ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಗರ್‌ಹುಕುಂ ರೈತರ ರಕ್ಷ​ಣೆ: ಮಧು ಬಂಗಾರಪ್ಪ

Published : Apr 02, 2023, 03:20 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಗರ್‌ಹುಕುಂ ರೈತರ ರಕ್ಷ​ಣೆ: ಮಧು ಬಂಗಾರಪ್ಪ

ಸಾರಾಂಶ

ತಾಳಗುಪ್ಪದಲ್ಲಿ ರೈತರಿಗಾದ ಅನ್ಯಾಯ ತಾಲೂಕು, ಜಿಲ್ಲೆಯಲ್ಲಿ ಇನ್ನೆಂದೂ ಮರುಕಳಿಸದಂತೆ ಕಾಂಗ್ರೆಸ್‌ವನ್ನು ಅಧಿಕಾರಕ್ಕೆ ತರುವ ಅಗತ್ಯವಿದೆ. ತಾವು ಅಧಿಕಾರಕ್ಕೆ ಬಂದಲ್ಲಿ ಜನರ ವಿಶ್ವಾಸ ಉಳಿಸಿಕೊಳ್ಳುವ ಜತೆಗೆ ಯಾವೊಬ್ಬ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸೊರಬ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಮಧು ಬಂಗಾರಪ್ಪ ಹೇಳಿದರು. 

ಸೊರಬ (ಏ.02): ತಾಳಗುಪ್ಪದಲ್ಲಿ ರೈತರಿಗಾದ ಅನ್ಯಾಯ ತಾಲೂಕು, ಜಿಲ್ಲೆಯಲ್ಲಿ ಇನ್ನೆಂದೂ ಮರುಕಳಿಸದಂತೆ ಕಾಂಗ್ರೆಸ್‌ವನ್ನು ಅಧಿಕಾರಕ್ಕೆ ತರುವ ಅಗತ್ಯವಿದೆ. ತಾವು ಅಧಿಕಾರಕ್ಕೆ ಬಂದಲ್ಲಿ ಜನರ ವಿಶ್ವಾಸ ಉಳಿಸಿಕೊಳ್ಳುವ ಜತೆಗೆ ಯಾವೊಬ್ಬ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಸೊರಬ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಮಧು ಬಂಗಾರಪ್ಪ ಹೇಳಿದರು. ಪಟ್ಟಣದ ಬಂಗಾರಧಾಮದಲ್ಲಿ ವಿವಿಧ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಕಾರ್ಯಕರ್ತರು, ಮುಖಂಡರನ್ನು ಅಭಿನಂದಿಸಿ ಮಾತನಾಡಿದ ಅವರು, ಜನತೆ ತಮ್ಮನ್ನು ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳಿಸಿದರೆ ರೈತರ ಧ್ವನಿಯಾಗಿ ಕೆಲಸ ಮಾಡುತ್ತೇನೆ. 

ಬಗರ್‌ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿದಾರರಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಎಸ್‌.ಬಂಗಾರಪ್ಪ ಅವರಿಗೆ ಬಂಗಾರಪ್ಪ ಅವರೇ ಸಾಟಿ. ರಾಜ್ಯದಲ್ಲಿ ಮತ್ತೊಬ್ಬ ಎಸ್‌.ಬಂಗಾರಪ್ಪ ಜನಿಸಲು ಸಾಧ್ಯವಿಲ್ಲ. ಅವರ ಮಾರ್ಗದರ್ಶನ ಮುಂದಿಟ್ಟುಕೊಂಡು ಮುನ್ನೆಡೆದಾಗ ಮಾತ್ರ ಜನಸಾಮಾನ್ಯರ ಹಿತಕಾಯಲು ಸಾಧ್ಯ ಎಂದರು. ಕ್ಷೇತ್ರದಲ್ಲಿ ನನ್ನ ನಾಯಕತ್ವವನ್ನು ಬೆಂಬಲಿಸಿ ಅನೇಕರು ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿರುವುದನ್ನು ಸ್ವಾಗತಿಸುವ ಜೊತೆಗೆ ತಮ್ಮ ಮೇಲೆ ಜವಾಬ್ದಾರಿಯೂ ಹೆಚ್ಚಾಗಿದೆ. 

ನನ್ನ ಅಭಿವೃದ್ಧಿ ನೋಡಿ ಮತ್ತೊಮ್ಮೆ ನನಗೆ ಆಶೀರ್ವದಿಸಿ: ಶಾಸಕ ಹರ್ಷವರ್ಧನ್‌

ವೈಯುಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕಾಂಗ್ರೆಸ್‌ ಗೆಲ್ಲಿಸುವುದು ನಮ್ಮೆಲ್ಲರ ಹೊಣೆ ಎಂದರು. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ಜಿಪಂ ಮಾಜಿ ಸದಸ್ಯ ಸತೀಶ್‌ ಅರ್ಜುನಪ್ಪ ಮಾತನಾಡಿ, ಬಿಜೆಪಿಯಲ್ಲಿ ಪ್ರಾಮಾಣಿಕವಾಗಿ ದುಡಿದವರಿಗೆ ಗೌರವ ಮತ್ತು ಬೆಲೆ ಇಲ್ಲದಂತಾಗಿದೆ. ಕ್ಷೇತ್ರದ ಬಿಜೆಪಿಯಲ್ಲಿ ಆಮ್ಲಜನಕದ ಕೊರತೆ ಇದೆ. ಒಂದು ಸಿಲಿಂಡರ್‌ ಶಾಸಕರ ಬಳಿ ಇದ್ದರೆ, ಮತ್ತೊಂದು ಸಿಲಿಂಡರ್‌ ಶಿಕಾರಿಪುರದಲ್ಲಿದೆ. ಸಾಮಾನ್ಯರ ಸ್ಥಿತಿ ಆಮ್ಲಜನಕದ ಕೊರತೆಯಿಂದ ನರಳುವಂತಾಗಿರುವುದು ಇಲ್ಲಿನ ರಾಜಕೀಯ ಸ್ಥಿತಿಯಾಗಿದೆ. ಮಧು ಬಂಗಾರಪ್ಪ ಅವರಿಗೆ ಎಲ್ಲ ಪಕ್ಷದವರನ್ನು ವಿಶ್ವಾಸದಿಂದ ಕಾಣುವ ಗುಣ ಅವರಲ್ಲಿದೆ. 

ಅವರನ್ನು ಮುಂದಿನ ಶಾಸಕರನ್ನಾಗಿಸುವ ಜೊತೆಗೆ ಸಚಿವರನ್ನಾಗಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು. ತಾಪಂ ಮಾಜಿ ಸದಸ್ಯರಾದ ಪುರುಷೋತ್ತಮ ಕುಪ್ಪಗಡ್ಡೆ, ಹನುಮಂತಪ್ಪ ಆನವಟ್ಟಿ, ವಿಜಯಕುಮಾರ್‌ ಜಡೆ, ದೂಗೂರು ಗ್ರಾಪಂ ಅಧ್ಯಕ್ಷೆ ತುಳಸಿ, ಉಪಾಧ್ಯಕ್ಷ ಫಯಾಜ್‌ ಅಹ್ಮದ್‌, ಉಳವಿ ಗ್ರಾಪಂ ಸದಸ್ಯೆ ನಾಗಮ್ಮ, ಭೈರಪ್ಪ, ಮುಖಂಡರಾದ ನಿಂಗಪ್ಪ ಗುಂಡಶೆಟ್ಟಿಕೊಪ್ಪ, ಜೈಶೀಲಪ್ಪ, ಅಶೋಕ್‌ ಹೊಸಬಾಳೆ ಸೇರಿದಂತೆ ಅನೇಕ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. 

ಬ್ಲಾಕ್‌ ಅಧ್ಯಕ್ಷರಾದ ಅಣ್ಣಪ್ಪ ಹಾಲಘಟ್ಟ, ಅಧ್ಯಕ್ಷ ಸದಾನಂದ ಗೌಡ ಬಿಳಗಲಿ, ಮಹಿಳಾ ಅಧ್ಯಕ್ಷೆ ಸುಜಾತಾ ಜೋತಾಡಿ, ಪ್ರಚಾರ ಸಮಿತಿ ಅಧ್ಯಕ್ಷ ಕೆ.ವಿ. ಗೌಡ, ಯುವ ಘಟಕದ ಅಧ್ಯಕ್ಷ ಕೆ.ಪಿ. ಪ್ರವೀಣ್‌ ಕುಮಾರ್‌, ಮಾಜಿ ಜಿಪಂ ಸದಸ್ಯರಾದ ತಬಲಿ ಬಂಗಾರಪ್ಪ, ಶಿವಲಿಂಗೇಗೌಡ, ವೀರೇಶ್‌ ಕೊಟಗಿ, ಮುಖಂಡರಾದ ಎಚ್‌. ಗಣಪತಿ, ಎಂ.ಡಿ. ಶೇಖರ್‌ ಮತ್ತಿತರರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಅಭ್ಯರ್ಥಿಗಳ ಆಯ್ಕೆ ಬಿಜೆಪಿ ಸಂಸದೀಯ ಸಭೆಯಲ್ಲಿ ಅಂತಿಮ: ಶಾಸಕ ಬಸನಗೌಡ ಯತ್ನಾಳ

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೇಲೆ ಪ್ರತಿಯೊಬ್ಬ ಶಾಸಕನೂ ಜನರನ್ನು ಪ್ರೀತಿ-ವಿಶ್ವಾಸದಿಂದ ಕಾಣುವುದು ಆತನ ಜವಾಬ್ದಾರಿ. ಆದರೆ ಕುಮಾರ ಬಂಗಾರಪ್ಪ ಯಾರನ್ನೂ ಪ್ರೀತಿಯಿಂದ ಕಾಣುವ ವ್ಯಕ್ತಿತ್ವ ಬೆಳೆಸಿಕೊಂಡಿಲ್ಲ. ‘ಅಶ್ವಮೇಧ’ ಚಲನಚಿತ್ರದ ಓರಿಜಿನಲ್‌ ನಿರ್ಮಾಪಕನಾಗಿ ಸಿನಿಮಾ ತೆಗೆದದ್ದು ನಾನು. ಡೂಪ್ಲಿಕೇಟ್‌ ಸಿಂಗರ್‌ ಅಲ್ಲಿ ಇಲ್ಲಿ ಹಾಡಿಕೊಂಡು ಓಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅದೇ ಅವರಿಗೆ ಪರ್ಮನೆಂಟ್‌ ಜಾಬ್‌ ಆಗಬಹುದು
- ಮಧು ಬಂಗಾರಪ್ಪ, ಕಾಂಗ್ರೆಸ್‌ ಅಭ್ಯರ್ಥಿ, ಸೊರಬ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ