ಕೇರಳದಲ್ಲೂ ಕಾಂಗ್ರೆಸ್‌ನಿಂದ ಪಂಚ ಗ್ಯಾರಂಟಿ ಸ್ಕೀಂ ಭರವಸೆ

Kannadaprabha News   | Kannada Prabha
Published : Mar 08, 2026, 05:38 AM IST
congress

ಸಾರಾಂಶ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್‌, ಇದೀಗ ನೆರೆಯ ಕೇರಳದಲ್ಲೂ ಅದೇ ದಾಳ ಪ್ರಯೋಗಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು, ವಿದ್ಯಾರ್ಥಿನಿಯರು, ವೃದ್ಧರು, ಉದ್ಯಮಿಗಳನ್ನು ಗುರಿಯಾಗಿಸಿದ 5 ಯೋಜನೆ

ತಿರುವನಂತಪುರಂ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್‌, ಇದೀಗ ನೆರೆಯ ಕೇರಳದಲ್ಲೂ ಅದೇ ದಾಳ ಪ್ರಯೋಗಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು, ವಿದ್ಯಾರ್ಥಿನಿಯರು, ವೃದ್ಧರು, ಉದ್ಯಮಿಗಳನ್ನು ಗುರಿಯಾಗಿಸಿದ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಪಕ್ಷ ಘೋಷಿಸಿದೆ.

ಯುಡಿಎಫ್‌ ಮೈತ್ರಿ ಕೂಟದ ಭಾಗವಾಗಿರುವ ಕಾಂಗ್ರೆಸ್‌

ಕೇರಳದಲ್ಲಿ ಯುಡಿಎಫ್‌ ಮೈತ್ರಿ ಕೂಟದ ಭಾಗವಾಗಿರುವ ಕಾಂಗ್ರೆಸ್‌ ಈ ಘೋಷಣೆ ಮಾಡಿದೆ. ಶನಿವಾರ ಇಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್‌ ಗಾಂಧಿ ಪಂಚ ಗ್ಯಾರಂಟಿಗಳನ್ನು ಪ್ರಕಟಿಸಿದರು.

ಏನೇನು ಗ್ಯಾರಂಟಿ?:

ಕರ್ನಾಟಕದ ಶಕ್ತಿ ಯೋಜನೆಯಂತೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1 ಸಾವಿರ ರು., ವೃದ್ಧರು, ಅಂಗವಿಕಲರು, ವಿಧವೆಯರು ಸೇರಿದ ವಿವಿಧ ವರ್ಗದವರಿಗೆ ಕಲ್ಯಾಣ ಪಿಂಚಣಿ ಯೋಜನೆ ಮೊತ್ತ 1600 ರು.ನಿಂದ 3 ಸಾವಿರ ರು.ಗೆ ಏರಿಕೆ, ಮಾಜಿ ಸಿಎಂ ಊಮ್ಮನ್ ಚಾಂಡಿ ಹೆಸರಿನಲ್ಲಿ ಅರ್ಹ ಕುಟುಂಬಕ್ಕೆ 25 ಲಕ್ಷ ರು.ತನಕ ಆರೋಗ್ಯ ವಿಮೆ, ಸಣ್ಣ ಉದ್ದಿಮೆದಾರರಿಗೆ 5 ಲಕ್ಷ ರು. ತನಕ ಬಡ್ಡಿ ರಹಿತ ಸಾಲ ನೀಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಹಳಿ ತಪ್ಪಿದ ಆಡಳಿತ ಸರಿದಾರಿಗೆ ತರುವ ಜವಾಬ್ದಾರಿ ಪ್ರತಿಪಕ್ಷದ್ದು: ತಮ್ಮೇಶ್ ಗೌಡ
ಬೆಂಗಳೂರು ಜಿಬಿಎ ಚುನಾವಣೆಯಲ್ಲಿ ಮತ ಕಳವು ಬಗ್ಗೆ ಭಯ ಬಿಡಿ : ಬೈರತಿ ಸುರೇಶ್