ಪಂಚರಾಜ್ಯ ಎಲೆಕ್ಷನ್‌ಗೆ ₹3000 ಕೋಟಿ ನೀಡಲು ಸಿಎಂ, ಡಿಸಿಎಂಗೆ ಸೂಚನೆ: ಸಿ.ಟಿ.ರವಿ ಆರೋಪ

Published : Oct 16, 2023, 03:40 AM IST
ಪಂಚರಾಜ್ಯ ಎಲೆಕ್ಷನ್‌ಗೆ ₹3000 ಕೋಟಿ ನೀಡಲು ಸಿಎಂ, ಡಿಸಿಎಂಗೆ ಸೂಚನೆ: ಸಿ.ಟಿ.ರವಿ ಆರೋಪ

ಸಾರಾಂಶ

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ನಂ.1ಗೆ (ಮುಖ್ಯಮಂತ್ರಿ ಸಿದ್ದರಾಮಯ್ಯ) ಒಂದು ಸಾವಿರ ಕೋಟಿ ರು. ಮತ್ತು ನಂ.2ಗೆ (ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌) ಎರಡು ಸಾವಿರ ಕೋಟಿ ರು. ನೀಡಿ ಎಂಬ ಸೂಚನೆ ಕಾಂಗ್ರೆಸ್‌ ವರಿಷ್ಠರಿಂದ ಬಂದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

ಬೆಂಗಳೂರು (ಅ.16): ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ನಂ.1ಗೆ (ಮುಖ್ಯಮಂತ್ರಿ ಸಿದ್ದರಾಮಯ್ಯ) ಒಂದು ಸಾವಿರ ಕೋಟಿ ರು. ಮತ್ತು ನಂ.2ಗೆ (ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌) ಎರಡು ಸಾವಿರ ಕೋಟಿ ರು. ನೀಡಿ ಎಂಬ ಸೂಚನೆ ಕಾಂಗ್ರೆಸ್‌ ವರಿಷ್ಠರಿಂದ ಬಂದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ. ಕರ್ನಾಟಕವನ್ನು ಇವರು ಎಟಿಎಂ ಮಾಡಿಕೊಂಡಿದ್ದಾರೆ. ಹಿಂದೆ ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದ ಗುತ್ತಿಗೆದಾರ ಅಂಬಿಕಾಪತಿ ಈಗ ಕರೋಡ್‍ಪತಿಯಾಗಿದ್ದಾರೆ. ಅವರ ಮನೆಯಲ್ಲಿ 42 ಕೋಟಿ, ಇನ್ನೊಬ್ಬ ಬಿಲ್ಡರ್ ಕೇತಮಾರನಹಳ್ಳಿ ಸಂತೋಷ್ ಕೃಷ್ಣಪ್ಪ ಮನೆಯಲ್ಲಿ 40 ಕೋಟಿ ಸೇರಿದಂತೆ ಕೋಟಿ ಕೋಟಿ ಹಣ ಹೊರಗೆ ಬರುತ್ತಿದೆ. ಇವರಿಬ್ಬರೂ ರಾಜ್ಯದ ನಂ.1, ನಂ.2 ಅವರ ಬೇನಾಮಿಗಳು ಎಂಬ ಮಾಹಿತಿ ನಮಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ನಂ.1 ಮತ್ತು ನಂ.2ಗಳು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ನೂರಾರು ಬೇನಾಮಿಗಳನ್ನು ನೇಮಿಸಿದ್ದಾರೆ. ಈಗ ಇಬ್ಬರು ಬೇನಾಮಿಗಳು ಮಾತ್ರ ಸಿಕ್ಕಿದ್ದಾರೆ. ಈ ಹಣವೇ ಬೇನಾಮಿಗಳ ನೇಮಕಕ್ಕೆ ಸಾಕ್ಷಿ. ಕರ್ನಾಟಕವನ್ನು ಇವರು ಎಟಿಎಂ ಮಾಡಿಕೊಂಡಿದ್ದಾರೆ. ಹಿಂದೆ ಗೋವಿಂದರಾಜು ಅವರ ಡೈರಿ ಇದಕ್ಕೆ ಸಾಕ್ಷಿ ಆಗಿತ್ತು ಎಂದು ಉದಾಹರಣೆ ನೀಡಿದರು.

ಚೀನಾದ ಫೋಟೋಗಳನ್ನ ಶೇರ್ ಮಾಡಿದ Dr Bro: ನಕಲಿಗಳ ಮಧ್ಯೆ ನೀವು ಕನ್ನಡದ ಅಸಲಿ ಚಿನ್ನ ಎಂದ ಫ್ಯಾನ್ಸ್!

‘ಬ್ರ್ಯಾಂಡ್’ ಎಂದರೆ ಭ್ರಷ್ಟ ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕಿದವರೊಬ್ಬರು ಪಂಚ ರಾಜ್ಯಗಳ ಚುನಾವಣೆ ವೆಚ್ಚಕ್ಕೆ 2 ಸಾವಿರ ಕೋಟಿ ರು. ನೀಡುವುದಾಗಿ ಹೇಳಿದ ಮಾಹಿತಿ ಇದೆ. ಮುಖ್ಯಮಂತ್ರಿಗಳು ಕಷ್ಟಪಟ್ಟು ಅದರ ಅರ್ಧ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರಂತೆ. ಸತ್ಯವನ್ನು ಅವರೇ ಹೇಳಬೇಕು. ಇದನ್ನು ನೋಡಿದರೆ ಬ್ರ್ಯಾಂಡ್ ಬೆಂಗಳೂರು ಎಂದರೆ ಭ್ರಷ್ಟ ಬೆಂಗಳೂರು ಎಂದು ಅರ್ಥವಾಗುತ್ತದೆ. ಸಿಬಿಐ ತನಿಖೆ ನಡೆದರೆ ನಂ.1 ಮತ್ತು ನಂ.2 ಸಂಗ್ರಹಿಸಿದ ಮೊತ್ತದ ವಿವರ ಹೊರಬರುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ