
ಮಂಡ್ಯ(ಡಿ.29): ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಳ್ತಾರಾ ಮಂಡ್ಯ ಸಂಸದೆ ಸುಮಲತಾ.!?. ಇಂತಹದೊಂದು ಪ್ರಶ್ನೆ ಇದೀಗ ಮಂಡ್ಯ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಹೌದು, ಬಿಜೆಪಿ ಫ್ಲೆಕ್ಸ್ಗಳಲ್ಲಿ ಸುಮಲತಾ ಭಾವಚಿತ್ರವಿದೆ. ನಾಳೆ ಬಿಜೆಪಿ ಬೃಹತ್ ಸಮಾವೇಶದ ಫ್ಲೆಕ್ಸ್ನಲ್ಲಿ ಸುಮಲತಾ ಅಂಬರೀಷ್ ಭಾವಚಿತ್ರವಿದ್ದು ಅಮಿತ್ ಶಾಗೆ ಸ್ವಾಗತದ ಫ್ಲೆಕ್ಸ್ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಫೋಟೋಇದೆ.
ಬಿಜೆಪಿ ಮುಖಂಡರೊಂದಿಗೆ ಸಂಸದೆ ಸುಮಲತಾ ಭಾವಚಿತ್ರ ಇದ್ದು, ಸಂಸದೆ ಸುಮಲತಾ ಅವರ ಆಪ್ತ ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್ನಲ್ಲಿ ಸುಮಲತಾ ಪೋಟೋ ಹಾಕಲಾಗಿದೆ.
KARNATAKA BJP: ಅಭ್ಯರ್ಥಿ ಆಯ್ಕೆ ಅಧಿಕಾರ ಸಚಿವರಿಗಿಲ್ಲ
ಸಂಸದೆ ಸುಮಲತಾ ಅವರ ಆಪ್ತ ಇಂಡವಾಳು ಸಚ್ಚಿದಾನಂದ ಈಗಾಗಲೇ ಬಿಜೆಪಿ ಸೇರಿದ್ದಾರೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಸಚ್ಚಿದಾನಂದ ಹೇಳಿದ್ದರು. ಇದೀಗ ಆಪ್ತ ಕೋರಿರುವ ಫ್ಲೆಕ್ಸ್ನಲ್ಲಿ ಸುಮಲತಾ ಅವರ ಫೋಟೋ ರಾರಾಜಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.