
ಬೆಂಗಳೂರು(ಜು.14): 'ಮುಡಾ ನಿವೇಶನ ಹಂಚಿಕೆಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅಕ್ರಮ ನಡೆಸಿದ್ದು, ತಮ್ಮ ಕುಟುಂಬ ಸದಸ್ಯರಿಗೇ 48 ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಪರಿಷತ್ ಯಡಿಯೂರಪ್ಪ ಸಭಾಪತಿಗಳಿಗೆ ದಾಖಲೆ ಸಲ್ಲಿಸಿದ್ದರು. ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಈಗ ಒತ್ತಾಯಿಸುತ್ತದೆಯೇ?' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರರಾದ ರಮೇಶ್ ಬಾಬು, 'ಎಚ್.ಡಿ. ದೇವೇಗೌಡ ತಮ್ಮ ಕುಟುಂಬಕ್ಕೆ 48 ನಿವೇಶನ ಹಂಚಿಕೆ ಮಾಡಿರು ವುದಾಗಿ 2011ರಲ್ಲಿ ಅಂದಿನ ಸಿಎಂ ಯಡಿಯೂರಪ್ಪ ಅವರು ಪರಿಷತ್ ಸಭಾಪತಿಗಳಿಗೆ ದಾಖಲೆ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಎಚ್.ಡಿ. ಕುಮಾರ ಸ್ವಾಮಿ ಅವರಿಗೆ 300/200 (60,000 ಅಡಿ) ಹಂಚಿಕೆ ಮಾಡಿರುವುದಾಗಿ ಯಡಿಯೂರಪ್ಪ ಹೇಳಿದ್ದರು. ಇದು ಪರಿಷತ್ ನಡಾವಳಿಯಲ್ಲೂ ದಾಖಲಾಗಿದೆ. ಈ ಬಗ್ಗೆ ಬಿಜೆಪಿಯವರ ನಿಲುವೇನು' ಎಂದರು.
ಬೆನ್ನು ಬೆನ್ನಿಗೆ ಎರಡು ಕಂಟಕ.. ! ಅವಳಿ ಕಂಟಕದ ಸುಳಿಯಲ್ಲಿ ಸಿಲುಕಿದರಾ ಸಿಎಂ ಸಿದ್ದರಾಮಯ್ಯ?
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ರೂಪದಲ್ಲಿ ಭೂ ಮಾಲೀಕರಿಗೆ ನಿವೇಶನ ನೀಡಿರುವ ವಿರುದ್ಧ ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಆರೋಪಮಾಡುತ್ತಿದ್ದಾರೆ. ಆದರೆ ತಮ್ಮ ರಾಜಕೀಯ ಪ್ರಭಾವದ ಮೂಲಕ ಒಂದೇ ಕುಟುಂಬ 48 ನಿವೇಶನಗ ಳನ್ನು ಪಡೆದುಕೊಂಡ ಅಕ್ರಮ ಕುರಿತು ಬಿಜೆಪಿ ಚಕಾರ ಎತ್ತುತ್ತಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.