
ನವದೆಹಲಿ (ಮೇ.17): ದೇಶಕ್ಕೆ ಸಂಪತ್ತು ಸೃಷ್ಟಿ ಮಾಡುವವರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ. ಒಂದು ವೇಳೆ ಅವರಿಗೆ ನಾನೇದರೂ ಅಪ್ರಾಮಾಣೀಕ ರೀತಿಯಲ್ಲಿ ಲಾಭ ಮಾಡಿಕೊಟ್ಟು ವಂಚನೆ ಎಸಗಿದ್ದರೆ ನೇಣಿಗೇರಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘ಇಂಡಿಯಾ ಟುಡೇ’ ಸುದ್ದಿವಾಹಿನಿಗೆ ನೀಡಿದ ಸಂದರ್ಶನ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ದ ಉದ್ಯಮಿಗಳಿಗೆ ಮೋದಿ ಲಾಭ ಮಾಡಿಕೊಟ್ಟಿದ್ದಾರೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ‘ಹಿಂದೆ ನೆಹರೂ ಜೀ ಕೂಡಾ ಸಂಸತ್ತಿನಲ್ಲಿ ಬಿರ್ಲಾ- ಟಾಟಾ ಕೀ ಸರ್ಕಾರ್ ಎಂಬ ನಿಂದನೆ ಎದುರಿಸಬೇಕಾಗಿ ಬಂದಿತ್ತು. ಇದೀಗ ಗಾಂಧೀ ಕುಟುಂಬ ನಾನು ಕೂಡಾ ಅದೇ ರೀತಿಯ ನಿಂದನೆ ಎದುರಿಸಬೇಕು ಎಂದು ಬಯಸುತ್ತಿದೆ. ದೇಶಕ್ಕೆ ಸಂಪತ್ತು ಸೃಷ್ಟಿಸುವವರಿಗೆ ಗೌರವ ನೀಡಬೇಕು ಎಂದು ಹೇಳಲು ನನಗೇನೂ ನಾಚಿಕೆ ಇಲ್ಲ. ನಾವು ಸಾಧಕರ ಮೌಲ್ಯಗಳನ್ನು ಗೌರವಿಸದೇ ಹೋದಲ್ಲಿ ಯಾರು ವಿಜ್ಞಾನಿಗಳಾಗುತ್ತಾರೆ? ಯಾರು ಪಿಎಚ್ಡಿ ಪಡೆಯಲು ಮುಂದಾಗುತ್ತಾರೆ. ಸಮಾಜದ ಎಲ್ಲಾ ವಲಯಗಳ ಸಾಧಕರನ್ನೂ ನಾವು ಗೌರವಿಸಬೇಕು’ಎಂದು ಹೇಳಿದರು.
ದೇಶ ನಡೆಸೋದು ಮಕ್ಕಳಾಟ ಅಲ್ಲ: ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.