ಈಶ್ವರ ಖಂಡ್ರೆ ಕುಟುಂಬದಿಂದ ನಕಲಿ ಮನೆ ಪತ್ರ ವಿತರಣೆ: ಬಿಜೆಪಿ ಮುಖಂಡರ ಆರೋಪ

Published : Dec 07, 2022, 10:15 PM IST
ಈಶ್ವರ ಖಂಡ್ರೆ ಕುಟುಂಬದಿಂದ ನಕಲಿ ಮನೆ ಪತ್ರ ವಿತರಣೆ: ಬಿಜೆಪಿ ಮುಖಂಡರ ಆರೋಪ

ಸಾರಾಂಶ

ಶಾಸಕ ಈಶ್ವರ ಖಂಡ್ರೆ ಅವರು ವಸತಿ ಯೋಜನೆಯಡಿ ಹಂಚಕೆಯಾದ ಮನೆ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಮಾಡಿರುವ ಅಕ್ರಮ ಮುಚ್ಚಿ ಹಾಕಲು ಬಿಜೆಪಿ ನಾಯಕರು, ಪಕ್ಷ, ಸರ್ಕಾರದ ಮೇಲೆ ಗೂಬೆ ಕುಡಿಸುವ ಪ್ರಯತ್ನ ಮಾಡುತ್ತಿದ್ದಾರೆ: ಬಿಜೆಪಿ ಮುಖಂಡರು 

ಭಾಲ್ಕಿ(ಡಿ.07):  ವಸತಿ ಯೋಜನೆಯಡಿ ನಕಲಿ ವಸತಿ ಫಲಾನುಭವಿಗಳು, ಮುಗ್ಧ ಜನರನ್ನು ಸೇರಿಸಿ ಪ್ರತಿಭಟನೆ ನಡೆಸಿ ತಾವೊಬ್ಬ ಮೇಧಾವಿ ಶಾಸಕರಾಗಲು ಹೊರಟಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಈ ಕುರಿತು ತಾಲೂಕು ಬಿಜೆಪಿ ಕಚೇರಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಡಿಕೆ ಸಿದ್ರಾಮ ಹಾಗೂ ಪ್ರಕಾಶ ಖಂಡ್ರೆ ಅವರು ಸ್ಥಳೀಯ ಶಾಸಕ ಈಶ್ವರ ಖಂಡ್ರೆ ಅವರು ವಸತಿ ಯೋಜನೆಯಡಿ ಹಂಚಕೆಯಾದ ಮನೆ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಮಾಡಿರುವ ಅಕ್ರಮ ಮುಚ್ಚಿ ಹಾಕಲು ಬಿಜೆಪಿ ನಾಯಕರು, ಪಕ್ಷ, ಸರ್ಕಾರದ ಮೇಲೆ ಗೂಬೆ ಕುಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

2018ರ ವಿಧಾನ ಸಭೆ ಚುನಾವಣೆಯಲ್ಲಿ ಬೋಗಸ್‌ ವಸತಿ ಪತ್ರ ನೀಡಿ ಜನರನ್ನು ವಂಚಿಸಿ ಕುತಂತ್ರದಿಂದ ಗೆಲುವು ಸಾಧಿಸಿದ್ದಾರೆ. ಮಂಜೂರು ಆಗಿರುವ ವಸತಿ ಮನೆಗಳು ಕಾಂಗ್ರೆಸ್‌ ಕಾರ್ಯಕರ್ತರು, ಶ್ರೀಮಂತರಿಗೆ ಹಂಚಿಕೆ ಮಾಡಲಾಗಿದೆ. ತಮ್ಮ ಮನೆಯಲ್ಲಿಯೇ ಬೋಗಸ್‌ ಮನೆ ಪತ್ರ ಸೃಷ್ಟಿಸಿ ಬಡ ಜನರನ್ನು ವಂಚಿಸಲಾಗಿದೆ ಎಂದು ದೂರಿದರು.

ಡಿ.10ಕ್ಕೆ ಕಲಬುರಗಿಯಲ್ಲಿ ಖರ್ಗೆ ಅಭಿನಂದನಾ ಸಮಾರಂಭ: ಈಶ್ವರ ಖಂಡ್ರೆ

ರದ್ದಿ(ಹಳೆ) ಪೇಪರ್‌ ತರಹ ನಕಲಿ ವಸತಿ ಪತ್ರ ಹಂಚಿರುವ ಶಾಸಕರು ಇದೀಗ ಕಂತಿನ ಹಣ ಬಿಡುಗಡೆ ಮಾಡುವಂತೆ ಬಿಜೆಪಿ ಸರ್ಕಾರದ ಕಡೆಗೆ ಬೊಟ್ಟು ಮಾಡುತ್ತಿರುವುದು ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದರು. ಮಾಡುತ್ತಿರುವ ದ್ರೋಹ ಜನರಿಗೆ ತಿಳಿಸಲು ಅಂದು ಬಹಿರಂಗ ಸಭೆ ಮಾಡಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್‌ ನಡೆಸಿರುವ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಡಿ.ಕೆ.ಸಿದ್ರಾಮ ಅವರ ಭಾವಚಿತ್ರ ಬಳಸಿರುವುದಕ್ಕೆ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ಮಾಡಿರುವ ತಪ್ಪನ್ನು ಬಿಜೆಪಿ ಮುಖಂಡರ ಮೇಲೆ ಹೇರುತ್ತಿರುವುದಕ್ಕೆ ಕಿಡಿ ಕಾರಿದ್ದರು.

ಡಿ.16 ರಂದು ಪಟ್ಟಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಬೆಳಗ್ಗೆ 10ಕ್ಕೆ ಮಹಾತ್ಮ ಗಾಂಧಿ ವೃತ್ತದಲ್ಲಿ ಬಹಿರಂಗ ಸಭೆ ನಡೆಯಲಿದ್ದು ಜಿಲ್ಲಾ, ರಾಜ್ಯ ಮತ್ತು ಕೇಂದ್ರದ ಸಚಿವರು, ನಾಯಕರು ಭಾಗಿಯಾಗಲಿದ್ದಾರೆ. ಸಾವಿರಾರು ಜನ ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಡಾ.ದಿನಕರ ಮೋರೆ, ದಿಗಂಬರರಾವ ಮಾನಕಾರಿ, ಪಂಡಿತ ಶಿರೋಳೆ, ಸಂತೋಷ ಪಾಟೀಲ್‌ ಹಲ್ಸಿ ಹಾಜರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ