವಾಗಿ ನನಗೂ ಇದೆ. ಸಿಎಂ ಹುದ್ದೆಯನ್ನು ಯಡಿಯೂರಪ್ಪ ಅವರು ಬಿಟ್ಟುಕೊಟ್ಟರೇ ನನಗೂ ಸಿಎಂ ಆಗೋ ಆಸೆ ಇದೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ನಲ್ಲಿನ  ಮುಂದಿನ ಸಿಎಂ ಚರ್ಚೆಯನ್ನು ವ್ಯಂಗ್ಯವಾಡಿದರು.

ಕಾಂಗ್ರೆಸ್​ ಪಕ್ಷಕ್ಕೆ ಬಹುಮತ ಬಂದ ನಂತರ ಮುಂದಿನ ಸಿಎಂ ಅಭ್ಯರ್ಥಿಯ ಬಗ್ಗೆ ಮಾತಾಡಬೇಕು. ಆದರೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಯುತ್ತಿದ್ದಾರೆ. ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಆಸೆಯಿದೆ. ಆದರೆ ಈಗಿನ್ನೂ ಚುನಾವಣೆ ನಡೆದಿಲ್ಲ, ಶಾಸಕರು ಆಯ್ಕೆಯಾಗಿಲ್ಲ. ಬಹುಮತವೂ ಇಲ್ಲ. ಅದಕ್ಕೂ ಮುಂಚೆ ಸಿಎಂ ಪದವಿಗಾಗಿ ಕಿತ್ತಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!