
ಬೆಂಗಳೂರು (ಆ.16): ಶಾಸಕರು ಮತ್ತು ಕಾರ್ಯಕರ್ತರ ಬೇಡಿಕೆಯಂತೆ ರಾಜ್ಯದ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಮುಂದಾಗಿದ್ದು, ಮೊದಲ ಹಂತದಲ್ಲಿ 30 ಶಾಸಕರನ್ನು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ. ಸರ್ಕಾರ ರಚನೆಯಾಗಿ ಮೂರು ತಿಂಗಳಾಗಿದ್ದು, ಸಚಿವ ಸ್ಥಾನ ವಂಚಿತ ಶಾಸಕರು ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ.
ಹೀಗಾಗಿ ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಶೀಘ್ರದಲ್ಲಿ ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿನ 80ಕ್ಕೂ ಹೆಚ್ಚಿನ ನಿಗಮ-ಮಂಡಳಿಗಳ ಪೈಕಿ 30 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ. ಅದರಲ್ಲಿ 22ರಿಂದ 25 ಮಂದಿ ವಿಧಾನಸಭೆ ಹಾಗೂ 5ರಿಂದ 7 ಮಂದಿ ವಿಧಾನಪರಿಷತ್ ಸದಸ್ಯರಾಗಿರಲಿದ್ದಾರೆ. ಇನ್ನು 15 ದಿನಗಳೊಳಗಾಗಿ ಅಧ್ಯಕ್ಷರ ಆಯ್ಕೆ ಅಂತಿಮಗೊಳಿಸಿ, ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲು ನಿರ್ಧರಿಸಲಾಗಿದೆ.
ಮುಂದಿನ ಶೈಕ್ಷಣಿಕ ವರ್ಷಕ್ಕೆ ಎನ್ಇಪಿ ರದ್ದು: ಸಿಎಂ ಸಿದ್ದರಾಮಯ್ಯ
ಕಾರ್ಯಕರ್ತರ ಆಯ್ಕೆಗೆ ಸಮಿತಿ: ಶಾಸಕರ ಆಯ್ಕೆ ನಂತರ ಉಳಿದ ನಿಗಮ-ಮಂಡಳಿಗಳಿಗೆ ಕಾಂಗ್ರೆಸ್ನ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಹಿಂದೆಯೇ ಘೋಷಿಸಿದಂತೆ ಕಾರ್ಯಕರ್ತರ ಆಯ್ಕೆಗಾಗಿ ಪ್ರತ್ಯೇಕ ಸಮಿತಿ ರಚಿಸಲಾಗುತ್ತದೆ. ಸಮಿತಿಯು ಪಕ್ಷಕ್ಕಾಗಿ ಶ್ರಮಿಸಿದ ಹಾಗೂ ಲೋಕಸಭೆ ಚುನಾವಣೆ ದೃಷ್ಟಿಯನ್ನಿಟ್ಟುಕೊಂಡು ಪಕ್ಷಕ್ಕೆ ಲಾಭವಾಗುವಂತಹ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಆಯ್ಕೆ ಮಾಡುತ್ತದೆ ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.