'ಎಂಟಿಬಿ ಗೆದ್ರೆ ಬರೀ ಸಚಿವ: ನಾನು ಗೆದ್ದರೆ ಬಿಜೆಪಿ ಸರ್ಕಾರ ಪತನ, ಸಿದ್ದು ಸಿಎಂ!'

Published : Nov 21, 2019, 12:30 PM ISTUpdated : Nov 21, 2019, 05:30 PM IST
'ಎಂಟಿಬಿ ಗೆದ್ರೆ ಬರೀ ಸಚಿವ: ನಾನು ಗೆದ್ದರೆ ಬಿಜೆಪಿ ಸರ್ಕಾರ ಪತನ, ಸಿದ್ದು ಸಿಎಂ!'

ಸಾರಾಂಶ

ಎಂಟಿಬಿ ಗೆದ್ರೆ ಬರೀ ಸಚಿವ, ನಾನು ಗೆದ್ದರೆ ಸಿದ್ದು ಸಿಎಂ!| ನಾನು ಗೆದ್ದರೆ ಬಿಜೆಪಿ ಸರ್ಕಾರ ಪತನ: ಪದ್ಮಾವತಿ

ಸೂಲಿಬೆಲೆ[ನ.21]: ಮತ​ದಾ​ರರು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್‌ ಅವ​ರ​ನ್ನು ಗೆಲ್ಲಿಸಿದರೆ, ಅವ​ರು ಮಂತ್ರಿಯಾಗಬಹುದು. ಆದರೆ, ನನಗೆ ಮತ ಹಾಕಿ ಗೆಲ್ಲಿಸಿದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮಾವತಿ ಸುರೇಶ್‌ ಹೇಳಿದ್ದಾರೆ.

ಹೊಸಕೋಟೆ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಬೇಕೋ? ಎಂಟಿಬಿ ಸಚಿವರಾಗಬೇಕೋ? ಎಂಬುದನ್ನು ಯೋಚನೆ ಮಾಡಿ. ನನ್ನ ಗೆಲುವಿನೊಂದಿಗೆ ಈ ಸರ್ಕಾರ ಪತನವಾಗುತ್ತದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ. ಹೊಸಕೋಟೆ ಕ್ಷೇತ್ರ ಬೆಂಗಳೂರಿನಂತೆ ಅಭಿವೃದ್ಧಿ ಆಗುತ್ತದೆ ಎಂದರು.

ಸಿದ್ದರಾಮಯ್ಯ ಅವ​ರ ಕೊಡುಗೆ ಮುಂದಿಟ್ಟುಕೊಂಡು ನಾವು ಮತ ಯಾಚಿ​ಸು​ತ್ತಿ​ದ್ದೇ​ವೆ. ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹೊಸಕೋಟೆಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಪದ್ಮಾ​ವತಿ ಸುರೇಶ್‌ ಹೇಳಿದರು.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

ನವೆಂಬರ್ 21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್