ಕಾಂಗ್ರೆಸ್ ಗೆ ಮುಖಂಡಗೆ ಒಲಿಯುತ್ತಾ ಮುಖ್ಯಮಂತ್ರಿ ಪಟ್ಟ..?

Published : Nov 22, 2018, 11:02 AM IST
ಕಾಂಗ್ರೆಸ್ ಗೆ ಮುಖಂಡಗೆ ಒಲಿಯುತ್ತಾ ಮುಖ್ಯಮಂತ್ರಿ ಪಟ್ಟ..?

ಸಾರಾಂಶ

ಇತ್ತೀಚೆಗೆ ಕಾಂಗ್ರೆಸ್‌ ವರಿಷ್ಠರ ಮುಖ್ಯಮಂತ್ರಿಯಾಗುವಂತೆ ಸೂಚನೆ ನೀಡಿದರೆ ನಾನು ಸ್ವಾಗತಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಇದಕ್ಕೆ ಇದೀಗ ಸ್ವತಃ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. 

ತುಮಕೂರು: ಮುಖ್ಯಮಂತ್ರಿ ಸ್ಥಾನ ನಿಭಾಯಿಸುವ ಸಾಮರ್ಥ್ಯ ಇದೆಯಾ ಎಂದು ಕೇಳಿದ್ದಕ್ಕೆ ಇದೆ ಅಂತ ಹೇಳಿದ್ದೇನೆಯೇ ಹೊರತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಇದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಈಗ ಏಕೆ ಮುಖ್ಯಮಂತ್ರಿ ಸ್ಥಾನದ ವಿಚಾರ ಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಪರಮೇಶ್ವರ್‌ ಅವರು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್‌ ವರಿಷ್ಠರು ನನಗೆ ಮುಖ್ಯಮಂತ್ರಿಯಾಗುವಂತೆ ಸೂಚನೆ ನೀಡಿದರೆ ನಾನು ಸ್ವಾಗತಿಸುತ್ತೇನೆ ಎಂದು ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೀವಾವಧಿ ಶಿಕ್ಷೆ ಪ್ರಸ್ತಾಪ, 10 ಕೋಟಿ ದಂಡ! Anti-Paper Leak ಮಸೂದೆಯಲ್ಲಿ 6 ಪ್ರಮುಖ ಬದಲಾವಣೆ!
Karnataka News Live: Gold Medal - ನಮ್ಮ ಬೀದರ್‌ಗೆ ಕೂಗಳತೆ ದೂರದ ಊರಿನ ಹೆಣ್ಣುಮಗಳು ಈಗ ದೇಶದ ಹೆಮ್ಮೆ; 21ರ ಹರೆಯದಲ್ಲೇ 'ಚಿನ್ನ' ಗೆದ್ದು ಮನು ಭಾಕರ್‌ರನ್ನೇ ಹಿಂದಿಕ್ಕಿದ ಗೋಲ್ಡನ್‌ ಗರ್ಲ್!