ರಾಜ್ಯ ಸರ್ಕಾರ ಬೀಳಿಸುವುದು ಅಸಾಧ್ಯ: ಎಚ್ಡಿಕೆಗೆ ಸಚಿವ ಎಂ.ಬಿ.ಪಾಟೀಲ್‌ ಸವಾಲು

Published : May 12, 2024, 07:23 AM IST
ರಾಜ್ಯ ಸರ್ಕಾರ ಬೀಳಿಸುವುದು ಅಸಾಧ್ಯ: ಎಚ್ಡಿಕೆಗೆ ಸಚಿವ ಎಂ.ಬಿ.ಪಾಟೀಲ್‌ ಸವಾಲು

ಸಾರಾಂಶ

ಕಾಂಗ್ರೆಸ್‌ ಸರ್ಕಾರ ಬೀಳಿಸುವುದು ಅಸಾಧ್ಯವಾದ ಮಾತು. ಸರ್ಕಾರ ಬೀಳಿಸಲು ಬಿಜೆಪಿ-ಜೆಡಿಎಸ್‌ನವರಿಗೆ 60 ಮಂದಿ ಶಾಸಕರು ಬೇಕು. ಅವರು ಇಬ್ಬರಿಂದ ನಾಲ್ಕು ಶಾಸಕರನ್ನು ಕರೆದುಕೊಂಡು ಬರಲಿ ಸಾಕು ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ. 

ಬೆಂಗಳೂರು (ಮೇ.12): ಕಾಂಗ್ರೆಸ್‌ ಸರ್ಕಾರ ಬೀಳಿಸುವುದು ಅಸಾಧ್ಯವಾದ ಮಾತು. ಸರ್ಕಾರ ಬೀಳಿಸಲು ಬಿಜೆಪಿ-ಜೆಡಿಎಸ್‌ನವರಿಗೆ 60 ಮಂದಿ ಶಾಸಕರು ಬೇಕು. ಅವರು ಇಬ್ಬರಿಂದ ನಾಲ್ಕು ಶಾಸಕರನ್ನು ಕರೆದುಕೊಂಡು ಬರಲಿ ಸಾಕು ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ. ಅಲ್ಲದೇ,  ಬಿಜೆಪಿಯ ಶಾಸಕರೇ ನಮ್ಮ‌ ಜೊತೆ ಇದ್ದಾರೆ. ಜೆಡಿಎಸ್‌ನಲ್ಲಿರುವವರು ಅತಂತ್ರರಾಗಿದ್ದಾರೆ. ಅವರ ನಾಯಕರೇ ನಮ್ಮನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಿ ಎಂದು ಕೇಳುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರದ್ದು ರಾಜಕೀಯ ಹೇಳಿಕೆಯಷ್ಟೇ ಎಂದು ಹೇಳಿದರು. 

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೇ ತಿಂಗಳುಗಳಲ್ಲಿ ಸರ್ಕಾರ ಬೀಳುತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಶುದ್ಧ ಸುಳ್ಳು. ಅವರು ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದರು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಕನಿಷ್ಠ 20 ಸ್ಥಾನ ಗೆಲ್ಲಲಿದೆ. ತಳಮಟ್ಟದಲ್ಲಿ ಊಹೆ ಮಾಡಲಾರದಷ್ಟು ಪ್ರಮಾಣದಲ್ಲಿ ಮಹಿಳೆಯರು, ಬಡ ಕುಟುಂಬದವರು ಕಾಂಗ್ರೆಸ್‌ಗೆ ಒಲವು ತೋರಿದ್ದಾರೆ. ವಿಜಯಪುರದಲ್ಲಿ ಒಂದು ಲಕ್ಷ ಲೀಡ್‌ನಲ್ಲಿ ನಾವು ಜಯ ಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ಗೆದ್ದರೆ ವಿಪಕ್ಷ ನಾಯಕರು ಜೈಲಿಗೆ: ಅರವಿಂದ ಕೇಜ್ರಿವಾಲ್‌ ಭವಿಷ್ಯ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೊಡ್ಡವರೇ ನಮ್ಮ ಹಿಂದೆ ಇದ್ದಾರೆ ಎಂಬ ದೇವರಾಜೇಗೌಡ ಹೇಳಿಕೆ‌ಗೆ, ‘ಈಗ ಎಸ್ಐಟಿ‌ ರಚನೆ ಆಗಿದೆ. ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸಲ್ಲ. ಆದರೆ ಪ್ರಜ್ವಲ್‌ ಪ್ರಕರಣವನ್ನು ಕುಮಾರಸ್ವಾಮಿ ಸಿಬಿಐಗೆ ಕೊಡಬೇಕು ಎಂದಿದ್ದಾರೆ. ಯಾಕೆ  ಕ್ಲೀನ್ ಚಿಟ್ ಕೊಡೋಕಾ? ಅಥವಾ ಪ್ರಜ್ವಲ್‌ನ ವಾಷಿಂಗ್ ಮೆಷಿನ್‌ಗೆ ಹಾಕೋಕಾ? ಎಂದು ಲೇವಡಿ ಮಾಡಿದರು. ಲೋಕಸಭೆ ಫಲಿತಾಂಶ ಬಳಿಕ ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಯಾವಾಗ ಏನು ಮಾಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದಷ್ಟೇ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!