ಜೆಡಿ​ಎಸ್‌ ಅಧಿ​ಕಾ​ರಕ್ಕೆ ಬಂದಲ್ಲಿ ಪಂಚ​ರತ್ನ ಜಾರಿಗೆ: ನಿಖಿಲ್‌ ಕುಮಾ​ರ​ಸ್ವಾ​ಮಿ

Published : Dec 28, 2022, 08:45 AM IST
ಜೆಡಿ​ಎಸ್‌ ಅಧಿ​ಕಾ​ರಕ್ಕೆ ಬಂದಲ್ಲಿ ಪಂಚ​ರತ್ನ ಜಾರಿಗೆ: ನಿಖಿಲ್‌ ಕುಮಾ​ರ​ಸ್ವಾ​ಮಿ

ಸಾರಾಂಶ

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಜನತೆ ಜೆಡಿಎಸ್‌ಗೆ ಸರ್ಕಾರ ರಚಿಸಲು ಪೂರ್ಣ ಆಶೀರ್ವಾದ ಮಾಡಿದ್ದಲ್ಲಿ, ಪಕ್ಷದ ಪ್ರಮುಖ ಪ್ರಣಾಳಿಕೆಯಾದ ಪಂಚರತ್ನ ಯೋಜನೆ ಜಾರಿಗೆ ತರುವು​ದಾಗಿ ಜೆಡಿಎಸ್‌ ಯುವ ಘಟಕ ರಾಜ್ಯಾ​ಧ್ಯಕ್ಷ ನಿಖಿಲ್‌ ಕುಮಾ​ರ​ಸ್ವಾಮಿ ಹೇಳಿ​ದರು.

ಕನಕಪುರ (ಡಿ.28): ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಜನತೆ ಜೆಡಿಎಸ್‌ಗೆ ಸರ್ಕಾರ ರಚಿಸಲು ಪೂರ್ಣ ಆಶೀರ್ವಾದ ಮಾಡಿದ್ದಲ್ಲಿ, ಪಕ್ಷದ ಪ್ರಮುಖ ಪ್ರಣಾಳಿಕೆಯಾದ ಪಂಚರತ್ನ ಯೋಜನೆ ಜಾರಿಗೆ ತರುವು​ದಾಗಿ ಜೆಡಿಎಸ್‌ ಯುವ ಘಟಕ ರಾಜ್ಯಾ​ಧ್ಯಕ್ಷ ನಿಖಿಲ್‌ ಕುಮಾ​ರ​ಸ್ವಾಮಿ ಹೇಳಿ​ದರು.

ತಾಲೂಕಿನ ಮರಳವಾಡಿ ಗ್ರಾಮದ ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ರಾಮಕೃಷ್ಣರವರ ನಿವಾಸದಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ಮಾತು ಕೊಟ್ಟಂತೆ ರೈತರ ಸಾಲ ಮನ್ನಾ ಮಾಡಲಾಯಿತು. ಈ ಬಾರಿಯೂ ಸ್ತ್ರೀಶಕ್ತಿ ಸಂಘದಲ್ಲಿ ಪಡೆದ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದೇವೆ. ಪ್ರಣಾಳಿಕೆಯಲ್ಲಿ ತಿಳಿಸಿರು​ವಂತೆ ಎಲ್ಲಾ ವರ್ಗದ ಮಕ್ಕಳಿಗೂ ವಿದ್ಯಾಭ್ಯಾಸ, ಉದ್ಯೋಗ, ನಿರ್ವಸಿತರಿಗೆ ಮನೆ ನೀಡಿಯೇ ತೀರುತ್ತೇವೆ ಎಂದರು.

ಮಾತೃದ್ರೋಹ ಮಾಡಿದವರಿಗೆ ಬುದ್ಧಿ ಕಲಿಸಿ: ನಿಖಿಲ್‌ ಕುಮಾರಸ್ವಾಮಿ

ನಮ್ಮ ತಂದೆ ಹಾಗೂ ತಾಯಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ ಮೇಲೆ ಕ್ಷೇತ್ರದ ಮೂಲಭೂತ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇತ್ತೀಚೆಗೆ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಮಳೆಯಿಂದ ಹಾನಿಗೊಳಗಾದ ನಾಲೆಗಳ ದುರಸ್ತಿಗೆ 80 ಕೋಟಿ ರು.ಗಳ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ಅಭಿವೃದ್ಧಿ ವಿಚಾರದಲ್ಲಿ ನಾವು ಎಂದು ಏಕಪಕ್ಷೀಯವಾಗಿ ನಡೆದುಕೊಂಡಿಲ್ಲ, ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ನಾವು ಕ್ಷೇತ್ರದ ಜನರನ್ನು ಕೈಬಿಡಲಿಲ್ಲ ಎಂದು ತಿಳಿಸಿದರು.

ಕೊ​ರೋನಾ ವಾರಿಯರ್ಸ್‌ ಆಗಿ ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸಿದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಸರ್ಕಾರ ತಮಗೆ ನೀಡುತ್ತಿರುವ ವೇತನದ ಹೆಚ್ಚಳದ ಬಗ್ಗೆ ಬೇಡಿಕೆಯಿಟ್ಟಿದ್ದು, ಇದನ್ನು ಕುಮಾರಸ್ವಾಮಿ ಗಂಭೀರವಾಗಿ ತೆಗೆದುಕೊಂಡು ಇದರ ಪರಿಹಾರಕ್ಕೂ ಯೋಜನೆ ರೂಪಿಸಿಕೊಂಡಿರುವುದಾಗಿ ಹೇಳಿ​ದರು.

ಕ್ಷೇತ್ರದ ಒಮ್ಮತದ ಅಭ್ಯರ್ಥಿ: ರಾಮನಗರ ಕ್ಷೇತ್ರದ ಜನರ ಒತ್ತಾಯದ ಮೇಲೆ ಪಕ್ಷ ನನ್ನನ್ನು ಮುಂದಿನ ವಿಧಾನಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಇದರಲ್ಲಿ ಕುಟುಂಬ ರಾಜಕಾರಣದ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಈ ಹಿಂದೆ ಮಾಜಿ ಶಾಸಕ ಕೆ.ರಾಜು ಅವರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟು ಶಾಸಕರನ್ನಾಗಿ ಮಾಡಿದೆವು. ಈಗ ಅವರು ಜನ​ರಿಗೆ ದ್ರೋಹ ಬಗೆದು ಪಕ್ಷಾಂತರ ಮಾಡಿ ಜನತೆಯ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಇದರಿಂದಾಗಿಯೇ ಕ್ಷೇತ್ರದ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು, ಜನರು ಪಕ್ಷದ ಮೇಲೆ ಒತ್ತಡ ಹೇರಿ ನನಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ ಎಂದು ಹೇಳಿದರು.

ಲಿಂಗಪ್ಪರಿಗೆ ವಯ​ಸ್ಸಾಗಿದೆ ಅಭಿ​ವೃದ್ಧಿ ಕೆಲಸ ಕಾಣು​ತ್ತಿಲ್ಲ: ಅನಿತಾ ಕುಮಾರಸ್ವಾಮಿ

ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ರಾಮಕೃಷ್ಣ, ಗ್ರಾ.ಪಂ ಮಾಜಿ ಅಧ್ಯಕ್ಷ​ರಾದ ಭೈರೇಗೌಡ, ಸಿದ್ದರಾಜು, ಸುನೇತ್ರ ಶಿವರುದ್ರೇಗೌಡ, ಬನವಾಸಿ ಬಸವರಾಜು, ರೆಹಮತ್‌, ಗ್ರಾಪಂ ಅಧ್ಯಕ್ಷ ರಾಮು, ನಾರಾಯಣ್‌, ವಿಎಸ್‌ ಎಸ್‌ಎನ್‌ ಅಧ್ಯಕ್ಷ ಸೋಮು, ತಾಪಂ ಮಾಜಿ ಸದಸ್ಯ ರಾಮು, ಪ್ರದೀಪ್‌, ಅನಿಲ್ ಮತ್ತಿ​ತ​ರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ