
ಮೈಸೂರು (ಜು.15): ಮುಖ್ಯಮಂತ್ರಿ ಹುದ್ದೆ ರೇಸ್ನಲ್ಲಿ ನಾನಿಲ್ಲ. ನಾನು ಗೃಹ ಸಚಿವನಾಗಿಯೇ ಇರುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಸಿಎಂ ರೇಸ್ನಲ್ಲಿಲ್ಲ.
ನನಗೆ ಪಕ್ಷ ಈ ಜವಾಬ್ದಾರಿ ನೀಡಿದೆ. ನನಗೆ ಇಷ್ಟೇ ಸಾಕು. ಇದೂ ಕೂಡ ಹೈಕಮಾಂಡ್ ನೀಡಿರುವ ಜವಾಬ್ದಾರಿ. ನಾನು ಏನೋ ಹೇಳಿ, ನೀವು ಅದಕ್ಕೆ ಮತ್ತೆ ಇನ್ಯಾರದೋ ಪ್ರತಿಕ್ರಿಯೆ ಪಡೆಯುತ್ತೀರಿ’ ಎಂದರು.
ಸಾಲ ಪಡೆದು ರಾಜ್ಯಕ್ಕೆ ಜಿಎಸ್ಟಿ ಪರಿಹಾರ: ಕೇಂದ್ರದ ಭರವಸೆ
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಸದ್ದಾಗುತ್ತಲೇ ಇದ್ದು ಇದೀಗ ಇದಕ್ಕೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ನಾನು ಸಿಎಂ ಹುದ್ದೆ ಆಕಾಂಕ್ಷಿ ಅಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.