ಕಾಂಗ್ರೆಸ್‌ ಗೆದ್ದರೆ ಮಡಿವಾಳರಿಗೆ ಎಸ್ಸಿ ಮೀಸಲು: ಸಿದ್ದು

Published : May 23, 2022, 04:52 AM ISTUpdated : May 23, 2022, 02:48 PM IST
ಕಾಂಗ್ರೆಸ್‌ ಗೆದ್ದರೆ ಮಡಿವಾಳರಿಗೆ ಎಸ್ಸಿ ಮೀಸಲು: ಸಿದ್ದು

ಸಾರಾಂಶ

* ಅನ್ನಪೂರ್ಣಮ್ಮ ವರದಿ ಕೇಂದ್ರಕ್ಕೆ ಶಿಫಾರಸು * ಕಾಂಗ್ರೆಸ್‌ ಗೆದ್ದರೆ ಮಡಿವಾಳರಿಗೆ ಎಸ್ಸಿ ಮೀಸಲು: ಸಿದ್ದು * ಮೇಲ್ಮನೆಯಲ್ಲೂ ಪ್ರಾತಿನಿಧ್ಯ ನೀಡಲು ಯತ್ನ: ಮಾಜಿ ಸಿಎಂ ಭರವಸೆ

ತುಮಕೂರು(ಮೇ.23): ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಸರ್ಕಾರ (Congress Government) ಅಧಿಕಾರಕ್ಕೆ ಬಂದಾಗ ಮಡಿವಾಳ ಸಮುದಾಯವನ್ನು (Madivala Community) ಪರಿಶಿಷ್ಟಜಾತಿಗೆ (ಎಸ್‌ಸಿ) ಸೇರಿಸುವ ಸಂಬಂಧ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಡಿಕೆಶಿ vs ಸಿದ್ದರಾಮಯ್ಯ: ಎಂಎಲ್‌ಸಿ ಟಿಕೆಟ್‌ ಬಡಿದಾಟದಲ್ಲಿ ಗೆಲುವು ಯಾರಿಗೆ?

ನಗರದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಮಡಿವಾಳ ಸಮಾಜ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮಡಿವಾಳ ಸಮಾಜದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಡಿವಾಳ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂಬ ಬೇಡಿಕೆ ಇದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಡಿವಾಳ ಸಮಾಜಕ್ಕೆ ಮೇಲ್ಮನೆಯಲ್ಲಿ ಟಿಕೆಟ್‌ ನೀಡಲು ಪ್ರಯತ್ನಿಸುತ್ತೇವೆ. ಸಮಾಜಕ್ಕೆ ಎಸ್ಸಿ ಮೀಸಲಾತಿ ಕಲ್ಪಿಸಲು ಶಿಫಾರಸು ಮಾಡಿರುವ ಅನ್ನಪೂರ್ಣಮ್ಮ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲೂ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇವೆ ಎಂದು ಹೇಳಿದರು.

ಅಸಮಾನತೆಗೆ ಹಿಂದುಳಿದ ಜಾತಿಗಳಲ್ಲ, ಸಾಮಾಜಿಕ ವ್ಯವಸ್ಥೆ ಕಾರಣ. ಶೂದ್ರ ಸಮುದಾಯ ಹಾಗೂ ಪಂಚಮ ವರ್ಗ ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಅಕ್ಷರದಿಂದ ವಂಚಿತರಾದವರು ಅಸಮಾನತೆ ಅನುಭವಿಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇಂದಿಗೂ ಕೆಲ ಸಮುದಾಯಗಳಿಗೆ ಸಮಾನತೆ ಎಂಬುದು ಕನ್ನಡಿಯೊಳಗಿನ ಗಂಟಾಗಿದೆ. ಶೋಷಿತ, ಅವಕಾಶ ವಂಚಿತ ಸಮಾಜಗಳ ಏಳಿಗೆಗೆ ಕಾರ್ಯಕ್ರಮಗಳನ್ನು ರೂಪಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವುದು ಸರ್ಕಾರಗಳ ಆದ್ಯ ಕರ್ತವ್ಯ. ನಾವು ಅಧಿಕಾರಕ್ಕೆ ಬಂದರೆ ಸಾಮಾಜಿಕ ನ್ಯಾಯದಿಂದ ವಂಚಿತರಾದ ಜಾತಿಗಳಿಗೆ ನ್ಯಾಯ ದೊರಕಿಸಿ ಕೊಡುವ ಕೆಲಸ ಮಾಡುತ್ತೇವೆ ಎಂದರು.

ಹೈಕಮಾಂಡ್ ಬುಲಾವ್: ದೆಹಲಿಗೆ ಹಾರಿದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಡಿವಾಳ ಸಮಾಜದ ರಾಜ್ಯಾಧ್ಯಕ್ಷ ಸಿ.ನಂಜಪ್ಪ, ಕರ್ನಾಟಕ ಮಡಿವಾಳ ಸಮಾಜದ ಅಮರನಾಥ್‌, ಮಾಜಿ ಸಚಿವ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ, ಎಚ್‌.ಎಂ.ರೇವಣ್ಣ ಇತರರು ಇದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ