ಗ್ಯಾರಂಟಿಯಿಂದ ಆರ್ಥಿಕ ಭಾರ ಹೆಚ್ಚಳ: ಕಾಂಗ್ರೆಸ್‌ ಶಾಸಕ ರಾಯರೆಡ್ಡಿ

Published : Jan 08, 2024, 04:10 AM IST
ಗ್ಯಾರಂಟಿಯಿಂದ ಆರ್ಥಿಕ ಭಾರ ಹೆಚ್ಚಳ: ಕಾಂಗ್ರೆಸ್‌ ಶಾಸಕ ರಾಯರೆಡ್ಡಿ

ಸಾರಾಂಶ

ಜನರ ಹಿತಕ್ಕಾಗಿ ಮಾಡಿರುವುದರಿಂದ ಆಗಿರುವ ಆರ್ಥಿಕ ಹೊರೆಯನ್ನು ನಿಭಾಯಿಸಬೇಕಿದೆ. ಆದರೂ, ಈ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಏನು ಸುಧಾರಣೆ ಮಾಡಬೇಕು, ಏನೇನು ಬದಲಾವಣೆ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸುಧಾರಣೆ ತರುವುದು ಅಗತ್ಯವಾಗಿದೆ ಎಂದು ಹೇಳಿದ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ 

ಕೊಪ್ಪಳ(ಜ.08):  ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರುವುದರಿಂದ ಸಹಜವಾಗಿಯೇ ಆರ್ಥಿಕ ಭಾರ ಹೆಚ್ಚಾಗಿದೆ. ಹೀಗಾಗಿ, ಈ ಯೋಜನೆಗಳಲ್ಲಿ ಸುಧಾರಣೆ ತರುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು ₹58 ಸಾವಿರ ಕೋಟಿ ವೆಚ್ಚದ 5 ಗ್ಯಾರಂಟಿ ಯೋಜನೆಗಳನ್ನು ಸಡನ್ ಆಗಿ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿರುವುದರಿಂದ ಜನಪರ ಯೋಜನೆಗಳನ್ನು ರೂಪಿಸಿದ್ದಾರೆ. ಯಾರೂ ಸಹ ಹಸಿವಿನಿಂದ ಬಳಲಬಾರದು ಎಂದು ಯಾವುದೇ ಜಾತಿ, ಮತ, ಪಂಥದ ಭೇದವಿಲ್ಲದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಜನರ ಹಿತಕ್ಕಾಗಿ ಮಾಡಿರುವುದರಿಂದ ಆಗಿರುವ ಆರ್ಥಿಕ ಹೊರೆಯನ್ನು ನಿಭಾಯಿಸಬೇಕಿದೆ. ಆದರೂ, ಈ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಏನು ಸುಧಾರಣೆ ಮಾಡಬೇಕು, ಏನೇನು ಬದಲಾವಣೆ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸುಧಾರಣೆ ತರುವುದು ಅಗತ್ಯವಾಗಿದೆ ಎಂದು ಹೇಳಿದರು.

ಬಸವರಾಜ ರಾಯರೆಡ್ಡಿ ಬೊಕ್ಕಸಕ್ಕೆ ಹಣ ಸಂಗ್ರಹಿಸುವ ಬಗ್ಗೆ ಸಲಹೆ ನೀಡ್ತಾರೆ: ಗೃಹ ಸಚಿವ ಪರಂ

ತೆರಿಗೆ ಹೆಚ್ಚಳಕ್ಕೆ ಅವಕಾಶವಿಲ್ಲ:

ತೆರಿಗೆ ಹೆಚ್ಚಳ ಮಾಡುವುದಕ್ಕೆ ಅವಕಾಶಗಳು ಕಡಿಮೆ ಇವೆ. ಜಿಎಸ್‌ಟಿ ಕೇಂದ್ರ ವ್ಯಾಪ್ತಿಯಲ್ಲಿದೆ. ಇನ್ನು ಈಗಾಗಲೇ ಹಾಕುತ್ತಿರುವ ತೆರಿಗೆ ಗರಿಷ್ಠ ಮಟ್ಟ ತಲುಪಿದೆ. ಹೀಗಾಗಿ, ಹೆಚ್ಚಳ ಮಾಡುವುದು ಕಷ್ಟ. ಆದರೆ, ಇದರ ಹೊರತಾಗಿ ಆದಾಯ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದು ರಾಯರೆಡ್ಡಿ ತಿಳಿಸಿದರು.

ಆದಾಯ ಹೆಚ್ಚಳಕ್ಕೆ ರಾಜ್ಯಾದ್ಯಂತ ಅಕ್ರಮ ಲೇಔಟ್‌ಗಳ ಸಕ್ರಮ?

ಗೃಹ ನಿರ್ಮಾಣ ಮಂಡಳಿ ಸೇರಿದಂತೆ ನಗರ ಯೋಜನೆಯ ವ್ಯಾಪ್ತಿಯಲ್ಲಿರುವ ಲೇಔಟ್‌ಗಳ ಸಕ್ರಮ ಸೇರಿದಂತೆ ಹಲವಾರು ರೀತಿಯಲ್ಲಿ ಆದಾಯ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಸುಮಾರು ಶೇ.10ರಷ್ಟು ಆದಾಯ ಹೆಚ್ಚಳ ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ರಾಯರೆಡ್ಡಿ ಹೇಳಿದ್ದಾರೆ. ಜನರ ಮೇಲಿನ ತೆರಿಗೆ ಹೆಚ್ಚಳ ಮಾಡುವುದು ಕಷ್ಟ. ಇದರ ಹೊರತಾಗಿ ಆದಾಯಕ್ಕಾಗಿ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ