Karnataka budget 2023: 'ಇದು ಅಭಿವೃದ್ಧಿ ವಿರೋಧಿ ಬಜೆಟ್' ಎಮ್ಮೆಲ್ಸಿ ಶಶಿಲ್ ನಮೋಶಿ

Published : Jul 08, 2023, 11:19 AM IST
Karnataka budget 2023: 'ಇದು ಅಭಿವೃದ್ಧಿ ವಿರೋಧಿ ಬಜೆಟ್' ಎಮ್ಮೆಲ್ಸಿ ಶಶಿಲ್ ನಮೋಶಿ

ಸಾರಾಂಶ

ಸಿದ್ದರಾಮಯ್ಯ ಬಜೆಟ್‌ ಕೇಂದ್ರ ಸರ್ಕಾರದವರ ಮೇಲೆ ಗೂಬೆ ಕೂರಿಸುವುದು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಿರುವ ಜನ ವಿರೋಧಿ ಬಜೆಟ್‌ ಎಂದು ಎಂಎಲ್‌ಸಿ ಶಶಿಲ್‌ ನಮೋಶಿ ಹೇಳಿದ್ದಾರೆ.

ಕಲಬುರಗಿ (ಜು.8) : ಸಿದ್ದರಾಮಯ್ಯ ಬಜೆಟ್‌ ಕೇಂದ್ರ ಸರ್ಕಾರದವರ ಮೇಲೆ ಗೂಬೆ ಕೂರಿಸುವುದು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಿರುವ ಜನ ವಿರೋಧಿ ಬಜೆಟ್‌ ಎಂದು ಎಂಎಲ್‌ಸಿ ಶಶಿಲ್‌ ನಮೋಶಿ(Shashil namoshi MLC) ಹೇಳಿದ್ದಾರೆ.

ಸಿದ್ದರಾಮಯ್ಯ ಬಜೆಟ್‌(Siddaramaiah Budget) ಹೇಳಿಕೆ ನೀಡಿರುವ ಅವರು, ಹಿಂದಿನ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಹಾಗೂ ಆರ್ಥಿಕ ನಿರ್ವಹಣೆ ಸರಿಯಾಗಿ ಮಾಡಿಲ್ಲ ಎಂದು ಹೇಳುತ್ತಿದ್ದಾರೆ, ಆರ್ಥಿಕ ನಿರ್ವಹಣೆ ಸರಿಯಾಗಿ ನಿರ್ವಹಣೆಯಾಗದಿದ್ದರೆ ಜಿಎಸ್‌ಟಿಯಲ್ಲಿ ರಾಜ್ಯ ಮುಂದಿರುತ್ತಿತ್ತೆ? ಎಂದು ಪ್ರಶ್ನಿಸಿದ್ದಾರೆ.

 

Karnataka budget 2023: ಸಿದ್ದರಾಮಯ್ಯ ಬಜೆಟ್‌ನಲ್ಲಿ ಹುಬ್ಬಳ್ಳಿಗೆ ದಕ್ಕಿದ್ದೇನು?

ಚುಣಾವಣೆಯಲ್ಲಿ ಹೇಳಿದಂತೆ ಮಹಾದಾಯ ಯೋಜನೆಗೆ ಹಾಗೂ ಮೇಕೆದಾಟಿಗೆ ಅನುದಾನವನ್ನು ನೀಡಲಾಗುವುದೆಂದು ಹೇಳಿದ್ದ ಕಾಂಗ್ರೆಸ್‌ ಈ ಕೆಲಸ ಮರೆತಿದೆ. ರಾಜಕೀಯ ಕಾರಣಕ್ಕಾಗಿಯೇ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊಕ್‌ ನೀಡಿದ್ದು ಖಂಡನೀಯ ಎಂದಿದ್ದಾರೆ.

ಪಠ್ಯಕ್ರಮ ವಿಚಾರದಲ್ಲಿನ ಸರ್ಕಾರದ ನಿಲುವು ಸರಿಯಾಗಿಲ್ಲ, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಂತೆ ರಾಜ್ಯ ಪಠ್ಯಕ್ರಮಗಳು ನಿರಂತರವಾಗಿ ಪರಾಮರ್ಶೆಗೊಳಗಾಗುತ್ತಿರುತ್ತದೆ. ಅದರ ಆಧಾರದಲ್ಲಿಯೇ ಪಠ್ಯವಸ್ತುಗಳು ರಚನೆಯಾಗಬೇಕಿರುತ್ತದೆ. ಇದನ್ನೆಲ್ಲ ಬಿಟ್ಟು ಕೋಮು ಆದಾರದಲ್ಲಿ ಪಟ್ಯ ಪರಾಮರ್ಶೆ ನಡೆಸುತ್ತಿರೋದು ಸರಿಯಲ್ಲವೆಂದೂ ನಮೋಶಿ ಹೇಳಿದ್ದಾರೆ.

 

ಹಫ್ತಾ ವಸೂಲಿಗೆ ಒತ್ತಡ: ಕಲಬುರಗಿಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಕಾನ್​ಸ್ಟೇಬಲ್​​ಗಳು

ಇಂದು ಮಂಡಿಸಲಾಗಿರುವ ಮುಂಗಡ ಪತ್ರ, ಬಜೆಟ್‌ ಭಾಷಣ ಎನ್ನುವುದಕ್ಕಿಂತ ಚುನಾವಣಾ ರಾಜಕೀಯ ಪ್ರಚಾರ ಭಾಷಣ. ತಮ್ಮ ಕೈಯಲ್ಲಿ ಆಗದೆ ಇದ್ದರು ಗ್ಯಾರಂಟಿ ಗಳನ್ನು ಘೋಷಣೆ ಮಾಡಿ ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕುಡಿಸುವ ನೀಚ ರಾಜಕಾರಣ ಸಿದ್ದರಾಮಯ್ಯ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ರೇಷ್ಮೆ ಇಲಾಖೆಯ ಸರ್ವತೋಮುಖ ಅಭಿವೃದ್ದಿಗಾಗಿ ಮುಂಗಡವಾಗಿ 2000 ಕೋಟಿ ರು. ಗಳನ್ನು ಮೀಸಲಿಡುತ್ತೇವೆ ಎಂದು ಸುಳ್ಳು ಹೇಳಿ ಈಗ ಕೇವಲ 200-250 ಕೋಟಿ ರು. ಅನುದಾನವನ್ನು ಮೀಲಸಲಿಸಲಾಗಿದೆ. ಬಜೆಟ್‌ನಲ್ಲಿ ಜನರ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡಿದ್ದಾರೆ ಇದೊಂದು ಜನ ವಿರೋಧಿ ಬಜೆಟ್‌ ಎಂದು ನಮೋಶಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌: ಬಿಜೆಪಿ ನಾಯಕರ ತೀವ್ರ ಆರೋಪ
ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ