'ಈ ದೇಶದ ಕಾನೂನೇ ಸರಿಯಿಲ್ಲ' ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ್ದಕ್ಕೆ ಸಚಿವ ವೈದ್ಯ ಪ್ರತಿಕ್ರಿಯೆ

Published : Jul 01, 2023, 05:38 AM IST
'ಈ ದೇಶದ ಕಾನೂನೇ ಸರಿಯಿಲ್ಲ' ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ್ದಕ್ಕೆ  ಸಚಿವ  ವೈದ್ಯ ಪ್ರತಿಕ್ರಿಯೆ

ಸಾರಾಂಶ

ಈ ದೇಶದ ಕಾನೂನೇ ಸರಿಯಿಲ್ಲ. ದೇಶ ಕಾನೂನು ತಂದಿದೆ. ಆದರೆ ನ್ಯಾಯಾಲಯ ಅದನ್ನು ತಡೆ ಹಿಡಿದಿದೆ. ಸೂಕ್ತ ಕಾನೂನಿಲ್ಲದೇ ಪೊಲೀಸ್‌ ಇಲಾಖೆ ಸಹ ಅಸಹಾಯಕವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ವಿಷಾಧಿಸಿದರು.

ಕಾರವಾರ (ಜು.1) :  ಈ ದೇಶದ ಕಾನೂನೇ ಸರಿಯಿಲ್ಲ. ದೇಶ ಕಾನೂನು ತಂದಿದೆ. ಆದರೆ ನ್ಯಾಯಾಲಯ ಅದನ್ನು ತಡೆ ಹಿಡಿದಿದೆ. ಸೂಕ್ತ ಕಾನೂನಿಲ್ಲದೇ ಪೊಲೀಸ್‌ ಇಲಾಖೆ ಸಹ ಅಸಹಾಯಕವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ವಿಷಾಧಿಸಿದರು.

ನಗರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಮ್ಮ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಕುರಿತು ಐದು ಪ್ರಕರಣ ದಾಖಲಿಸಿದ್ದೇನೆ. ಏನೂ ಪ್ರಯೋಜನವಾಗಿಲ್ಲ. ಈ ದೇಶದ ಕಾನೂನು ಸರಿಯಿಲ್ಲ. ಪೊಲೀಸರಿಗೂ ಏನು ಮಾಡಲಾಗುತ್ತಿಲ್ಲ. ಕಾನೂನು ರೂಪಿಸಿರುವುದಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ಬಂದಿದೆ. ಹೀಗಾಗಿ ಅವರು ಸ್ವಲ್ಪ ಮುನ್ನುಗ್ಗಿದ್ದಾರೆ. ಏನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಅದಕ್ಕೆ ಕಡಿವಾಣ ಹಾಕುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Karnataka election 2023: ಜನತೆಯ ಮುಂದೆ ಬಿಜೆಪಿ ಅಸಲಿ ಬಣ್ಣ ಬಯಲು ಮಾಡುತ್ತೇವೆ: ಶಾಸಕ ಮಂಕಾಳ ವೈದ್ಯ

ಸಾಮಾಜಿಕ ಜಾಲಾತಾಣದಲ್ಲಿ ಕೆಟ್ಟದಾಗಿ ಟೀಕೆ ಮಾಡಿ ಸಮಾಜವನ್ನು ಹಾಳು ಮಾಡಿದ್ದಾರೆ. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು. ಸಾಮಾಜಿಕ ಜಾಲತಾಣದಲ್ಲಿ ಕಳ್ಳರ ರೀತಿ ಫೇಕ್‌ ಅಕೌಂಟ್‌ ಮಾಡಿಕೊಂಡು ತೇಜೋವಧೆ ಮಾಡುವವರಿಗೆ ಏನು ಹೇಳಬೇಕು ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಬಿಜೆಪಿಗೆ ಐದು ವರ್ಷ, ಕೇಂದ್ರದಲ್ಲಿ ಹತ್ತು ವರ್ಷ ಅಧಿಕಾರ ಜನರು ಕೊಟ್ಟಿದ್ದಾರೆ. ಆದರೆ ಏನೂ ಅಭಿವೃದ್ಧಿಯನ್ನು ಬಿಜೆಪಿ ಸರ್ಕಾರ ಮಾಡಲಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಮಾಡಬಾರದ್ದನ್ನೇ ಬಿಜೆಪಿ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಟೀಕೆ, ಅವಹೇಳನ ಮಾಡುವುದು ಅವರ ಕೆಲಸವಾಗಿದೆ. ಅವರ ಮನಸ್ಥಿತಿ ಸರಿಯಿಲ್ಲ. ಬೆಳಗ್ಗೆ ಒಂದು ಹೊತ್ತಾದರೂ ಬಿಜೆಪಿಗರು ದೇವಸ್ಥಾನಕ್ಕೆ ಹೋಗಬೇಕು ಎಂದು ಲೇವಡಿ ಮಾಡಿದರು.

Bhatkal Assembly Election: ಭಟ್ಕಳದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಬೆಂಬಲವಿಲ್ಲ, ತಂಜೀಮ್‌ ನಿರ್ಧಾರ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ