2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ 10 ಕೆ.ಜಿ. ಉಚಿತ ಅಕ್ಕಿ: ಸಿದ್ದರಾಮಯ್ಯ

Published : May 09, 2022, 03:10 AM IST
2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ 10 ಕೆ.ಜಿ. ಉಚಿತ ಅಕ್ಕಿ:  ಸಿದ್ದರಾಮಯ್ಯ

ಸಾರಾಂಶ

ಮುಂಬರುವ 2023ರ ಚುನಾವಣೆಯಲ್ಲಿ ಜನಾಶೀರ್ವಾದಿಂದ ನಾವು ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿ ಉಚಿ​ತ​ವಾಗಿ ಕೋಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿ​ಸಿ​ದ​ರು.

ಬೆಳಗಾವಿ (ಮೇ.09): ಮುಂಬರುವ 2023ರ ಚುನಾವಣೆಯಲ್ಲಿ ಜನಾಶೀರ್ವಾದಿಂದ ನಾವು ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿ ಉಚಿ​ತ​ವಾಗಿ (Rice) ಕೋಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಘೋಷಿ​ಸಿ​ದ​ರು. ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಭಾನು​ವಾ​ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಉದ್ಘಾಟಿಸಿ ಮಾತನಾಡಿ, ಅಗತ್ಯವಸ್ತು ಬೆಲೆ ದುಪ್ಪ​ಟ್ಟಾ​ಗಿ​ದೆ. 

ಒಂದು ಕಡೆ ಬೆಲೆ ಏರಿಕೆ ಇನ್ನೊಂದು ಕಡೆ ಲೂಟಿ ಹೊಡೆಯುವುದು ನಡೆ​ಯು​ತ್ತಿ​ದೆ. ಪಿಎಸ್‌ಐ ನೇಮಕಾತಿಯಲ್ಲಿ (PSI Recruitment Scam) ಸುಮಾರು .300 ಕೋಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು. ಇಂಥ ಸರ್ಕಾರ ಯಾವುದೇ ಕಾರ​ಣಕ್ಕೂ ಇರ​ಬಾ​ರದು, ಇಂಥ ಸರ್ಕಾ​ರ​ವನ್ನು ಬೇರು ಸಮೇತ ಕಿತ್ತು ಎಸೆದಾಗ ದೇಶ, ನಾವು, ನೀವು ಉಳಿ​ಯು​ತ್ತೇ​ವೆ. ಈ ಸರ್ಕಾರಕ್ಕೆ ಕಣ್ಣು ಕಾಣಿಸಲ್ಲ, ಕಿವಿಯೂ ಕೇಳಿಸಲ್ಲ. ಈ ಸರ್ಕಾರದ್ದು ಎಮ್ಮೆ ಚರ್ಮ ಅಲ್ಲ, ಘೇಂಡಾಮೃಗದ ಚರ್ಮ ಎಂದು ತೀವ್ರ ಕಿಡಿಕಾರಿದರು.

Karnataka Politics: ಸಿದ್ರಾಮಣ್ಣನಷ್ಟು ಭ್ರಷ್ಟಾಚಾರಿ ಈ ರಾಜ್ಯದಲ್ಲಿ ಬೇರಿಲ್ಲ: ನಳಿನ್‌ ಕುಮಾರ್‌ ಕಟೀಲ್‌

ಕೈ ಜೋಡಿಸಿ ಕೇಳುವೆ ಮತ್ತೆ ಅವಕಾಶ ಕೊಡಿ: ಕೈಜೋಡಿಸಿ ಪ್ರಾರ್ಥನೆ ಮಾಡು​ತ್ತೇನೆ, ಮತ್ತೆ ಕಾಂಗ್ರೆಸ್‌ಗೆ (Congress) ಅವಕಾಶ ಕೊಡಿ. ಕೊರೋನಾ (Corona) ಕಾಲ​ದಲ್ಲಿ ಅನ್ನಭಾಗ್ಯ ಕಾರ್ಯಕ್ರಮ ಇಲ್ಲದಿದ್ದರೆ ಜನ ಬದುಕಲು ಆಗು​ತ್ತಿತ್ತಾ? ರಾಜ್ಯದಲ್ಲೀಗ ಜನ ವಿರೋಧಿ ಸರ್ಕಾರ ಅಧಿ​ಕಾ​ರ​ದ​ಲ್ಲಿದೆ. ಈ ಸರ್ಕಾರ ಯಾವುದೇ ಕಾರ​ಣಕ್ಕೂ ಮುಂದು​ವ​ರಿ​ಯ​ಬಾ​ರ​ದು ಎಂದು ಆಕ್ರೋಶ ಹೊರ​ಹಾ​ಕಿ​ದ​ರು.

ನೇಕಾರರ ಸಾಲ ಮನ್ನಾ ಮಾಡಿದ್ದು ನಾನು. ಬಿ.ಎ​ಸ್‌.ಯಡಿಯೂರಪ್ಪ (BS Yediyurappa) ಮತ್ತು ಬೊಮ್ಮಾಯಿ (Basavaraj Bommai) ಅವರು ಒಂದೇ ಒಂದು ರುಪಾಯಿ ಸಾಲ ಮನ್ನಾ ಮಾಡಿದ್ದನ್ನು ತೋರಿಸಲಿ ಎಂದು ಸವಾಲು ಹಾಕಿದ ಅವರು, ಪ್ರವಾಹ ಬಂದು ಜನ ಸಂಕ​ಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ಕೊಡಿ ಎಂದು ಯಡಿಯೂರಪ್ಪಗೆ ಹೇಳಿದೆ. ಆದರೆ, ಅವರು ಕೊಡ​ಲೇ ಇಲ್ಲ. ಬಸವರಾಜ ಬೊಮ್ಮಾಯಿ ಕೂಡ ನಿರ್ಲಕ್ಷ್ಯ ಮಾಡಿ​ದ​ರು. ಬಸವರಾಜ ಬೊಮ್ಮಾಯಿ ಚುನಾ​ಯಿತ ಮುಖ್ಯ​ಮಂತ್ರಿ ಅಲ್ಲ, ನೇಮ​ಕ​ಗೊಂಡ ಮುಖ್ಯ​ಮಂತ್ರಿ ಎಂದು ಲೇವಡಿ ಮಾಡಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ​ದ​ಲ್ಲಿ 15 ಲಕ್ಷ ಮನೆ ಕಟ್ಟಿಸಿಕೊಟ್ಟಿದ್ದೆ. ಇವರ ಜನ್ಮಕ್ಕೆ ಒಂದು ಮನೆ ಕಟ್ಟಿಸಿಕೊಡಲೂ ಆಗಿಲ್ಲ. ಏಳು ಕೆ.ಜಿ. ಅಕ್ಕಿಯನ್ನು ನಾನು ಉಚಿತವಾಗಿ ಕೊಟ್ಟಿದ್ದೆ. ಈಗ ಅವರು ಅದ​ರಲ್ಲೂ ಎರಡು ಕೆ.ಜಿ. ಕಡಿಮೆ ಮಾಡಿದ್ದಾರೆ. ಮುಂದೇನು ಮಾಡ್ತಾರೋ ಗೊತ್ತಿಲ್ಲ ಎಂದರು ಸಿದ್ದ​ರಾ​ಮ​ಯ್ಯ.

ಸಿದ್ದರಾಮಯ್ಯಗೆ ಟಕ್ಕರ್​ ಕೊಡಲು ಜೆಡಿಎಸ್ ಸಜ್ಜು, ಎಚ್‌ಡಿಕೆಗೆ ಬಾದಾಮಿಯೇ ಟಾರ್ಗೆಟ್​

ನೇಕಾರರ ಸಾಲ ಮನ್ನಾ ಮಾಡಿದ್ದು ನಾನು. ಯಡಿಯೂರಪ್ಪ ಮತ್ತು ಬೊಮ್ಮಾಯಿ ಒಂದೇ ಒಂದು ರುಪಾಯಿ ಸಾಲ ಮನ್ನಾ ಮಾಡಿದ್ದನ್ನು ತೋರಿಸಲಿ. ಪ್ರವಾಹ ಬಂದು ಜನ ಸಂಕ​ಷ್ಟಕ್ಕೆ ಸಿಲುಕಿದ್ದಾರೆ, ಪರಿಹಾರ ಕೊಡಿ ಎಂದು ಯಡಿಯೂರಪ್ಪಗೆ ಹೇಳಿದೆ. ಆದರೆ, ಅವರು ಕೊಡ​ಲೇ ಇಲ್ಲ. ಬೊಮ್ಮಾಯಿ ಕೂಡ ನಿರ್ಲಕ್ಷ್ಯ ಮಾಡಿ​ದ​ರು.
-ಸಿದ್ದರಾಮಯ್ಯ, ವಿಪಕ್ಷ ನಾಯಕ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ