ವಾಟ್ಸಾಪ್‌ ಗ್ರೂಪಲ್ಲಿ ಮತ ಕೇಳಿದ್ರೆ ಅಡ್ಮಿನ್‌ ಮೇಲೆ ಕ್ರಮ: ಚುನಾವಣಾ ಆಯೋಗ

Published : Apr 08, 2023, 11:08 AM IST
ವಾಟ್ಸಾಪ್‌ ಗ್ರೂಪಲ್ಲಿ ಮತ ಕೇಳಿದ್ರೆ ಅಡ್ಮಿನ್‌ ಮೇಲೆ ಕ್ರಮ: ಚುನಾವಣಾ ಆಯೋಗ

ಸಾರಾಂಶ

ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಟ್ರೋಲ್‌ ಪೇಜ್‌ ಹಾಗೂ ವಾಟ್ಸಾಪ್‌ ಗ್ರೂಪ್‌ ಆಡ್ಮಿನ್‌ಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಚುನಾವಣೆ ವಿಭಾಗದ ವಿಶೇಷ ಆಯುಕ್ತ ಉಜ್ವಲ್‌ ಕುಮಾರ್‌ ಘೋಷ್‌ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಏ.08): ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಟ್ರೋಲ್‌ ಪೇಜ್‌ ಹಾಗೂ ವಾಟ್ಸಾಪ್‌ ಗ್ರೂಪ್‌ ಆಡ್ಮಿನ್‌ಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಚುನಾವಣೆ ವಿಭಾಗದ ವಿಶೇಷ ಆಯುಕ್ತ ಉಜ್ವಲ್‌ ಕುಮಾರ್‌ ಘೋಷ್‌ ಎಚ್ಚರಿಕೆ ನೀಡಿದ್ದಾರೆ. 

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ವಿಧಾನಸಭೆ ಚುನಾವಣೆ ಅಂಗವಾಗಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ಹಮ್ಮಿಕೊಂಡ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಈ ಬಾರಿ ಸಾಮಾಜಿಕ ಜಾಲತಾಣ ಬಳಕೆದಾರರ ಮೇಲೆ ಚುನಾವಣೆ ಆಯೋಗ ವಿಶೇಷ ನಿಗಾ ವಹಿಸುತ್ತಿದೆ. ಹೆಚ್ಚು ಬಳಕೆ ಆಗುವ ವಾಟ್ಸಾಪ್‌ ಗ್ರೂಪ್‌, ಟ್ರೋಲ್‌ ಪೇಜ್‌ಗಳ ಮೇಲೆ ನಿಗಾ ವಹಿಸಿ ಆಡ್ಮಿನ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಭ್ಯರ್ಥಿಗಳ ಪರವಾಗಿ ಮತ ಯಾಚನೆ, ಪ್ರಭಾವ ಬೀರುವ ಸಂದೇಶಗಳು ಬಂದಲ್ಲಿ ನೇರವಾಗಿ ಆಯೋಗಕ್ಕೆ ದೂರು ನೀಡಬಹುದು ಎಂದು ತಿಳಿಸಿದರು.

ಕನ್ನಡ ಅಸ್ಮಿತೆ ಮುಗಿಸಲು ಬಿಜೆಪಿ ಸಂಚು: ಪ್ರಿಯಾಂಕ್‌ ಖರ್ಗೆ

ಆನ್‌ಲೈನ್‌ ಹಣ ವರ್ಗ ಮೇಲೆ ನಿಗಾ: ಗೂಗಲ್‌ ಪೇ, ಇನ್ನಿತರ ಇ-ಅಕೌಂಟ್‌ಗಳಿಂದ ಬೇರೆ ಬೇರೆ ಅಕೌಂಟ್‌ಗಳಿಗೆ ಹಣ ಸಂದಾಯವಾಗಿರುವ ಬಗ್ಗೆ ಪ್ರಕರಣ ದಾಖಲಾದರೆ ಆ ಬಗ್ಗೆ ತನಿಖೆ ನಡೆಸಲಾಗುವುದು. ಒಂದೇ ಅಕೌಂಟ್‌ನಿಂದ ಸುಮಾರು 50 ರಿಂದ 100 ಮಂದಿಗೆ ಪದೇ ಪದೇ ಹಣ ಪಾವತಿ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಆಯೋಗದಿಂದ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಜಾಹೀರಾತು ನೀಡುವ ರಾಜಕೀಯ ಪಕ್ಷ, ರಾಜಕೀಯ ವ್ಯಕ್ತಿಗಳು ಪೂರ್ವಾನುಮತಿ ಪಡೆಯಬೇಕು. ವರ್ಷವಿಡೀ ಪ್ರಕಟ ಮಾಡುವ ರಾಜಕೀಯಪ್ರೇರಿತ ಜಾಹೀರಾತಿಗೂ ಇದು ಅನ್ವಯವಾಗುತ್ತದೆ. ಈ ಜಾಹೀರಾತಿನಲ್ಲಿ ವೈಯಕ್ತಿಕ ನಿಂದನೆ, ಜಾತಿ, ಧರ್ಮ ಸೂಚಿಸುವ ಯಾವುದೇ ಉಲ್ಲೇಖವಿರಬಾರದು. ನಾಮಪತ್ರ ಸಲ್ಲಿಕೆ ಆರಂಭವಾದ ಮೇಲೆ ವೆಚ್ಚವನ್ನು ಪರಿಗಣಿಸಲಾಗುತ್ತದೆ. ಅಭ್ಯರ್ಥಿ ಪರ ಅಥವಾ ವಿರುದ್ಧವಾಗಿ ಪ್ರಕಟವಾಗುವ ಸುದ್ದಿಗಳನ್ನು ಸುಳ್ಳು ಸುದ್ದಿ ಎಂದು ಪರಿಗಣಿಸಲಾಗುವುದು ಎಂದರು.

ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ವಿಧಾನಸಭಾ ಚುನಾವಣಾ ಮಾಹಿತಿ ಪ್ರಕಟಿಸುವ ವೇಳೆ ಚುನಾವಣಾ ನೀತಿ ಸಂಹಿತೆಯನ್ನು ಪಾಲಿಸುವುದರ ಜತೆಗೆ, ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದ್ದಾರೆ. ಹಾಗೆಯೇ, ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟ ಮಾಡುವ ಮುನ್ನ ಎಂಸಿ ಅಂಡ್‌ ಎ ಕಮಿಟಿಯ ಪೂರ್ವ ಪ್ರಮಾಣೀಕರಣ ಪಡೆದಿರಬೇಕು. ಮುದ್ರಣ ಮಾಧ್ಯಮಕ್ಕೆ ಮತದಾನದ ಮುಂಚಿನ 48 ಗಂಟೆಗಳವರೆಗೆ ಅನ್ವಯವಾಗಲಿದೆ. ಚುನಾವಣಾ ಸಂದರ್ಭದಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು. 

ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್‌ಗೆ ಸೇರಿದ್ದೆಂದು ಹೇಳಲಾದ ಬೆಳ್ಳಿ ಸಾಮಗ್ರಿ ವಶ

ಈ ವೇಳೆ ಬಿಬಿಎಂಪಿಯ ಆರ್‌ಆರ್‌ನಗರ ಜಂಟಿ ಆಯುಕ್ತ ಡಾ.ನಾಗರಾಜ್‌, ಎಂಸಿಎಂಸಿ ತರಬೇತುದಾರ ಮೋಹನ್‌ ಕುಮಾರ್‌ ಸೇರಿದಂತೆ ಮೊದಲಾದವರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ