
ಹುಬ್ಬಳ್ಳಿ (ಫೆ.01): ಮಾಜಿ ಸಿಎಂ ಜಗದೀಶ್ ಶೆಟ್ಟರಿಗೆ ಕಾಂಗ್ರೆಸ್ ಅಪಾರ ಗೌರವ ನೀಡಿತ್ತು. ಮುಂದೆ ಯೂ ಅವರನ್ನು ಗೌರವದಿಂದಲೇಕೊಳ್ಳುತ್ತಿತ್ತು.ನೋಡಿಹೀಗಾಗಿಅವರು ವಾಪಸ್ ಬಿಜೆಪಿಗೆ ಹೋಗಬಾರದಿತ್ತು ಎಂಬುದಷ್ಟೇ ನಮ್ಮ ನೋವು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಯಾವ ಪಕ್ಷದಲ್ಲಿದ್ದಾರೆ. ಆ ಪಕ್ಷಕ್ಕೆ ಶೆಟ್ಟರನ್ನು ಕರೆದುಕೊಂಡು ಹೋಗಿದ್ದಾರೆ. ನೋವು, ಅವಮಾನ ಮಾಡಿದ ಪಕ್ಷಕ್ಕೆ ಹೋಗುವ ಮುನ್ನ ಶೆಟ್ಟರ್ ವಿಚಾರ ಮಾಡಬೇಕಿತ್ತು ಎಂದರು.
ಲಕ್ಷಣ ಸವದಿ ಅವರು ಕಾಂಗ್ರೆಸ್ಸಿನಲ್ಲೇ ಇದ್ದಾರೆ, ಮುಂದೆಯೂ ಕಾಂಗ್ರೆಸ್ಸಿನಲ್ಲಿ ಇರುತ್ತಾರೆ ಎನ್ನುವ ಸಂಪೂರ್ಣ ನಂಬಿಕೆಯಿದೆ. ಏಕೆಂದರೆ, ಸವದಿಯವರೇ ನಾನು ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಅವರು ಏನು ಹೇಳುತ್ತಾರೆ, ಹಾಗೆಯೇ ನಡೆದುಕೊಳ್ಳುತ್ತಾರೆ. ಅವರ ಬಗ್ಗೆ ಸಂಶಯವಾಗಲಿ, ಅಪನಂಬಿಕೆಯಾಗಲಿ ಇಲ್ಲ ಎಂದು ಎಚ್ಚೆ ಸ್ಪಷ್ಟಪಡಿಸಿದರು. ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಬಿಜೆಪಿಗೆ ಸಹಿಸಲಾಗುತ್ತಿಲ್ಲ. ಹೇಗಾದರೂ ಮಾಡಿ ಜನರ ಗಮನ ಬೇರೆ ಸೆಳೆಯಲು ಧ್ವಜದಂತಹ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹತಾಶಗೊಂಡಿರುವ ಬಿಜೆಪಿಯವರು ಭಾವನಾತ್ಮಕ ವಿಷಯಗಳ ಮೇಲೆ ಏನಾದರೂ ಮಾಡಬೇಕೆಂದು ಹೊಸ ವಿವಾದಗಳನ್ನು ಹುಟ್ಟು ಹಾಕುತ್ತಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಸಮಸ್ಯೆ: ಆಯನೂರು ಮಂಜುನಾಥ್
ಬಿಜೆಪಿಯವರ ಉದ್ದೇಶ ಏನೆಂಬುದು ಜನರಿಗೆ ಅರ್ಥವಾಗುತ್ತದೆ. ಹೀಗಾಗಿ ಏನೇ ಗೊಂದಲ ಸೃಷ್ಟಿಸಿದರೂ ಬಿಜೆಪಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು. ಮಂಡ್ಯ ಧ್ವಜ ವಿಚಾರ ಇಟ್ಟುಕೊಂಡು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಭಟನೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಎಚ್.ಡಿ. ಕುಮಾರಸ್ವಾಮಿ ಅವರಿಗೆ ಯಾವುದೇ ತತ್ವ ಸಿದ್ದಾಂತ ಇಲ್ಲ. ಅಧಿಕಾರಕ್ಕಾಗಿ ತತ್ವ ಸಿದ್ದಾಂತಗಳಿಗೆ ತಿಲಾಂಜಲಿ ಇಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದ ಅವರು, ಮಂಡ್ಯ ಧ್ವಜ ವಿಚಾರದಲ್ಲಿ ಸರಕಾರಕ್ಕೆ ಏನು ವಿವಾದವಿಲ್ಲಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.