ಪಕ್ಷ ಬಿಡುವ ಗಂಡು ನಾನಲ್ಲ, ಇಲ್ಲೇ ಇದ್ದೀನಿ, ಟಿಕೆಟ್​ ಕೇಳ್ತೀನಿ: JDS ನಾಯಕನ ಖಡಕ್ ಮಾತು

Published : Feb 07, 2021, 03:03 PM ISTUpdated : Feb 07, 2021, 03:11 PM IST
ಪಕ್ಷ ಬಿಡುವ ಗಂಡು ನಾನಲ್ಲ, ಇಲ್ಲೇ ಇದ್ದೀನಿ,  ಟಿಕೆಟ್​ ಕೇಳ್ತೀನಿ: JDS ನಾಯಕನ ಖಡಕ್ ಮಾತು

ಸಾರಾಂಶ

ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆ ವೇಳೆ ಭಾರೀ ಸುದ್ದಿಯಾಗಿದ್ದ ಜೆಡಿಎಸ್ ನಾಯಕ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. 

ಮಂಡ್ಯ, (ಫೆ.07): ರಾಜ್ಯದಲ್ಲಿ ಮುಂಬರುವ ವಿಧಾನಸಭೆಗೆ ಜೆಡಿಎಸ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ. ವಲಯವಾರು ವೀಕ್ಷಕರನ್ನ ನೇಮಕ ಮಾಡಿಕೊಂಡು ಪಕ್ಷ ಸಂಘಟನೆಗೆ ಮುಂದಾಗಿದೆ.

ಇದರ ಮಧ್ಯೆ ನಾಗಮಂಗಲದ ಮುಂದಿನ ಜೆಡಿಎಸ್​ ಅಭ್ಯರ್ಥಿ ನಾನೇ ಎಂದು ಮಾಜಿ ಸಂಸದ ಎಲ್.ಆರ್​. ಶಿವರಾಮೇಗೌಡ ಬಹಿರಂಗವಾಗಿಯೇ ಹೇಳಿದ್ದಾರೆ.

ಪಕ್ಷದಿಂದ ದೂರ ಉಳಿದ ಜೆಡಿಎಸ್ ಶಾಸಕರ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು

ನಗರದಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮೇಗೌಡ, ನಾನು ಜೆಡಿಎಸ್‌ ಪಕ್ಷದಲ್ಲೇ ಇದ್ದೀನಿ. ಮುಂದೆಯೂ ಇರ್ತೀನಿ. ಕೆಲವರು ನನ್ನನ್ನ ಕಳಿಸ್ಬೇಕು ಅಂತ ನೋಡ್ತಿದ್ದಾರೆ. ಆದ್ರೆ, ಪಕ್ಷ ಬಿಡುವ ಗಂಡು ನಾನಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಎಲ್ಲಾ ಪಕ್ಷಗಳನ್ನೂ ನೋಡಿದ್ದೇನೆ. ನಾನು ಈ ಪಕ್ಷದಲ್ಲೇ ಇದ್ದೀನಿ, ಇಲ್ಲೇ ಟಿಕೆಟ್​ ಕೇಳ್ತೀನಿ. ಮುಂದಿನ ಚುನಾವಣೆಗೆ ನಾನೇ ಜೆಡಿಎಸ್​ ಪಕ್ಷದ ಅಭ್ಯರ್ಥಿ. ಒಂದು ವೇಳೆ ಜೆಡಿಎಸ್‌ನಿಂದ ಟಿಕೆಟ್​ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸೋದು ಖಚಿತ ಎಂದು ಖಂಡತುಂಡವಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!